ಮೊದಲಿನಂತೆಯೇ ಪಡಿತರ ವಿತರಿಸಿ


Team Udayavani, Sep 1, 2018, 4:52 PM IST

secptember-22.jpg

ಭಟ್ಕಳ: ತಾಲೂಕಿನಲ್ಲಿ ರೇಶನ್‌ ಅಂಗಡಿಗಳಲ್ಲಿ ಬಯೋಮೆಟ್ರಿಕ್‌ ವ್ಯವಸ್ಥೆಯಿಂದಾಗಿ ಬಡ ರೈತರು, ಕೂಲಿಕಾರರು, ಮಹಿಳೆಯರು ರೇಶನ್‌ ತರಲು ತೀವ್ರ ಪರದಾಡ ಬೇಕಾಗಿ ಬರುವುದರಿಂದ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಕೈಬಿಡಬೇಕು ಎಂದು ಸಿಐಟಿಯು ಭಟ್ಕಳ ಘಟಕದ ವತಿಯಿಂದ ತಹಶೀಲ್ದಾರ್‌ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು.

ರೇಶನ್‌ ಅಂಗಡಿಗಳಲ್ಲಿ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಕೈಬಿಡಬೇಕು, ಅರಣ್ಯ ಭೂಮಿ ಅತಿಕ್ರಮಣ ಮಾಡಿ ಮನೆ ಕಟ್ಟಿಕೊಂಡು ವಾಸ್ತವ್ಯ ಮಾಡಿಕೊಂಡು ಬಂದವರಿಗೆ ಅವರ ಮನೆಯನ್ನು ರಿಪೇರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮನವಿಯಲ್ಲಿ ಕೋರಲಾಗಿದೆ.

ಸಿಐಟಿಯು ವತಿಯಿಂದ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ರೇಶನ್‌ ಅಂಗಡಿಯಲ್ಲಿ ಉದ್ದುದ್ದ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿ ಬರುವುದು, ನಂತರ ಹೆಬ್ಬೆರಳ ಗುರುತನ್ನು ನೀಡಬೇಕು. ಕೆಲವೊಮ್ಮೆ ಅದು ಸರಿಯಾಗಿ ಮೂಡದೇ ಇದ್ದಲ್ಲಿ ವಾಪಸ್ಸಾಗಬೇಕಾಗಿ ಬರುವುದು. ಬಡ ಕೂಲಿ ಮಾಡುವವರು ಒಮ್ಮೆ ಬರುವುದೇ ಕಷ್ಟಕರವಾಗಿರುವಾಗ ಪದೇ ಪದೇ ರೇಶನ್‌ ಅಂಗಡಿಗೆ ಅಲೆಯುವುದು ತೀವ್ರ ಸಂಕಷ್ಟಕ್ಕೆ ನೂಕುತ್ತದೆ. ಪ್ರತಿನಿತ್ಯ ಕೂಲಿ ಮಾಡಿ ಸಂಪಾದನೆ ಮಾಡುವವರಿಗೆ ಇದು ಆದಾಯದ ಮೂಲಕ್ಕೆ ಪೆಟ್ಟು ಕೊಡುವ ಪದ್ಧತಿಯಾಗಿದೆಯಲ್ಲದೇ ಜನವಿರೋಧಿಯಾಗಿದ್ದು ಈ ಪದ್ಧತಿಯನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ತಾಲೂಕಿನಲ್ಲಿ ಹಲವಾರು ರೈತರು ತಮ್ಮ ತಮ್ಮ ವಾಸ್ತವ್ಯಕ್ಕಾಗಿ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿ ಮನೆ ಕಟ್ಟಿಕೊಂಡು ಬಂದಿದ್ದು ಬೇರೆ ಎಲ್ಲಿಯೂ ಅವರಿಗೆ ಆಶ್ರಯವಿಲ್ಲವಾಗಿದೆ. ಅಧಿಕಾರಿಗಳು ಅಕ್ರಮ ಸಕ್ರಮದ ಹೆಸರಿನಲ್ಲಿ ಮನೆಯನ್ನು ಕೆಡವಿ ಹಾಕುತ್ತಾರೆ. ಅತಿಕ್ರಮಣ ಜಾಗಾದಲ್ಲಿ ಮನೆ ಕಟ್ಟಿಕೊಂಡವರಿಗೆ ಅದನ್ನು ರಿಪೇರಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದೂ ಆಗ್ರಹಿಸಲಾಗಿದೆ. 

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ವಿ.ಎನ್‌. ಬಾಡಕರ್‌ ಅವರು ಮನವಿಯನ್ನು ಮುಖ್ಯ ಮಂತ್ರಿಗಳಿಗೆ ಕಳುಹಿಸುವ ಭರವಸೆ ನೀಡಿದರು. ಗೀತಾ ನಾಯ್ಕ, ಪುಂಡಲೀಕ ನಾಯ್ಕ, ಸುಧಾ ಭಟ್ಟ, ಪುಷ್ಪಾವತಿ ನಾಯ್ಕ, ಗಜೇಂದ್ರ ಶಿರಾಲಿ, ಚಂದ್ರಕಲಾ ನಾಯ್ಕ, ಅನುರಾಧ ಡಿಕೋಸ್ತ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.