‘ಲಸಿಕೆ ಪಡೆಯುವ ಮೊದಲು ರಕ್ತದಾನ ಮಾಡಿ ಪ್ಲೀಸ್’: ಶಿರಸಿ ವೈದ್ಯೆಯ ಜಾಗೃತಿ ಅಭಿಯಾನ


Team Udayavani, Apr 24, 2021, 8:30 AM IST

ಲಸಿಕೆ ಪಡೆಯುವ ಮೊದಲು ರಕ್ತದಾನ: ಶಿರಸಿ ವೈದ್ಯೆಯ ಜಾಗೃತಿ ಅಭಿಯಾನಕ್ಕೆ ಮೆಚ್ಚುಗೆ

ಶಿರಸಿ: ಕೇಂದ್ರ ಸರಕಾರ ಕೋವಿಡ್ 19ರ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳಲು ಮುಕ್ತ ಅವಕಾಶ ಪ್ರಕಟಿಸಿದೆ. ಸರಕಾರಗಳಿಂದ ಕೋವಿಡ್ ನಿಯಂತ್ರಣಕ್ಕೆ ಇದು ಅತ್ಯಂತ  ಮಹತ್ವದ ನಡಯಾಗಿದೆ.

ಈ ನಡೆಯ ಬೆನ್ನಲ್ಲೇ ಶಿರಸಿಯ ವೈದ್ಯೆಯೊಬ್ಬರು ಲಸಿಕೆ ಹಾಕಿಸಿಕೊಳ್ಳುವ ಮೊದಲು ಅರ್ಹ ದಾನಿಗಳು ‘ರಕ್ತದಾನ ಮಾಡಿ ಪ್ಲೀಸ್’ ಎಂಬ ವಿನೂತನ ಜಾಗೃತಿ ಅಭಿಯಾನವನ್ನೂ ಆರಂಭಿಸಿದ್ದಾರೆ.

ಏನಿದು ಅಡಚಣೆ?

ಕೋವಿಡ್ ನಿರೋಧಕ ಲಸಿಕೆ ಅಭಿಯಾನವು ಮೇ 1ರಿಂದ 18ರಿಂದ 45 ವರ್ಷದವರಿಗಾಗಿ ಆರಂಭವಾಗುತ್ತದೆ. ರಾಷ್ಟ್ರಿಯ ರಕ್ತ ಸಂಚರಣ ಪರಿಷತ್ (ಎಬಿಟಿಸಿ) ಪ್ರಕಾರ ಯಾವುದೇ ಲಸಿಕೆ ಪಡೆದ ನಾಲ್ಕು ವಾರಗಳ ತನಕ ರಕ್ತದಾನ ಮಾಡಲು ಅವಕಾಶ ಇಲ್ಲ. ಕೋವಿಡ್ ಲಸಿಕೆ ಎರಡು ಹಂತದಲ್ಲಿ ಪಡೆಯಬೇಕು. ಈ ಹಂತದಲ್ಲಿ ದೇಶದಲ್ಲಿ ರಕ್ತದ ಕೊರತೆ ಆಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಕೊರೊನಾ ಭಯದದಲ್ಲಿ ಮೊದಲೇ ರಕ್ತದಾನಿಗಳ ಕೊರತೆ ಇದೆ. ಕಳೆದೊಂದು ವರ್ಷದಿಂದ ರಕ್ತದಾನ ಶಿಬಿರಗಳೂ ಹೆಚ್ಚು ನಡೆದಿಲ್ಲ.

ಪರಿಹಾರ ಏನು?

ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಐಎಂಎ ಲೈಫ್‌ಲೈನ್  ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ. ಸುಮನ್ ದಿನೇಶ ಹೆಗಡೆ, ಲಸಿಕೆಗೂ ಮೊದಲು ರಕ್ತದಾನ ಮಾಡಿ ಎಂಬ ಮನವಿ ಮಾಡಿಕೊಳ್ಳುತ್ತಿದ್ದಾರೆ. ರಕ್ತ ನಿಧಿಗಳಲ್ಲಿ ರಕ್ತ ಸಂಗ್ರಹಣಾ ಕೊರತೆ ನೀಗಿಸಲು ಇದೊಂದೇ ದಾರಿಯಾಗಿದೆ.

ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ವಿಡಿಯೋ, ಮನವಿಗಳ ಮೂಲಕ 18ರಿಂದ 45 ವರ್ಷದೊಳಗಿನ ಜನರಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದಾರೆ. ಇದೇ ವಯಸ್ಸಿನ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುತ್ತಾರೆ. ಒಮ್ಮೆ ರಕ್ತದಾನ ಮಾಡಿದರೆ ಒಬ್ಬ ಪುರುಷ ದಾನಿಗೆ 3, ಮಹಿಳಾ ದಾನಿಗೆ 4 ತಿಂಗಳ ಕಾಲ ಬಿಡುವು ಬೇಕಿದೆ ಎಂಬುದೂ ಉಲ್ಲೇಖನೀಯ.

ಇದನ್ನೂ ಓದಿ:ವೀಕೆಂಡ್ ಕರ್ಫ್ಯೂ ಆರಂಭ: ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ ಅವಕಾಶ

ಡಾ.ಸುಮನ್ ಹೆಗಡೆ, ಪ್ರಥಮ ಹಂತದ ಲಸಿಕೆ ಪಡೆಯುವ ಮೊದಲೇ ರಕ್ತದಾನ ಮಾಡಿ ಲಸಿಕೆ ಪಡೆಯಬಹುದು. ಅಥವಾ ಈಗ ಕೊಟ್ಟಿಲ್ಲ ಎಂದರೆ ಎರಡನೇ ಲಸಿಕೆ ಪಡೆಯುವ ಮುನ್ನವೂ ರಕ್ತದಾನ ಮಾಡಬಹುದು ಎಂದು ಸಲಹೆ ಮಾಡುತ್ತಾರೆ.

ಲಸಿಕೆ ಪಡೆಯುವ ಮೊದಲೇ ರಕ್ತದಾನ ಮಾಡಿದರೆ ತುರ್ತು ಸಂದರ್ಭದಲ್ಲಿ ರಕ್ತದ ಕೊರತೆ ಆಗದಂತೆ ವ್ಯವಸ್ಥೆ ಮಾಡಿಕೊಳ್ಳಲು ಸಾಧ್ಯವಿದೆ. ಈ ಸಂದೇಶವನ್ನು ವಾಟ್ಸಪ್‌ಗಳಲ್ಲಿ ಹಾಕಿದಾಗ ದಾನಿಗಳೂ ಉತ್ಸುಕರಾಗಿ ಸ್ಪಂದಿಸುತ್ತಿದ್ದು, ತಾವೂ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡುವದಾಗಿ ತಿಳಿಸಿದ್ದಾರೆ ಎನ್ನುತ್ತಾರೆ ಡಾ. ಸುಮನ್ ಹೆಗಡೆ.

ಅಪಘಾತದಲ್ಲಿ ಗಾಯಗೊಂಡು ರಕ್ತ ಕಳೆದುಕೊಂಡವರು, ಗರ್ಭಿಣಿ ಸ್ತ್ರೀಯರಿಗೆ, ಫೆಲಸೀಮಿಯಾ ರೋಗಿಗಳು, ರಕ್ತಹೀನತೆ ಉಳ್ಳವರು, ಕ್ಯಾನ್ಸರ್ ರೋಗಿಗಳ ಜೀವ ಉಳಿಸಲು ಬೇಕು ರಕ್ತ. ಈ ಕಾರಣದಿಂದ ಸಂಭಾವ್ಯ ರಕ್ತದ ಕೊರತೆ ಆಗದಂತೆ ಕೈ ಜೋಡಿಸಬೇಕಿದೆ.

ಕೈ ಜೋಡಿಸಿ

ಸಮುದಾಯ ಮನಸ್ಸು ಮಾಡಿದರೆ ಜೀವ ಉಳಿಸಬಹುದು. ಲಸಿಕೆಗೂ ಮೊದಲು ರಕ್ತದಾನ ಮಾಡಿ ಜೀವ ಉಳಿಸಲು ಕೈ ಜೋಡಿಸುತ್ತೇವೆ.

– ಡಾ. ಸುಮನ್ ಹೆಗಡೆ, ಪೆಥಾಲಜಿಸ್ಟ್

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.