ಗ್ರಾಮಸ್ಥರಿಗೆ ತಪ್ಪಲಿದೆ ಕಚೇರಿ ಅಲೆದಾಟ!


Team Udayavani, Feb 21, 2021, 5:51 PM IST

ಗ್ರಾಮಸ್ಥರಿಗೆ ತಪ್ಪಲಿದೆ ಕಚೇರಿ ಅಲೆದಾಟ!

ಭಟ್ಕಳ: ತಾಲೂಕಿನ ಹಿಂದುಳಿದ ಪ್ರದೇಶ ಹಾಡವಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಪ್ರಥಮ ಕಾರ್ಯಕ್ರಮಕ್ಕೆ ವೃದ್ಧೆಯೊಬ್ಬರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಹಲಿನ್‌, ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಎಂಬ ಗ್ರಾಮ ವಾಸ್ತವ್ಯಕಾರ್ಯಕ್ರಮ ಉತ್ತಮವಾದುದಾಗಿದೆ. ಜನತೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾಡಳಿತ, ಕಂದಾಯ ಇಲಾಖೆ, ಅಧಿಕಾರಿ ವರ್ಗ ಸಾರ್ವಜನಿಕರಿಂದತುಂಬಾ ದೂರದಲ್ಲಿದೆ ಎಂಬ ಮನೋಭಾವಜನಸಾಮಾನ್ಯರಲ್ಲಿದೆ. ಅದೂ ವಿಶೇಷವಾಗಿಈ ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಕಾರದಯಾವುದಾದರೂ ಯೋಜನೆಯ ಸೌಲಭ್ಯಸಿಗಬೇಕಾದರೆ ಜಿಲ್ಲಾ, ತಾಲೂಕು ಕೇಂದ್ರಕ್ಕೆಹೋಗಬೇಕಾದ ಪರಿಸ್ಥಿತಿಯಿದೆ. ಒಬ್ಬ ಸಾಮಾನ್ಯ ವ್ಯಕ್ತಿ ಹಾಡವಳ್ಳಿಯಿಂದ ಜಿಲ್ಲಾ ಕೇಂದ್ರ ಕಾರವಾರಕ್ಕೆ ಬರಲು ನೂರಾರುರೂ. ಖರ್ಚು ಮಾಡಿಕೊಂಡು ಸುಮಾರುನಾಲ್ಕು ಗಂಟೆ ಪ್ರಯಾಣ ಬೆಳೆಸಬೇಕಿದೆ. ಅದು ಸರಿಯಾಗಿ ಬಸ್ಸಿನ ವ್ಯವಸ್ಥೆ ಇರುವುದಿಲ್ಲ.ಇದೆಲ್ಲದರ ಮಧ್ಯೆ ಅವತ್ತಿನ ಖರ್ಚಿನ ಜೊತೆಗೆದುಡಿಮೆಯೂ ಹಾಳಾಗುತ್ತದೆ ಎಂದ ಅವರು,ಸರಕಾರಿ ಕಚೇರಿಗೆ ಜನರ ಅಲೆದಾಟ ತಪ್ಪಿಸಲು ಸರಕಾರ ಇಂತಹ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ. ತಿಂಗಳ ಮೂರನೇ ಶನಿವಾರ ಪೂರ್ಣದಿನ ಗ್ರಾಮದಲ್ಲಿದ್ದು, ಅಹವಾಲು ಕೇಳಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿಪ್ರಯತ್ನಿಸಲು ಇದೊಂದು ಅವಕಾಶವಾಗಿದೆ ಎಂದರು.

ಜನನ, ಮರಣ, ಜಾತಿ, ಆದಾಯ ಪ್ರಮಾಣ ಪತ್ರಗಳು ಸಿಗಬೇಕಾದರೆ ಜನಸಾಮಾನ್ಯರು ಸಾಕಷ್ಟು ಕಷ್ಟಪಡಬೇಕಾಗುತ್ತದೆ. ಆದ್ದರಿಂದ ಈ ವ್ಯವಸ್ಥೆಯನ್ನು ಇನ್ನಷ್ಟು ಸರಳಿಕರಣಗೊಳಿಸಲು ಕಂದಾಯ ಇಲಾಖೆ ಮುಂದಾಗಿದೆ. ಜೊತೆಗೆ ಮುಂಬರುವ ದಿನಗಳಲ್ಲಿ ಯಾವುದೇಅರ್ಜಿ ಹಾಕದೇ ತಂತ್ರಜ್ಞಾನದ ಮೂಲಕವೇಜನರಿಗೆ ಸರಕಾರಿ ಸೌಲಭ್ಯಗಳು ನೇರವಾಗಿದೊರೆಯುವಂತಹ ಕಾರ್ಯಕ್ರಮಗಳನ್ನ ಕಂದಾಯ ಇಲಾಖೆ ರೂಪಿಸುತ್ತಿದೆ. ಇದರಿಂದ ಸಾರ್ವಜನಿಕರ ಸರಕಾರಿ ಕಚೇರಿಗಳ ಅಲೆದಾಟ ತಪ್ಪಲಿದೆ ಎಂದು ತಿಳಿಸಿದರು.

ಈ ಜಿಲ್ಲೆಗೆ ಆಗಮಿಸಿದ ಬಳಿಕಪ್ರಥಮ ಕಾರ್ಯಕ್ರಮ ಇದಾಗಿದ್ದು, ಹಾಡವಳ್ಳಿಯಂತಹ ಹಳ್ಳಿಗೆ ಬಂದಿರುವದುಖುಷಿ ತಂದಿದೆ. ಸಾರ್ವಜನಿಕರ ಕೆಲಸ ಮಾಡಿಕೊಡಲು ಅಧಿಕಾರಿಗಳು ಪ್ರಾಮಾಣಿಕಪ್ರಯತ್ನ ಮಾಡಬೇಕು ಎಂದರು.ತಹಶೀಲ್ದಾರ ರವಿಚಂದ್ರ ಎಸ್‌. ಮಾತನಾಡಿ, ವಿನೂತನ ಕಾರ್ಯಕ್ರಮ ಇದಾಗಿದ್ದು,ಸರಕಾರ ಕಂದಾಯ ಇಲಾಖೆಯಡಿರೂಪಿಸಿರುವ ವಿವಿಧ ಸಾಮಾಜಿಕ ಭದ್ರತಾಯೋಜನೆಗಳನ್ನ ಗ್ರಾಮದ ಕಟ್ಟ ಕಡೆಯ ವ್ಯಕ್ತಿಗೆತಲುಪಿಸುವುದು ಇದರ ಉದ್ದೇಶವಾಗಿದೆ. ಈಉದ್ದೇಶದ ಈಡೇರಿಕೆಗೆ ಹಾಗೂ ವ್ಯಕ್ತಿಯ ಮನೆಬಾಗಿಲಿಗೆ ಸರಕಾರ ರೂಪಿಸಿದ ಯೋಜನೆಗಳನ್ನ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಹೀಗಾಗಿ ಗ್ರಾಮದ ಜನರು ಗ್ರಾಮ ವಾಸ್ತವ್ಯದ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಗ್ರಾಮಸ್ಥರು ವಿವಿಧ ಸಮಸ್ಯೆಗಳನ್ನು ಒಳಗೊಂಡ ಅಹವಾಲುಗಳನ್ನುಜಿಲ್ಲಾಧಿಕಾರಿಗಳಿಗೆ ನೀಡಿದರು. ಭಟ್ಕಳತಾಲೂಕಿನ ಸಹಾಯಕ ಆಯುಕ್ತ ಸಾಜಿದ್‌ ಅಹಮದ್‌ ಮುಲ್ಲಾ ಎಸಿಎಫ್‌ ಸುದರ್ಶನ,ತಾಪಂ ಇಒ ಪ್ರಭಾಕರ ಚಿಕ್ಕನಮನೆ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿಜನರು ಕಿಕ್ಕಿರಿದು ಸೇರಿದ್ದರು.

ಸಂಧ್ಯಾ ಸುರಕ್ಷಾ, ಅಂಗವಿಕಲ ವೇತನ, ವಿಧವಾ ವೇತನ, ಪಹಣಿ ಪತ್ರಿಕೆಯಲ್ಲಿನದೋಷಗಳು, ರಸ್ತೆ, ಮನೆ, ಸೇತುವೆ, ಅತಿಕ್ರಮಣ ಸಕ್ರಮ ಸೇರಿದಂತೆ ಹಲವು

ಸಮಸ್ಯೆಗಳ ಕುರಿತು ಜನರು ಜಿಲ್ಲಾಧಿಕಾರಿಗಳಿಗೆಅರ್ಜಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಅರ್ಜಿಸ್ವೀಕರಿಸಿ ದಾಖಲೆ ಪರಿಶೀಲಿಸಿ ಕೆಲವೊಂದಕ್ಕೆ ಸ್ಥಳದಲ್ಲೇ ಮಂಜೂರಾತಿ ನೀಡಿದರು. ಗ್ರಾಮವಾಸ್ತವ್ಯದ ವೇಳೆ ಅಂಗನವಾಡಿಯಲ್ಲೇಊಟ ಮಾಡಿದ ಜಿಲ್ಲಾಧಿಕಾರಿ ಮತ್ತುಅಧಿಕಾರಿಗಳ ತಂಡ ನಂತರ ಅಂಗನವಾಡಿ,ಶಾಲೆ ವೀಕ್ಷಿಸಿದ್ದಲ್ಲದೇ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿನೀಡಿದರು. ಸಾರ್ವಜನಿಕರಿಗಾಗಿ ಆರೋಗ್ಯಶಿಬಿರವನ್ನೂ ಏರ್ಪಡಿಸಲಾಗಿತ್ತು. ಗ್ರಾಮದಲ್ಲಿತ್ಯಾಜ್ಯ ವಿಲೇವಾರಿ ಘಟಕ, ಸ್ಮಶಾನ ಸ್ಥಾಪನೆಯ ಬಗ್ಗೆ ಚರ್ಚಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.