ಗೌರವಧನ ಹೆಚ್ಚಿಸಲು ಜಿಲ್ಲಾಡಳಿತಕ್ಕೆ ಆಗ್ರಹ

ಗ್ರಾಪಂ ಮುಖ್ಯ ಪುಸ್ತಕ ಬರಹಗಾರ್ತಿಯರಿಂದ ಜಿಪಂ ಸಿಇಒಗೆ ಮನವಿ

Team Udayavani, Apr 22, 2022, 9:56 AM IST

3

ಕಾರವಾರ: ಜಿಲ್ಲೆಯ ಗ್ರಾಪಂಗಳ ಮುಖ್ಯ ಪುಸ್ತಕ ಬರಹಗಾರ್ತಿಯರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ತಮ್ಮ ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಜಿಪಂ ಸಿಇಒ ಪ್ರಿಯಾಂಕಾಗೆ ಮನವಿ ಸಲ್ಲಿಸಿದರು.

ಮಹಿಳಾ ಸ್ವಸಹಾಯ ಸಂಘಗಳಿಗೆ ನೆರವು ನೀಡುವುದು ಹಾಗೂ ಸರ್ಕಾರದ ಯೋಜನೆಗಳಾದ ವಿಪಿ ಆರ್‌ಪಿ ಜಿಪಿಡಿಪಿ ಸರ್ವೇ ಕೆಲಸ ಮಾಡುವುದು, ಸ್ವತ್ಛ ಭಾರತ ಅಭಿಯಾನದಡಿ ಅರಿವು ಮೂಡಿಸುವ ಕೆಲಸವನ್ನು ಮುಖ್ಯ ಬರಹಗಾರ್ತಿಯಾರಾದ ನಾವು ಮಾಡುತ್ತಿದ್ದೇವೆ. ಮನೆ ಮನೆ ಅರಿವು ಕಾರ್ಯಕ್ರಮದ ಬಗ್ಗೆ ಮಹಿಳಾ ಸಂಘಗಳಿಗೆ ಮಾಹಿತಿ ನೀಡುವ ಮುಖ್ಯ ಪುಸ್ತಕ ಬರಹಗಾರ್ತಿಯರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಗೌರವ ಧನ ಹೆಚ್ಚಿಸಲು ಜಿಪಂ ಸಿಇಒಗೆ ಮನವಿ ಸಲ್ಲಿಸಿ, ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

ಜಿಲ್ಲೆಯ ಪ್ರತಿ ಗ್ರಾಪಂನಿಂದ ಆಗಮಿಸಿದ್ದ ಸಂಜೀವಿನಿ ಗ್ರಾಪಂ ಒಕ್ಕೂಟದಲ್ಲಿ ಕೆಲಸ ಮಾಡುವ ಮುಖ್ಯ ಪುಸ್ತಕ ಬರಹಗಾರ್ತಿಯರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಸಮವಸ್ತ್ರದಲ್ಲಿ ಏಕರೂಪತೆ ರೂಪಿಸಬೇಕು, ಗುರುತಿನ ಚೀಟಿ ಸೌಲಭ್ಯ ನೀಡಬೇಕು ಹಾಗೂ ತಿಂಗಳ ಗೌರವಧನವನ್ನು 15000 ರೂ.ಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. 300ಕ್ಕೂ ಹೆಚ್ಚು ಮುಖ್ಯ ಪುಸ್ತಕ ಬರಹಗಾರ್ತಿಯರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾಗಿ ಕೆಲಸ ಮಾಡುವವರು ಕಾರವಾರಕ್ಕೆ ಆಗಮಿಸಿ, ವಿವಿಧ ಬೇಡಿಕೆಗಳನ್ನು ಸರ್ಕರದ ಮುಂದಿಟ್ಟರು.

ಗ್ರಾಪಂ ಲೆಕ್ಕಪತ್ರ ಪುಸ್ತಕ ನಿರ್ವಹಿಸುತ್ತಿದ್ದು, ದಿನನಿತ್ಯದ ದಾಖಲಾತಿ ನಿರ್ವಹಣೆ ಸಹ ಮಾಡುತ್ತಿದ್ದೇವೆ. ಸ್ವಸಹಾಯ ಸಂಘಗಳ ಬಂಡವಾಳ ಮರುಪಾವತಿ ನಿಧಿ ನಿರ್ವಹಣೆ ಮಾಡುವುದರ ಜೊತೆಗೆ ಜೀವನೋಪಾಯ ನಿರ್ವಹಣೆ ಸಲಹೆಗಳನ್ನು ನೀಡುತ್ತಿದ್ದೇವೆ. ಗ್ರಾಪಂಗೆ ಸಂಜೀವಿನಿಯಂತೆ ಕೆಲಸ ಮಾಡುವ ನಮಗೆ ಕಡಿಮೆ ಗೌರವಧನ ನೀಡಲಾಗುತ್ತಿದೆ. ಇದನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಗೌರವ ಧನ ಹೆಚ್ಚು ಮಾಡುವ ಅಧಿಕಾರ ನನ್ನ ಬಳಿ ಇಲ್ಲ. ಇದು ಸರ್ಕಾರದ ಮಟ್ಟದಲ್ಲಿ ಆಗಬೇಕು. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳ ಗಮನ ಸೆಳೆಯುವೆ. ನಿಮ್ಮ ಬೇಡಿಕೆಯನ್ನು ಅವರಿಗೆ ತಿಳಿಸುವೆ. ವರ್ಷದ ರಜಾ ದಿನ ಬಿಟ್ಟು ಎಲ್ಲಾ ದಿನ ಪಂಚಾಯಿತಿಗಳಲ್ಲಿ ಕೆಲಸ ಮಾಡುವುದು ಗಮನಕ್ಕೆ ಬಂದಿದೆ. ಪಂಚಾಯಿತಿಯ ಎಲ್ಲಾ ಮಾಹಿತಿಗಳನ್ನು ಜನರಿಗೆ, ಸ್ವಸಹಾಯ ಸಂಘಗಳಿಗೆ ತಿಳಿಸಲು ಮೊಬೈಲ್‌ ಹಾಗೂ ನೆಟ್‌ ಪ್ಯಾಕ್‌ ಬಳಸುವುದು ಅನಿವಾರ್ಯ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ನಿಮ್ಮ ಬೇಡಿಕೆಗಳ ಕುರಿತು ಹಿರಿಯ ಅಧಿಕಾರಿಗಳಿಗೆ, ಇಲಾಖೆ ಎಂಡಿ ಹಾಗೂ ಕಾರ್ಯದರ್ಶಿಗಳ ಗಮನಕ್ಕೆ ತರುವೆನು ಎಂದು ಮುಖ್ಯ ಪುಸ್ತಕ ಬರಹಗಾರ್ತಿಯರಿಗೆ ಸಿಇಒ ಪ್ರಿಯಾಂಕಾ ಭರವಸೆ ನೀಡಿದರು.

ಜಿಲ್ಲೆಯ ಎಲ್ಲಾ 12 ತಾಲೂಕಿನಿಂದ ಪಂಚಾಯತ್‌ ಸಂಜೀವಿನಿ ಸದಸ್ಯರು ಆಗಮಿಸಿದ್ದರು.

ಹೇಮಾವತಿ ನಾಯ್ಕ, ಸವಿತಾ ನಾಯ್ಕ, ಭುವನೇಶ್ವರಿ ನಾಯ್ಕ, ಸವಿತಾ ಪಟಗಾರ, ಗೀತಾ ನಾಯಕ, ಸುಮಿತ್ರಾ ಹರಿಕಂತ್ರ, ಮಮತಾ, ಸಾವಿತ್ರಿ ಗೌಡ, ಮಂಗಲಾ ನಾಯ್ಕ, ರಮ್ಯ ಶೆಟ್ಟಿ, ನೇತ್ರಾವತಿ ಮುಕ್ರಿ, ನಿಖೀತಾ ಮಾಂಜ್ರೆàಕರ್‌, ಗ್ರೀಷ್ಮಾ ನಾಯ್ಕ, ಸಾಧನಾ, ಜ್ಯೋತಿ ದೇವಳಿ, ಮೋಹಿನಿ ನಾಯ್ಕ, ಭಾರತಿ, ಶ್ವೇತಾ, ವರ್ಷಾ, ಸುಜಾತಾ ಮುಂತಾದವರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.