ಜನಪ್ರತಿನಿಧಿಗಳ ನಿಲುವು ಸ್ಪಷ್ಟಪಡಿಸಲು ಆಗ್ರಹ


Team Udayavani, Oct 16, 2019, 3:01 PM IST

uk-tdy-2

ಹೊನ್ನಾವರ: ಜಿಲ್ಲೆಯ ಬಿಜೆಪಿ, ಕಾಂಗ್ರೆಸ್‌ ಶಾಸಕರು, ಸಂಸದರು ಅರಣ್ಯ ಭೂಮಿ ಸಾಗುವಳಿದಾರರ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸುತ್ತಿಲ್ಲ. ವಿಧಾನಸಭೆ, ಲೋಕಸಭೆಗಳಲ್ಲಿ ಸೊಲ್ಲೆತ್ತುತ್ತಿಲ್ಲ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಜನ ಬೀದಿಗಿಳಿದು ಪ್ರತಿಭಟನೆ ನಡೆಸಲು ತೊಡಗಿ ವಾರಕಳೆದಿದೆ.

ಜಾತಿ, ಧರ್ಮ, ಮೋದಿ ಹೆಸರಲ್ಲಿ ಮತ ಕೇಳಿದರು, ಮತ ಹಾಕಿದೆವು. ಇವರಿಂದ ಅಲ್ಲವಾದರೂ ರೈತಪರ ಹೋರಾಟಗಾರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಡವರ ಕುರಿತು ವಿಶೇಷ ಕಾಳಜಿ ಹೊಂದಿದ ಮೋದಿಯವರ ಸರ್ಕಾರದಿಂದ ತಮಗೆ ಭೂಮಿ ಹಕ್ಕು ದೊರೆಯಬಹುದು ಎಂದು ಆಸೆಯಿಂದಿರುವ ಜನರಿಗೆ ತೀವ್ರ ನಿರಾಸೆ ಉಂಟಾಗಿದೆ. ಈ ವರ್ಷದ ಮಳೆ 725 ಅತಿಕ್ರಮಣದಾರರ ಮನೆಯನ್ನು ತೊಳೆದುಕೊಂಡು ಹೋಗಿದೆ. 1830 ಹೆಕ್ಟೇರ್‌ ಭೂಮಿಯ ಬೆಳೆ ನಾಶವಾಗಿದೆ.

ಅವರಿಗೆ ಪರಿಹಾರವಿಲ್ಲ, ಮನೆ ಕಟ್ಟಿಕೊಳ್ಳಲು ಅರಣ್ಯ ಇಲಾಖೆ ಬಿಡುವುದಿಲ್ಲ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ, ಅರಣ್ಯ ಹಕ್ಕು ಕಾಯಿದೆಯಡಿ ಮಂಜೂರಿಗೆ ಸಂಬಂಧಪಟ್ಟಂತೆ ಪುನರ್‌ ಪರಿಶೀಲನಾ ವಿಧಾನವನ್ನು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಬುಡಕಟ್ಟು ಮಂತ್ರಾಲಯ ಸೂಚಿಸಿದ ಮಾರ್ಗಸೂಚಿಯಂತೆ ನಿರ್ದಿಷ್ಟ ಕಾಲಮಾನದೊಳಗೆ ಮಂಜೂರಿ ಪ್ರಕ್ರಿಯೆಯನ್ನು ಯಾಕೆ ಜರುಗಿಸುತ್ತಿಲ್ಲ ಎಂಬ ಪ್ರಶ್ನೆಗೆ ಮೌನವೇ ಉತ್ತರ.

ಜಿಲ್ಲೆಯ 14 ಲಕ್ಷ ಜನರಲ್ಲಿ ಬದುಕಲು ಬೇರೆ ಗತಿ ಕಾಣದೆ ಸುಮಾರು 1ಲಕ್ಷ ಕುಟುಂಬಗಳ ಜನ 30ಸಾವಿರ ಹೆಕ್ಟೇರ್‌ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಿಕೊಂಡಿದ್ದಾರೆ. ಸರ್ಕಾರದ, ಜನಪ್ರತಿನಿಧಿಗಳ ಗಮನಕ್ಕೆ ತಾರದೆ ಅಭಯಾರಣ್ಯದ ಘೋಷಣೆಯಾಗಿದೆ. ಭಟ್ಕಳ, ಕುಮಟಾ ಶಾಸಕರು ಮಾನವೀಯ ದೃಷ್ಟಿಯಿಂದ ಅತಿಕ್ರಮಣದಾರರ ಪ್ರತಿನಿಧಿಗಳನ್ನು ಕಂಡು ಬೆಂಬಲ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳವರೆಗೆ ಕರೆದೊಯ್ದು ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಅಭಿಪ್ರಾಯ ಪ್ರಕಟವಾಗಿಲ್ಲ. ವಿಧಾನಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಭಯಾರಣ್ಯ ಪ್ರಕಟಣೆ ಸರಿಯಲ್ಲ ಎಂದು ಹೇಳಿದ್ದಾರೆ. ಕೇಂದ್ರ, ರಾಜ್ಯ ಅರಣ್ಯ ಸಚಿವರಿಗೆ ವಿಷಯ ತಿಳಿದಿದೆಯೋ ಇಲ್ಲವೋ ಗೊತ್ತಿಲ್ಲ. ಇನ್ನೆಷ್ಟು ವರ್ಷ ನಾವು ಕಾಯಬೇಕು ಎಂದು ಜನ ಕೇಳುತ್ತಿದ್ದಾರೆ.

ಭೂಮಿ ಸಾಗುವಳಿಯ ಹಕ್ಕು ಕೊಡಿ, ಇಲ್ಲವಾದರೆ ಬೇರೆ ಉದ್ಯೋಗ ಕೊಡಿ, ಮನೆಕೊಡಿ, ನಮಗೂ ಯಾವುದೇ ಮೂಲ ಸೌಲಭ್ಯವಿಲ್ಲದ ಕಾಡಿನಲ್ಲಿ ಉಳಿಯುವ ಮನಸ್ಸಿಲ್ಲ ಎನ್ನುತ್ತಿದ್ದಾರೆ. ಏನಾದರೂ ಒಂದು ತೀರ್ಮಾನಕ್ಕೆ ಸರ್ಕಾರ ಬರಬೇಕು. ಮೂರು ದಶಕಗಳಿಂದ ಜನ ಅರ್ಜಿಸಲ್ಲಿಸಿ, ಮೆರವಣಿಗೆ ಮಾಡಿ, ಪ್ರತಿಭಟಿಸಿ ದಣಿದಿದ್ದಾರೆ. ಅರಣ್ಯ ಇಲಾಖೆ ಮೇಲೆ ಬೇರೆ ಒತ್ತಡವಿದೆ. ಪೊಲೀಸ್‌ ಬಲದಿಂದ ಒಕ್ಕಲೆಬ್ಬಿಸಿದ ಘಟನೆಗಳು

ನಡೆದಿವೆ. ಜಿಲ್ಲೆಯಲ್ಲಿ ಹುಟ್ಟಿ ಬೆಳೆದವರು ಹೊಟ್ಟೆಪಾಡಿಗೆ ಇನ್ನೆಲ್ಲಿ ಹೋಗಬೇಕು ಎಂಬುದು ಜನರ ಪ್ರಶ್ನೆ. ರವೀಂದ್ರನಾಥ ನಾಯ್ಕ ನಿರಂತರ ಹೋರಾಟ ನಡೆಸಿದ್ದಾರೆ. ಹೋರಾಟಗಾರ ಕಲ್ಕುಳಿ ವಿಠಲ ಹೆಗಡೆ ಪ್ರವೇಶವಾಗಿದೆ. ಅಳಿವು ಉಳಿವಿನ ಪ್ರಶ್ನೆ ಎದುರಾದಾಗ ಏನೂ ಆಗಬಹುದು. ನಮಗೆ ಏನಾದರೂ ನಿರ್ಣಯ ಕೊಡಲಿ, ಕಾಯಿಸುವುದು ಸಾಯಿಸುವುದಕ್ಕಿಂತ ಹೆಚ್ಚಿನ ಸಂಕಟ ಕೊಡುತ್ತದೆ ಅನ್ನುತ್ತಾರೆ ಜನ. ಯಾಕೆ ಜನಪ್ರತಿನಿಧಿಗಳ ಈ ಮೌನ ?

 

ಜೀಯು, ಹೊನ್ನಾವರ

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.