ಸಮಾಜದ ಮನೋಭಾವ ಬದಲಾಯಿಸುವುದೇ ಅಂಬೇಡ್ಕರ್ ಜಯಂತಿ ಉದ್ದೇಶ : ಡಿಸಿ ಮುಲ್ಲೈ 


Team Udayavani, Apr 14, 2021, 5:34 PM IST

hfgfg

ಕಾರವಾರ: ಸಮಾಜದ ಮಾನದಂಡಗಳಿಗೆ ಅಂಬೇಡ್ಕರ್ ಅವರನ್ನ ಹೋಲಿಸುವ ಬದಲು,  ಅವರ ವಿಚಾರಧಾರೆಗಳ  ಮಟ್ಟಕ್ಕೆ ಸಮಾಜವನ್ನ  ಹೋಲಿಸಿ ನೋಡುವ ದಿನವಾಗಿ ಪರಿವರ್ತಿಸುವುದೇ ಅಂಬೇಡ್ಕರ್ ಜಯಂತಿಯ ಉದ್ದೇಶವಾಗಿದೆ ಎಂದು    ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು .

ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ  130ನೇ  ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಯೋಚನಾ ಶಕ್ತಿಯು ಸಮಾಜವು ಹೇಗಿದೆ ಎನ್ನುವುದನ್ನುವುದರ ಆಗುಹೋಗುಗಳನ್ನ ತೋರಿಸುವ ಕನ್ನಡಿಯಂತಿತ್ತು ಎಂದರು.

ಯಾವುದೇ ವ್ಯಕ್ತಿಗೆ ಸಾಮಾಜಿಕ ಸ್ಥಾನಮಾನಗಳನ್ನ ಅವಕಾಶಗಳನ್ನ ಅವರ ಹುಟ್ಟಿನ, ಲಿಂಗದ, ಜಾತಿಯ, ಆಧಾರದಮೇಲೆ ನೀಡುವಂತದ್ದಲ್ಲ ಅದೂ ಅವರ ಪ್ರತಿಭೆಯ ಆಧಾರದಮೇಲೆ ಸಿಗುವಂತಾಗಬೇಕು. ಸಮಾಜದಲ್ಲಿ ರಾಜಕೀಯ ಸ್ವತಂತ್ರ ಅಥವಾ ರಾಜಕೀಯ ಸಮಾನತೆ ದೊರೆತಿರಬಹುದು. ಆದರೆ,  ಸಮಾಜದ ಮನೋಭಾವ ಬದಲಾಗುವವರೆಗೆ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆ ಸಿಗುವುದಿಲ್ಲ. ಇಂತಹ ಮನೋಭಾವನೆಗಳು ಬದಲಾವಣೆಯ ಜೊತೆಗೆ ಮೊದಲು ವೈಯಕ್ತಿಕವಾಗಿ ಬದಲಾವಣೆ ಬರಬೇಕು ಆಗ  ಮಾತ್ರ ಸಾಮಾಜಿಕವಾಗಿ ಬದಲಾವಣೆ ಕಾಣಲು ಸಾಧ್ಯ ಎಂದರು.

ಅಪರ ಜಿಲ್ಲಾಧಿಕಾರಿ ಕ್ರಷ್ಣಮೂರ್ತಿ ಹೆಚ್.ಕೆ.ಮಾತನಾಡಿ, ಅಂಬೇಡ್ಕರ್ ಅವರು ಮೇಧಾವಿ ಹಾಗೂ ವಿದ್ಯಾವಂತ ವ್ಯಕ್ತಿ,ಇಂತವರ ಬಗ್ಗೆ ಓದಿ ತಿಳಿದುಕೊಂಡು ಅವರ  ಮೌಲ್ಯಗಳನ್ನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಮಕ್ಕಳಿಗೆ ಅತ್ಯಾವಶ್ಯಕ ಎಂದರು. ಸ್ವಾತ್ಯಂತ್ರ ಹೋರಾಟದ ಸಮಯದಲ್ಲಿ ಸಮಾನತೆಗಾಗಿ ಗಾಂಧೀಜಿಯವರ ಜೊತೆಗೆ ನಡೆದ ಒಪ್ಪಂದ ಹಾಗೂ ಸಮಾನತೆಯ ಹೋರಾಟವನ್ನು ಬಳಸಿಕೊಂಡು, ಸ್ವಾತಂತ್ರ್ಯದ ಹೋರಾಟವನ್ನು ಚುರುಕುಗೊಳಿಸಲು  ಮಾಡಿದ ಉಪಾಯಗಳ ಬಗ್ಗೆ ಕೂಡ  ವಿವರಿಸಿದರು.

ಕಾರ್ಯಕ್ರಮದಲ್ಲಿ ರಾಘವೇಂದ್ರ.ಎಮ್  ಅವರು ಅಂಬೇಡ್ಕರ್ ಅವರ ಚಿಂತನೆಗಳು ಇಂದು  ಹೆಚ್ಚು  ಪ್ರಸ್ತುತ ವಿಷಯದ ಕುರಿತು   ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜು, ನಗರಸಭೆ ಉಪಾಧ್ಯಕ್ಷ ಪ್ರಕಾಶ್ ನಾಯ್ಕ್, ಪೌರಯುಕ್ತ ಆರ್. ಪಿ. ನಾಯ್ಕ್, ದಲಿತ ಸಂಘನೆಗಳಿಂದ ಎಲಿಷಾ ಎಕಲಪಾಟಿ, ದೀಪಕ್  ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.