ಮಹಿಳೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ ಒಂದು ಮುಕ್ಕಾಲು ಕಿಲೋ.ಗ್ರಾಂ ಗಡ್ಡೆ!


Team Udayavani, Sep 22, 2021, 3:12 PM IST

dandeli news

ದಾಂಡೇಲಿ : ಮಹಿಳೆಯೊಬ್ಬರ ಹೊಟ್ಟೆಯೊಳಗಿದ್ದ ಒಂದು ಕೇಜಿ ಏಳುನೂರ ಐವತ್ತು ಗ್ರಾಂ ತೂಕದ ಗಡ್ಡೆಯನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿ ಪ್ರಾಣ ಉಳಿಸಿದ ಘಟನೆ ನಗರದ ಖ್ಯಾತ ಆಸ್ಪತ್ರೆಯಾದ ಪಾಟೀಲ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ 45 ವರ್ಷ ವಯಸ್ಸಿನ ಸರಸ್ವತಿ ಬೇಕವಾಡಕರ ಎಂಬವವರೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಹೊಟ್ಟೆ ನೋವೆಂದು ಸರಸ್ವತಿ ಬೇಕವಾಡಕರ ಅವರು ನಗರದ ಪಾಟೀಲ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯ ರೂವಾರಿಗಳು ಹಾಗೂ ಹೆಸರಾಂತ ವೈದ್ಯರಾದ ಡಾ: ಮೋಹನ ಪಾಟೀಲ ಅವರು ಸರಸ್ವತಿ ಬೇಕವಾಡಕರ ಅವರ ಆರೋಗ್ಯವನ್ನು ಪರಿಶೀಲಿಸಿ, ಗಡ್ಡೆಯಿರುವುದನ್ನು ತಿಳಿಸಿ, ಒಂದು ತಿಂಗಳ ಬಳಿಕ ಶಸ್ತ್ರಚಿಕಿತ್ಸೆಯ ಮೂಲಕ ಗಡ್ಡೆ ತೆಗೆಯೋಣ ಎಂದು ಹೇಳಿ, ಅಲ್ಲಿವರೆಗೆ ರಕ್ತ ಹೆಚ್ಚಾಗಕಲು ಮತ್ತು ಆರೋಗ್ಯ ಸುಧಾರಣೆಗಾಗಿ ಅಗತ್ಯ ಔಷಧಿಗಳನ್ನು ಹಾಗೂ ಚಿಕಿತ್ಸೆಯನ್ನು ನೀಡಿದ್ದರು.

ಒಂದು ತಿಂಗಳ ಬಳಿಕ ಇದೀಗ ಮಂಗಳವಾರ ಶಸ್ತ್ರಚಿಕಿತ್ಸೆಗಾಗಿ ಸರಸ್ವತಿ ಬೇಕವಾಡಕರ ಅವರು ಪಾಟೀಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬುಧವಾರ ಬೆಳಗ್ಗೆ ಎಂದಿನಿಂತೆ ಡಾ: ಮೋಹನ ಪಾಟೀಲ ಅವರು ಅವರ ತಂಡದ ಜೊತೆ ಶಸ್ತ್ರಚಿಕಿತ್ಸೆ ಕಾರ್ಯಕ್ಕೆ ಮುಂದಾದರು. ಆರಂಭದಲ್ಲಿ ನಗರದ ಖ್ಯಾತ ಅರವಳಿಕೆ ತಜ್ಞರಾದ ಡಾ:ಸೈಯದ್ ಅವರು ಅರವಳಿಕೆ ಚಿಕಿತ್ಸೆಯನ್ನು ನೀಡಿದರು. ಇದಾದ ಬಳಿಕ ಸ್ವಲ್ಪ ಹೊತ್ತಿನಲ್ಲೆ ಡಾ: ಮೋಹನ್ ಪಾಟೀಲ ಅವರು ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದರು. ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ಸರಸ್ವತಿ ಬೇಕವಾಡಕರ ಅವರ ಹೊಟ್ಟೆಯೊಗಿದ್ದ ಒಂದು ಕೇಜಿ ಏಳುನೂರ ಐವತ್ತು ಗ್ರಾಂ ತೂಕದ ಪೈಬ್ರಾಯಿಡ್ ಗಡ್ಡೆಯನ್ನು ಹೊರತೆಗದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿ ಮುಂದಾಗಬಹುದಾಗಿದ್ದ ಪ್ರಾಣಾಪಾಯವನ್ನು ತಪ್ಪಿಸಿದರು.

ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಇನ್ನೊಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಿ, ಆನಂತರದಲ್ಲಿ ಸರಸ್ವತಿ ಬೇಕವಾಡಕರ ಅವರನ್ನು ಅವರ ಮನೆಗೆ ಕಳುಹಿಸಲಾಗುತ್ತದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಶಸ್ತಚಿಕಿತ್ಸೆಗೆ ಡಾ. ಮೋಹನ ಪಾಟೀಲ ಅವರ ಜೊತೆ ಡಾ. ಸೈಯದ್ ಹಾಗೂ ಸಹಾಯಕರಾಗಿ ಈಶ್ವರ ಪೂಜಾರಿ ಮತ್ತು ನರ್ಸ್ ಹೃತಿಕಾ ಸಹಕರಿಸಿದರು. ಡಾ. ಮೋಹನ ಪಾಟೀಲ ಹಾಗೂ ಅವರ ತಂಡದ ಕಾರ್ಯಕ್ಕೆ ಸರಸ್ವತಿ ಬೇಕವಾಡಕರ ಅವರ ಪರಿವಾರದವರು ಮೆಚ್ಚುಗೆ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲೂ ದಲಿತ ಸಿಎಂ ಕೂಗು ಜೀವಂತ

ಕಳೆದ ಹಲವಾರು ವರ್ಷಗಳಿಂದ ಪಾಟೀಲ ಆಸ್ಪತ್ರೆಯನ್ನು ನಡೆಸಿಕೊಂಡು ಬರುತ್ತಿರುವ ಡಾ. ಮೋಹನ ಪಾಟೀಲ ಅವರು ಈವರೇಗೆ ಸಾಕಷ್ಟು ಇಂತಹ ಶಸ್ತ್ರಚಿಕಿತ್ಸೆಯನ್ನು ಮಾಡಿ ಅನೇಕರ ಪ್ರಾಣವನ್ನು ಉಳಿಸಿದ ಖ್ಯಾತಿಯನ್ನು ಹೊಂದಿದ್ದಾರೆ. ದಾಂಡೇಲಿ, ಹಳಿಯಾಳ, ಜೋಯಿಡಾ ಮಾತ್ರವಲ್ಲದೇ ಅಳ್ನಾವರ, ಬಿಡಿ, ಖಾನಪುರ, ಕಿರವತ್ತಿ, ನಿಗಧಿ, ಯಲ್ಲಾಪುರ ಕಡೆಗಳಿಂದಲೂ ಡಾ: ಮೋಹನ ಪಾಟೀಲರವರ ಬಳಿ ಚಿಕಿತ್ಸೆಗೆ ಜನ ಬರುತ್ತಿರುವುದು ಇವರ ಯಶಸ್ವಿ ಆರೋಗ್ಯ ಚಿಕಿತ್ಸೆಗೆ ಸಾಕ್ಷಿ ಎಂದರೆ ಅತಿಶಯೋಕ್ತಿ ಎನಿಸದು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.