ಗಂಟೆ ಮುಂಚೆ ಪರೀಕ್ಷೆಗೆ ಹಾಜರಾಗಿ
Team Udayavani, Jun 12, 2020, 7:07 AM IST
ಕಾರವಾರ: ಕೋವಿಡ್ ಲಾಕ್ಡೌನ್ನಿಂದ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಜೂ.25 ರಿಂದ ಜು.4 ರವರೆಗೆ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಡಾ| ಹರೀಶಕುಮಾರ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್, ಕೈಗಳಿಗೆ ಸ್ಯಾನಿಟೈಸರ್ ಮಾಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭದ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬ ವಿದ್ಯಾರ್ಥಿ ಆರೋಗ್ಯ ತಪಸಣೆಗೆ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು, ಯಾವುದೇ ಆತಂಕಗಳಿಗೆ ಅವಕಾಶ ಮಾಡಿಕೊಡದೆ ಸಮರ್ಥವಾಗಿ ಪರೀಕ್ಷೆ ನಡೆಸಲು ಸಿದ್ಧರಿರಬೇಕೆಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಇಲಾಖಾ ಮಾರ್ಗದರ್ಶನದಂತೆ ಬೇರೆ ಜಿಲ್ಲೆಯ ಪರೀಕ್ಷಾ ಕೇಂದ್ರದಿಂದ ಆಗಮಿಸಿದ ಹೊಸದಾಗಿ ಪ್ರವೇಶ ಪತ್ರ ತರದೇ ಇರುವುದರಿಂದ, ಬಂದಿರುವ ಲಿಸ್ಟನ್ನು ಪರಿಶೀಲಿಸಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವಂತೆ ತಿಳಿಸಬೇಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು 200 ಮಾಸ್ಕ್ ಗಳನ್ನು ಇಟ್ಟುಕೊಳ್ಳಬೇಕು ಹಾಗೂ ಪ್ರತಿ ಕೊಠಡಿಯನ್ನು ಸ್ಯಾನಿಟೈಜೇಷನ್ ಮಾಡಬೇಕೆಂದು ತಿಳಿಸಿದರು.
ಪರೀಕ್ಷಾ ದಿನದಂದು ಕೇಂದ್ರದ ಸುತ್ತಮುತ್ತಲೂ 200 ಮೀಟರ್ ನಿಷೇಧ ಪ್ರದೇಶವೆಂದು ಘೋಷಿಸಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನೇಮಕೊಂಡ ಅಧಿಕಾರಿ ಹಾಗೂ ಸಿಬ್ಬಂದಿ ಹೊರತುಪಡಿಸಿ ಉಳಿದ ವ್ಯಕ್ತಿಗಳಿಗೆ ಪ್ರವೇಶ ನಿಷೇಧವಿರುತ್ತದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ಮಾತನಾಡಿ, ಕಾರವಾರದಲ್ಲಿ ಪರೀಕ್ಷಾ ಕೇಂದ್ರಗಳು 35+5 ಮತ್ತು ಶಿರಸಿಯಲ್ಲಿ 35 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗುತ್ತಿದೆ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರವಾರ ಡಿಡಿಪಿಐ ಹರೀಶ ಗಾಂವಕರ್ ಮತ್ತು ಶಿರಸಿ ಡಿಡಿಪಿಐ ದಿವಾಕರ ಶೆಟ್ಟಿ, ತಹಶೀಲ್ದಾರರು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ