ಅಭಿವೃದ್ಧಿಗೆ ಕೋವಿಡ್‌ ನೆಪ ಬೇಡ


Team Udayavani, Jun 21, 2020, 6:49 AM IST

ಅಭಿವೃದ್ಧಿಗೆ ಕೋವಿಡ್‌ ನೆಪ ಬೇಡ

ಜೋಯಿಡಾ: ಅಧಿಕಾರಿಗಳು ಕೋವಿಡ್‌ ನೆಪವೊಡ್ಡಿ ಅಭಿವೃದ್ಧಿಯಲ್ಲಿ ಪ್ರಗತಿ ತೋರದಿದ್ದರೆ ಹೇಗೆ. ತಹಶೀಲ್ದಾರರು ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳು ಈ ಬಗ್ಗೆ ತಿಳಿದುಕೊಂಡು ತಾಲೂಕಿನ ಅಭಿವೃದ್ಧಿ ಚಟುವಟಿಕೆ ಬಗ್ಗೆ ನಿಗಾ ವಹಿಸಿ ಪ್ರಗತಿಗೆ ವೇಗ ನೀಡಬೇಕೆಂದು ಶಾಸಕ ಆರ್‌.ವಿ. ದೇಶಪಾಂಡೆ ಅಧಿಕಾರಿಗಳಿಗೆ ಎಚ್ಚರಿಸಿದರು.

ಜೋಯಿಡಾ ತಾಲೂಕು ಕೇಂದ್ರದ ಡಿಪ್ಲೊಮಾ ಕಾಲೇಜು ಸಭಾಭವನದಲ್ಲಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಹಲವಾರು ಕೆಲಸ ಇನ್ನೂ ಪ್ರಗತಿಯಲ್ಲಿದ್ದು, ಪ್ರತ್ರಿಯೊಂದು ಕೆಲಸಕ್ಕೂ ಪದೆ ಪದೆ ನೆಪ ಒಡ್ಡದೆ ಕೆಲಸ ಮಾಡಬೇಕೆಂದು ಹೇಳಿದರು. ಜನಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ನಡೆಯುವ ಕೆಲಸಕಾರ್ಯ ಪರಿಶೀಲಿಸಿ ತಿಳಿಸಬೇಕು. ಎಲ್ಲವನ್ನೂ ಶಾಸಕರೆ ನೋಡಲು ಸಾಧ್ಯವಿಲ್ಲ ಎಂದರು.

ಡಿಪ್ಲೊಮಾ ಕಾಲೇಜಿನ ವರ್ಗಾವಣೆ ವಿಷಯದಲ್ಲಿ ಪ್ರಾಂಶುಪಾಲರಿಗೆ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಈಗಾಗಲೆ ಗ್ರಾಪಂಗಳಿಗೆ ಚುನಾವಣೆ ನಡೆಯಬೇಕಾಗಿತು. ಸರಕಾರ ಇನ್ನು 6ತಿಂಗಳು ಮುಂದೂಡಿದೆ. ಹಿಂದೆ ಕೆಲಸ ಮಾಡಿದ ಗ್ರಾಪಂ ಜನಪ್ರತಿನಿಧಿಗಳು ಅಧಿಕಾರ ಇಲ್ಲದಿದ್ದರೂ ಆಸಕ್ತಿಯಿಂದ ಕೆಲಸಮಾಡಬೇಕೆಂದರು. ತಾಲೂಕಿನಲ್ಲಿ ಕೃಷಿ ಚಟುವಟಿಕೆ ಸುರುವಾಗಿದ್ದು, ಉತ್ತಮ ಮಳೆ ನಿರೀಕ್ಷೆಯಿದೆ. ಕೃಷಿ ಇಲಾಖೆಯಲ್ಲಿ ರೈತರಿಗಾಗಿ ದಾಸ್ತಾನಿದ್ದ 510 ಕ್ವಿಂಟಾಲ್‌ ಭತ್ತದ ಬೀಜದಲ್ಲಿ ಈಗಾಗಲೆ 415 ಕ್ವಿ. ಬೀಜ ರೈತರು ಪಡೆದಿದ್ದು, ಇನ್ನೂ ಹೆಚ್ಚಿಗೆ ಅವಶ್ಯವಿದ್ದರೂ ಪೂರೈಸುವುದಾಗಿ ಕೃಷಿ ಅಧಿಕಾರಿಗಳು ಸಭೆಗೆ ತಿಳಿಸಿದರು.

ಉಳಿದಂತೆ ತೋಟಗಾರಿಕೆ, ಕಂದಾಯ, ಲೋಕೋಪಯೋಗಿ, ಪಂಚಾಯತ್‌ ರಾಜ್‌ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಶಾಸಕರು, ಎಲ್ಲ ಅಧಿಕಾರಿಗಳು ಪ್ರಗತಿಯಲ್ಲಿ ವೇಗ ತಂದುಕೊಂಡು ಆದಷ್ಟು ಬೇಗ ಕೆಲಸ ಪೂರ್ಣಗೊಳಿಸುವಂತೆ ನೋಡಿಕೊಳ್ಳಬೇಕೆಂದರು. ಕೋವಿಡ್‌ ಸಮಸ್ಯೆ ಪರಿಹಾರಕ್ಕೆ ದುಡಿಯುತ್ತಿರುವ ವಾರಿಯರ್ಸ್ ಗಳಿಗೆ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಶಾಸಕರು ಸಭೆಯಲ್ಲಿ ಅಭಿನಂದಿಸಿದರು. ನರ್ಮದಾ ಪಾಕ್ಲೃಕರ್‌, ವಿಜಯ ಪಂಡಿತ್‌, ರಮೇಶ ನಾಯ್ಕ, ಸಂಜಯ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.