ಗೊಂದಲದ ಗೂಡಾದ ಚತುಷ್ಪಥ ಕಾಮಗಾರಿ


Team Udayavani, Sep 17, 2019, 12:47 PM IST

uk-tdy-2

ಭಟ್ಕಳ: ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದು.

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66 (ಈ ಹಿಂದಿನ ರಾ.ಹೆ.17) ಅಗಲೀಕರಣ ಕಾಮಗಾರಿ ಆರಂಭವಾಗಿ 6-7 ವರ್ಷವಾದರೂ ಕಾಮಗಾರಿ ಇನ್ನೂ ಮುಗಿಯದೇ ಗೊಂದಲದ ಗೂಡಾಗಿದೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿಗಾಗಿ ಭೂ ಸ್ವಾಧೀನದ ಸಮಸ್ಯೆ ಎದುರಾದರೆ ಇನ್ನೊಂದೆಡೆ ಕಾಮಗಾರಿ ನಡೆಸುವ ಕಂಪೆನಿ ನಿಧಾನಗತಿಯಿಂದಾಗಿ ಕಾಮಗಾರಿ ವಿಳಂಬವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಚತುಷ್ಪತ ಕಾಮಗಾರಿ ಆರಂಭವಾದಾಗಿನಿಂದ ಹೆದ್ದಾರಿ ಪಕ್ಕದ ಜನತೆ ಒಂದಲ್ಲ ಒಂದು ಗೊಂದಲದಲ್ಲಿದ್ದಾರೆ. ಎಲ್ಲಿ ಎಷ್ಟು ವಶಪಡಿಸಿಕೊಳ್ಳಲಾಗುತ್ತಿದೆ ಎನ್ನುವುದೇ ಒಂದು ಗೊಂದಲವಾದರೆ, ಒಂದೊಂದು ಬಾರಿ ಒಂದೊಂದು ಮಾರ್ಕಿಂಗ್‌ ಮಾಡಿ ಹೋಗುತ್ತಿರುವುದು ಇನ್ನಷ್ಟು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ.

ಈ ಗೊಂದಲ ನಿವಾರಣೆಗೆ ಅಧಿಕಾರಿಗಳಾಗಲೀ, ಗುತ್ತಿಗೆದಾರ ಕಂಪೆನಿಯಾಗಲೀ ಪ್ರಯತ್ನ ಮಾಡಿಲ್ಲ. ಜನತೆ ಇನ್ನೂ ಕತ್ತಲೆಯಲ್ಲಿಯೇ ಇದ್ದು ಎಲ್ಲಿ ಏನಾಗುತ್ತಿದೆ ಎನ್ನುವುದು ತಿಳಿಯದಾಗಿದೆ. ನಮ್ಮ ಮನೆ, ನಮ್ಮ ಬದುಕು ಎಂದುಕೊಂಡಿದ್ದ ಜನತೆ ಹೆದ್ದಾರಿ ಅಗಲೀಕರಣದಿಂದಾಗಿ ನಿದ್ದೆಯಿಲ್ಲದೆ ರಾತ್ರಿ ಕಳೆಯುವಂತಾಗಿದೆ.

ಗ್ರಾಮೀಣ ಭಾಗದಲ್ಲಿ ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತಕ್ಕೆ ತಲುಪಿದ್ದರೂ ಇನ್ನೂ ಅನೇಕ ಕಡೆಗಳಲ್ಲಿ ಕಾಮಗಾರಿ ಅರ್ಧಂಬರ್ಧ ಆಗಿದೆ. ಅಲ್ಲಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ವಿಳಂಬ, ಪರಿಹಾರ ಪಡೆದರೂ ಜಾಗ, ಕಟ್ಟಡ ತೆರವು ಮಾಡದೇ ಇರುವ ಸಮಸ್ಯೆ ಇದಕ್ಕೆ ಕಾರಣವಾಗಿದೆ.

ನಗರ ಭಾಗದಲ್ಲಿ ಮೂಡಭಟ್ಕಳದಿಂದ ಮಣ್ಕುಳಿ ತನಕ ಕೆಲಸ ಆರಂಭಿಸಿದ್ದರೂ ಇನ್ನೂ ಪೂರ್ಣಗೊಳಿಸಿಲ್ಲ, ಅರ್ಧಂಬರ್ಧ ಕಾಮಗಾರಿ ಮಾಡಿದ್ದು ಎರಡೂ ಕಡೆಗಳಲ್ಲಿ ಚರಂಡಿ ಕಾಮಗಾರಿ ಮಾಡದೇ ಕಳೆದ ಮಳೆಗಾಲದಲ್ಲಿ ತೀವ್ರ ತೊಂದರೆ ಅನುಭವಿಸಬೇಕಾಗಿದ್ದಕ್ಕೆ ಕಾಮಗಾರಿ ಪೂರ್ಣಗೊಳ್ಳದಿರುವುದೇ ಕಾರಣವಾಗಿದೆ.

ನಗರದಲ್ಲಿ ಭೂಸ್ವಾಧಿನ ಸಂಕಷ್ಟ: ಮಣ್ಕುಳಿಯಿಂದ ನವಾಯತ ಕಾಲೋನಿ ತನಕ ಅನೇಕ ಸಮಸ್ಯೆಗಳಿದ್ದು ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಭೂ ಸ್ವಾಧೀನ ಪ್ರಕ್ರಿಯೆಯೇ ಪೂರ್ಣಗೊಂಡಿಲ್ಲದೇ ಇರುವುದೂ ಕೂಡಾ ವಿಳಂಬಕ್ಕೆ ಕಾರಣ ಎನ್ನಲಾಗಿದೆ. ನಗರದಲ್ಲಿ ಅನೇಕ ಸರ್ವೇ ನಂಬ್ರಗಳು ಬಿಟ್ಟು ಹೋಗಿರುವುದರಿಂದ ಭೂಸ್ವಾದೀನ ತಡವಾಗುತ್ತಿದ್ದು ಕಾಮಗಾರಿ ಆರಂಭಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ.

ಒಳಚರಂಡಿ ಸಮಸ್ಯೆ:

ನಗರದಲ್ಲಿ ಮೂಢ ಭಟ್ಕಳದಿಂದ ನವಾಯತ ಕಾಲೋನಿ ತನಕ ಕಾಮಗಾರಿ ಮಾಡಲು ಇನ್ನೊಂದು ತೊಡಕಿದ್ದು ಅದನ್ನು ಕೂಡಾ ಪರಿಹಾರ ಮಾಡಿಕೊಳ್ಳಬೇಕಾಗಿದೆ. ಈಗಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಪುರಸಭೆ ಒಳಚರಂಡಿ ಪೈಪ್‌ ಹಾದು ಹೋಗಿದ್ದು ಅದನ್ನು ಬದಲಾಯಿಸದೇ ಕಾಮಗಾರಿ ಕೈಗೊಳ್ಳುವುದು ಕಷ್ಟಕರವಾಗಲಿದೆ. ಈಗಾಗಲೇ ಒಳಚರಂಡಿ ಪೈಪನ್ನು ಕಾಮಗಾರಿ ಪ್ರದೇಶದಿಂದ ಪಕ್ಕಕ್ಕೆ ಹಾಕಲು ಟೆಂಡರ್‌ ಆಗಿದೆಯಾದರೂ ಸಹ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಹೆದ್ದಾರಿಯಂಚಿನಲ್ಲಿಯೇ ಒಳಚರಂಡಿ ಪೈಪ್‌ ಇರುವುದರಿಂದ ಅದನ್ನು ಬದಲಾಯಿಸದೇ ರಸ್ತೆ ಮಾಡುವುದು ಸಾಧ್ಯವಿಲ್ಲ. ಶಂಶುದ್ಧೀನ್‌ ಸರ್ಕಲ್ನಿಂದ ವೆಂಕಟಾಪುರದ ತನಕ ಮುಖ್ಯ ಪೈಪ್‌ಲೈನ್‌ ಇದ್ದು ಒಂದು ವೇಳೆ ಅದಕ್ಕೇನಾದರೂ ಧಕ್ಕೆಯಾದರೆ ಇಡೀ ಭಟ್ಕಳ ನಗರದ ಸ್ವಚ್ಛತಾ ವ್ಯವಸ್ಥೆಯೇ ಅದಲು ಬದಲಾಗಲಿದೆ. ಸಂಪೂರ್ಣ ಹೊಲಸು ನಗರದಲ್ಲೇ ಸಂಗ್ರಹವಾಗಲಿದ್ದು ಈ ಕುರಿತೂ ಜಾಗೃತೆ ವಹಿಸಬೇಕಾಗಿದೆ. ಒಳಚರಂಡಿ ಕಾಮಗಾರಿ ವಿಳಂಬವಾದಷ್ಟೂ ಹೆದ್ದಾರಿ ಅಗಲೀಕರಣ ವಿಳಂಬವಾಗಲಿದೆ. ಒಳಚರಂಡಿ ಸ್ಥಳ ಬದಲಾವಣೆಗೆ ಭೂ ಸ್ವಾಧೀನ ಪ್ರಕ್ರಿಯೆ ಆಗಬೇಕಾಗಿದೆ. ಇದು ಒಂದಕ್ಕೊಂದು ತಳಕು ಹಾಕಿಕೊಂಡಿದ್ದು ಹೆದ್ದಾರಿ ಕಾಮಗಾರಿ ಇನ್ನಷ್ಟು ವಿಳಂಬವಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.