ರೋಗಿ- ಅಶಕ್ತರ ಸೇವೆ ಮಾಡುವುದು ವೈದ್ಯರ ಹೊಣೆಗಾರಿಕೆ

ಕ್ರಿಮ್ಸ್‌ ಘಟಿಕೋತ್ಸವದಲ್ಲಿ 143 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Team Udayavani, May 5, 2022, 10:08 AM IST

4

ಕಾರವಾರ: ವೃತ್ತಿ ಜೀವನದಲ್ಲಿ ರೋಗಿಯ, ಅಶಕ್ತರ ಸೇವೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಬೆಂಗಳೂರು ಕ್ರಿಮ್ಸ್‌ನ ವಿಶ್ರಾಂತ ನಿದೇಶಕ ಪದ್ಮಶ್ರೀ ಪುರಸ್ಕೃತ ಬಿ.ಎನ್‌. ಗಂಗಾಧರ್‌ ಹೇಳಿದರು.

ನಗರದ ಸರ್ಕಾರಿ ಮೆಡಿಕಲ್‌ ಕಾಲೇಜಿನಲ್ಲಿ ಬುಧವಾರ ನಡೆದ ಅಂತಿಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ರೋಗಿಯೇ ವೈದ್ಯ ವೃತ್ತಿಗೆ ಮುಖ್ಯ ಶಿಕ್ಷಕ. ಅವರಿದ್ದಾಗ ಮಾತ್ರ ಉತ್ತಮ ಶಿಕ್ಷಣ ಸಿಗುತ್ತದೆ. ವಿದ್ಯಾರ್ಥಿಗಳು ವೈದ್ಯರಾಗುವುದು ಹೊಸ ಪಟ್ಟ ಎನ್ನುವುದಕ್ಕಿಂತ ಹೊಸ ಜವಾಬ್ದಾರಿ ಎನ್ನುವುದು ಸೂಕ್ತ. ಯಾವ ಸಂಗತಿಗಳು ಗೊತ್ತಿಲ್ಲದ ಹೊಸ ವಿದ್ಯಾರ್ಥಿಗಳಿಗೆ ಶಿಕ್ಷಕರು ಪಠ್ಯ ಮಾತ್ರವಲ್ಲದೆ ನೈಪುಣ್ಯತೆಯನ್ನು ಹೇಳಿಕೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಎಮ್‌ಬಿಬಿಎಸ್‌ ನಂತರ ಶೂನ್ಯ ಹಾಗೂ ನಾನು ತಜ್ಞ ಅಲ್ಲ ಎನ್ನುವ ಭಾವನೆ ಬೇಡ. ಎಲ್ಲದರ ಬಗ್ಗೆಯೂ ತಿಳಿಯುವುದೇ ವೈದ್ಯಕೀಯ ವಿಜ್ಞಾನ. ವೈದ್ಯ ಎನ್ನುವುದಕ್ಕಿಂದ ಪ್ರಾಮಾಣಿಕ ಹೃದಯ ಇರುವ ವ್ಯಕ್ತಿ ಎನ್ನುವ ಭಾವನೆಯಿಂದ ಕೆಲಸ ಮಾಡಿ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್‌ ರಾಜ್‌ ಮಾತನಾಡಿ, ನಾವು ಮಾಡುವ ಕೆಲಸದಲ್ಲಿ ಶೃದ್ಧೆ ಹಾಗೂ ಶ್ರಮ ಇರಬೇಕು. ಹಾಗಿದ್ದಾಗ ಮಾತ್ರ ವೃತ್ತಿ ಜೀವನದಲ್ಲಿ ಸಾಧನೆ ಮಾಡಲು ಸಾದ್ಯ ಎಂದರು. ಹುಬ್ಬಳ್ಳಿಯ ಕಿಮ್ಸ್‌ ವಿಶ್ರಾಂತ ನಿರ್ದೇಶಕ ವಿ.ಎನ್‌. ಬಿರಾದಾರ್‌ ಮಾತನಾಡಿ, ಇಂದು ವಿದ್ಯಾರ್ಥಿಗಳ ನಿಜವಾದ ಕೆಲಸ ಪ್ರಾರಂಭವಾಗುತ್ತದೆ. ನೀವು ಗಳಿಸುವ ಹಣ ಪರೋಕ್ಷವಾಗಿ ಒಬ್ಬ ಬಡವ ಕೊಟ್ಟಿರುತ್ತಾನೆ. ಹೀಗಾಗಿ ದಿನಕ್ಕೆ ಒಂದು ತಾಸು ಬಡ ರೋಗಿಗಳ ಸೇವೆಗೆ ಮೀಸಲಿಡಿ ಎಂದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾತನಾಡಿ, ಪದವಿ ಪಡೆದ ನಂತರ ಹೇಗೆ ನಿಮ್ಮ ಕರ್ತವ್ಯ ನಿರ್ವಹಿಸುತ್ತೀರಿ ಎನ್ನುವುದು ಮುಖ್ಯ. ನೀವು ಮಾಡುವ ಕೆಲಸಗಳು ನಿಮ್ಮ ವ್ಯಕ್ತಿತ್ವ ಮಾತ್ರವಲ್ಲದೇ ನಿಮ್ಮ ಶಿಕ್ಷಕರು ಹಾಗೂ ಕಾಲೇಜುನ್ನು ಪ್ರತಿನಿಧಿಸುತ್ತದೆ. ಈ ನಿಟ್ಟಿನಲ್ಲಿ ನೀವು ಕಲಿತ ಸಂಸ್ಥೆಯ ಗೌರವ ಹೆಚ್ಚಿಸಿ ಎಂದರು.

ಹುಬ್ಬಳ್ಳಿಯ ಕಿಮ್ಸ್‌ ನಿರ್ದೇಶಕ ರಾಮಲಿಂಗಪ್ಪ ಸಿ, ಐ.ಎನ್‌.ಎಚ್‌.ಎಸ್‌ ಪತಂಜಲಿ ಕಮಾಂಡಿಂಗ್‌ ಆಫಿಸರ್‌ ಕ್ಯಾಪ್ಟನ್‌ ಜಸ್ಕಿರಣ್‌ ಸಿಂಗ್‌ ರಾಂಧವ ಮಾತನಾಡಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಡೊಳ್ಳು, ವಾದ್ಯ ಮೇಳಗಳೊಂದಿಗೆ ಗಣ್ಯರನ್ನು ಸ್ವಾಗತಿಸಲಾಯಿತು.

ಘಟಿಕೋತ್ಸವದಲ್ಲಿ 143 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಎಂಬಿಬಿಎಸ್‌ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪದಕ ವಿತರಣೆ ಮಾಡಿ ಗೌರವಿಸಲಾಯಿತು. ವೈದ್ಯ ಪದವಿ ಪಡೆದ ವಿದ್ಯಾರ್ಥಿಗಳು ಸಂಭ್ರಮ ಆಚರಿಸಿದರು. ಕಾರ್ಯಕ್ರಮದಲ್ಲಿ ಮೆಡಿಕಲ್‌ ಕಾಲೇಜಿನ ಉಪನ್ಯಾಸಕ ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಪಾಲಕರು ಹಾಜರಿದ್ದರು.

ಟಾಪ್ ನ್ಯೂಸ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.