ಹದಗೆಟ್ಟ ಹೆದ್ದಾರಿ: ಪ್ರಯಾಣಿಕರ ಪ್ರಯಾಸ


Team Udayavani, Dec 18, 2019, 2:41 PM IST

uk-tdy-1

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ವಿಶೇಷವಾಗಿ ಯಲ್ಲಾಪುರ ಮಾಗೋಡ ಕ್ರಾಸ್‌ನಿಂದ ಅರಬೈಲ್‌ ವರೆಗೆ ಮತ್ತು ಹೆಚ್ಚಿನದಾಗಿ ಘಟ್ಟ ಮತ್ತು ತಿರುವು ಪ್ರದೇಶದಲ್ಲಿ ಸಂಪೂರ್ಣ ಹದಗೆಟ್ಟಿದ್ದು ಇದು ಹೆದ್ದಾರಿಯೋ ಅಥವಾ ಕಂದಕದೊಳಗೆ ಕಾಲುವೆಯೊಳಗೇ ದಾರಿಯೋ ಎನ್ನುವ ಸ್ಥಿತಿಯಾಗಿದ್ದು ಹೆದ್ದಾರಿ ಮೂಲಕ ಸಂಚಾರ ಸಂಚಕಾರ ತರುತ್ತಿದ್ದುದಲ್ಲದೇ ಓಡಾಡುವ ಜನತೆ ನಿತ್ಯ ಸಮಸ್ಯೆ ಎದುರಿಸುತ್ತ ಶಪಿಸುತ್ತ ಸಾಗಬೇಕಿದೆ.

ಹೆದ್ದಾರಿ 63ರ ಆರತಿಬೈಲ್‌ ಘಟ್ಟ ಪ್ರದೇಶದಲ್ಲಿ ಕಳೆದ ಜೂನ್‌ನಲ್ಲಿಯೇ ಹದಗೆಟ್ಟಿದೆ. ಮೇ ಕೊನೇ ಇಲ್ಲವೇ ಜೂನ್‌ ಪ್ರಾರಂಭದ ವೇಳೆಗೆ ಮರು ಡಾಂಬರೀಕರಣ ಮಾಡುತ್ತಾರೆ. ನಂತರ ಪ್ರಾರಂಭವಾಗುವ ಮಳೆಗೆ ತೊಳೆದು ಹೋಗುತ್ತದೆ. ಇದು ವರ್ಷದ ಮಾಮೂಲಿಯಾಗಿದೆ. ಒಂದೆರೆಡು ಕಡೆ ಇಲ್ಲಿ ಅಪಾಯಕಾರಿ ತಿರುವುಗಳನ್ನು ಹೊಂದಿದೆ. ಇಲ್ಲಿ ನಿತ್ಯವೂ ಅಪಘಾತಗಳು ಸಾಮಾನ್ಯವಾಗಿದೆ. ಈ ಪ್ರದೇಶದಲ್ಲಿ ಹೆದ್ದಾರಿ ಹದಗೆಟ್ಟು ಸಂಪೂರ್ಣ ಕೊರಕಲು ಬಿದ್ದಿದೆ. ಹಳ್ಳದಲ್ಲಿ ಸರ್ಕಸ್‌ ಮಾಡಿ ವಾಹನ ಚಲಾಯಿಸಿದ ಅನುಭವವಾಗುತ್ತದೆ.

ದ್ವಿಚಕ್ರ ವಾಹನ ಸವಾರರಂತೂ ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸಬೇಕಾಗಿದೆ. ಸ್ವಲ್ಪ ಆಯ ತಪ್ಪಿದರೂ, ಅಪಾಯ ಗ್ಯಾರಂಟಿ. ಆದರೂ ಕನಿಷ್ಠ ನಿರ್ವಹಣೆ ಬಗೆಗೂ  ಹೆದ್ದಾರಿ ಇಲಾಖೆ ಮುತುವರ್ಜಿ ವಹಿಸದೇ ನಿರ್ಲಕ್ಷé ತಾಳಿದೆ. ಮಡಿದ ಕೆಲಸವನ್ನೂ ಕಳಪೆಯಾಗಿ ಮಡುವುದಲ್ಲದೇ ಸಕಾಲಕ್ಕೆ ಮಾಡದೇ ಕಾಟಾಚಾರಕ್ಕೆ ಕಳೆದ ಎಂಟತ್ತು ವರ್ಷಗಳಿಂದ ಮಾಡಿದಲ್ಲೇ ಕಾಮಗಾರಿ ಮಾಡುತ್ತಿದೆ.

ಹಾಳಾದ ಹೆದ್ದಾರಿ ಡಾಂಬರೀಕರಣ ಮಾಡಿ ದುರಸ್ತಿಪಡಿಸಲು ಅನುದಾನ ನೀಡುವಂತೆ ಹೆದ್ದಾರಿ ಇಲಾಖೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುತ್ತಿದೆ. ಆದರೆ ಅದರ ಕಡತದ ಬಗ್ಗೆ ನಿಗಾವಹಿಸಿ ಲಾಬಿ ಮಾಡಿ ಈ ಜಿಲ್ಲೆಯ ಹೆದ್ದಾರಿ ನಿರ್ವಹಣೆಗೆ ಉತ್ತರ ಕನ್ನಡದ ಜನಪ್ರತಿನಿಧಿಗಳಿಂದ ಕೇಂದ್ರ ಮಟ್ಟದಲ್ಲಿ ಅನುದಾನ ತರುವಲ್ಲಿ ಸಾಧ್ಯವಾಗುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದ್ದು ಹಂಚಿಕೆ ಸಂದರ್ಭದಲ್ಲಿ ಬೇರೆ ಭಾಗದ ಜನಪ್ರತಿನಿಧಿಗಳು ಈ ತರಹದ ಅನುದಾನವನ್ನು ಸರಾಗವಾಗಿ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿಯಿದೆ. ಘಟ್ಟ ಪ್ರದೇಶದಲ್ಲಿ ಪ್ರತಿವರ್ಷ ರಸ್ತೆ ಹಾಳಾಗುತ್ತಿದ್ದು, ತೇಪೆ ಹಾಕುವ ಕಾರ್ಯ ಮಾಡಲಾಗುತ್ತದೆ. ಕಾಮಗಾರಿ ಕಳಪೆತನವೋ ಅಥವಾ ಇಳಿಜಾರಿನ ಪ್ರದೇಶದಲ್ಲಿ ವಾಹನಗಳ ಒತ್ತಡದಿಂದ ಹೀಗೆ ಆಗುತ್ತಿದೆಯೋ ಗೊತ್ತಿಲ್ಲ. ಆದರೆ ರಸ್ತೆ ಹಾಳಾಗಿ ಜನ, ವಾಹನಗಳು ಸಂಕಷ್ಟ ಪಡುವುದು ಮಾತ್ರ ತಪ್ಪುತ್ತಿಲ್ಲ. ಅರಬೈಲ್‌ದಿಂದ ಯಲ್ಲಾಪುರದವರೆಗೆ ಡಾಂಬರೀಕರಣ ಮಾಡಲು ಅನುದಾನಕ್ಕೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎನ್ನುತ್ತಾರೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು.

 

-ನರಸಿಂಹ ಸಾತೊಡ್ಡಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.