ಗೆಲುವಿಗಾಗಿ ದೇಶಪಾಂಡೆ ಶತಚಂಡಿ ಹೋಮ
Team Udayavani, Apr 30, 2018, 7:30 AM IST
ಹಳಿಯಾಳ: ಪಟ್ಟಣದ ಪ್ರಸಿದ್ಧ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಕುಟುಂಬದವರು ಶತಚಂಡಿ ಹೋಮ ನೆರವೇರಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಬಂದ 25 ಪುರೋಹಿತರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಮೂರು ದಿನಗಳಿಂದ ಗಣಪತಿ ಹೋಮ, ನವಗ್ರಹ ಹೋಮ, ಸಚಿವರ ಕುಲದೇವತೆ ತುಳಜಾಭವಾನಿ ದೇವಿ ಹೋಮ ಸೇರಿ ಶತಚಂಡಿ ಹೋಮ ನೆರವೇರಿಸಲಾಯಿತು.
ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಚಿವ ಆರ್.ವಿ.ದೇಶಪಾಂಡೆ, ಪತ್ನಿ ರಾಧಾಬಾಯಿ, ಮಕ್ಕಳಾದ ಪ್ರಶಾಂತ ಹಾಗೂ ಪ್ರಸಾದ ದೇಶಪಾಂಡೆ ಪಾಲ್ಗೊಂಡಿದ್ದರು. 1983ರಿಂದ ಸತತ ಗೆಲುವು ಸಾಧಿ ಸುತ್ತಾ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ದೇಶಪಾಂಡೆ, 7ನೇ ಬಾರಿ ಸ್ಪರ್ಧಿಸಿದಾಗ 2008ರಲ್ಲಿ ಸೋಲು ಕಂಡಿದ್ದರು. ಬಳಿಕ 2013ರಲ್ಲಿ ಮತ್ತೆ 8ನೇ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆಗ ಅವರ ಕುಲದೇವರಾದ ತುಳಜಾಭವಾನಿ ದೇವಸ್ಥಾನದಲ್ಲಿ ಹೋಮ ನೆರವೇರಿಸಲಾಗಿತ್ತು. ಈಗ ಮತ್ತೆ 9ನೇ ಬಾರಿ ಸ್ಪರ್ಧಿಸಿರುವ ದೇಶಪಾಂಡೆ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು ಎಲ್ಲಿಲ್ಲದ ಕಸರತ್ತು ನಡೆಸಿದ್ದು ದೇವರ ಮೊರೆ ಕೂಡ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?