ವದಂತಿಗಳಿಗೆ ಕಿವಿಗೊಡಬೇಡಿ,ಕೋವಿಡ್ ವ್ಯಾಕ್ಸಿನ್ ಅತ್ಯಂತ ಸುರಕ್ಷಿತ : ಜಿಲ್ಲಾಧಿಕಾರಿ
Team Udayavani, Feb 12, 2021, 7:24 PM IST
ಕಾರವಾರ : ಇಂದು ಕ್ರಿಮ್ಸ ಕಾರವಾರಕ್ಕೆ ಭೇಟಿ ನೀಡಿ ಕೋವಿಡ್ ವ್ಯಾಕ್ಸಿನ್ ನೀಡುವ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಹರೀಶ್ ಕುಮಾರ್, ತಾವು ಕೂಡಾ ಕೋವಿಡ್ ವ್ಯಾಕ್ಸಿನ್ ಪಡೆದುಕೊಳ್ಳುವ ಮೂಲಕ ಯಾವುದೇ ವದಂತಿಗಳಿಗೆ ಕಿವಿಗೊಡದೆ ವ್ಯಾಕ್ಸಿನ್ ಪಡೆಯಿರಿ ಎಂದು ಕರೆ ನೀಡಿದರು.
ಎಲ್ಲಾ ಮೂಂಚೂಣಿಯ ಕೋವಿಡ್ ವಾರಿಯರ್ಸಗಳು ಕೋವಿಡ್ ಲಸಿಕೆಯನ್ನು ಸ್ವಯಂ ಪ್ರೇರೇಪಿತರಾಗಿ ಪಡೆದುಕೊಳ್ಳಬೇಕೆಂದು ವಿನಂತಿಸಿದರು. ಕೋವಿಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಕೆಲ ಸಣ್ಣ ಪುಟ್ಟ ಸಾಮಾನ್ಯ ಅಡ್ಡ ಪರಿಣಾಮಗಳು ಕೆಲವರಲ್ಲಿ ಕಂಡು ಬಂದರೂ ಸಹ ಇದರಲ್ಲಿ ಯಾವುದೇ ಅಪಾಯವಿಲ್ಲ ಎಂದರು. ಲಸಿಕೆ ಪಡೆದುಕೊಳ್ಳಲು ಬಂದಿದ್ದ ಸಿಬ್ಬಂದಿಗಳಿಗೆ ಅವರು ಧೈರ್ಯ ತುಂಬಿದರು.
ಜಿಲ್ಲಾಧಿಕಾರಿಗಳ ಜೊತೆಗೆ , ಜಿಲ್ಲಾಧಿಕಾರಿಗಳ ಕಛೇರಿಯ ಸಿಬ್ಬಂದಿಗಳು ಕೂಡಾ ಲಸಿಕೆ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಕ್ರಿಮ್ಸ ನಿರ್ದೇಶಕರು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಕ್ರಿಮ್ಸನ ಬಹುತೇಕ ವೈದ್ಯರು ಹಾಜರಿದ್ದರು.
ಇದನ್ನು ಓದಿ :ಉಳಿದ ಶಾಲಾ ತರಗತಿ ಆರಂಭ ಕುರಿತು ಫೆ. 16ರಂದು ಸಭೆ : ಸಚಿವ ಸುರೇಶ್ ಕುಮಾರ್
ಜಿಲ್ಲಾಧಿಕಾರಿಗಳು ಲಸಿಕೆ ಪಡೆದುಕೊಳ್ಳವದನ್ನು ನೋಡಿ ಪ್ರೇರೇಪಿತರಾದ ಕ್ರಿಮ್ಸನ ನಿರ್ದೇಶಕರಾದ ಡಾ.ಗಜಾನನ ನಾಯಕ , ಈ ಹಿಂದೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೂ ಕೂಡಾ ಲಸಿಕೆಯನ್ನು ಸ್ಥಳದಲ್ಲಿ ಪಡೆದುಕೊಂಡಿರುವದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?