ಖಜಾನೆ-2 ತರಬೇತಿ ಕೇಂದ್ರಕ್ಕೆ ಚಾಲನೆ


Team Udayavani, Feb 22, 2019, 10:40 AM IST

22-february-14.jpg

ಕಾರವಾರ: ಸರ್ಕಾರದ ಹಣಕಾಸಿನ ವ್ಯವಹಾರಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಖಜಾನೆ -2 ತರಬೇತಿ ಕೇಂದ್ರ ಪ್ರಾರಂಭಿಸಲಾಗಿದೆ. ಇದರಿಂದ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಬಿಲ್‌ಗ‌ಳನ್ನು ಮತ್ತು ವೇತನವನ್ನು ಕೆ-2 ವ್ಯವಸ್ಥೆಯ ಸೌಕರ್ಯ ಪಡೆಯಬಹುದು. ಕೆ-2 ವ್ಯವಸ್ಥೆಯ ತರಬೇತಿ ನೀಡಲು ಮೂವರು ಎಂಜಿನಿಯರ್‌ಗಳಿದ್ದು ಅವರು ಇಲ್ಲಿಗೆ ಬರುವ ಎಲ್ಲಾ ನೌಕರರಿಗೆ ನೆರವಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಮೊದಲ ಮಹಡಿಯಲ್ಲಿ ಪ್ರಾರಂಭವಾದ ನೂತನ ಕಚೇರಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಖಜಾನೆ ರಾಜ್ಯದಲ್ಲಿಯೇ ಮಾದರಿಯಾಗಿದೆ. ಇದೀಗ ಜಿಲ್ಲಾಧಿಕಾರಿ ಕಚೇರಿಯಲ್ಲೇ ತರಬೇತಿ ಕೇಂದ್ರ ಆರಂಭವಾಗಿರುವ ಕಾರಣ ಖಜಾನೆ-2ರಲ್ಲಿ ವ್ಯವಹರಿಸುವವರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿಯೇ ಪ್ರಥಮವಾಗಿ ಸೌಕರ್ಯ ಮತ್ತು ತರಬೇತಿ ಕೇಂದ್ರ ಕಾರವಾರದಲ್ಲಿ ಆರಂಭವಾದಂತಾಗಿದೆ ಎಂದರು.

ಕಾಗದ ರಹಿತ ಮತ್ತು ಚೆಕ್‌ ರಹಿತ ವಹಿವಾಟು: ಹಣಕಾಸಿನ ಎಲ್ಲ ವ್ಯವಹಾರಗಳನ್ನು, ವಿವಿಧ ಸರ್ಕಾರಿ ಇಲಾಖೆಗಳು ಖಜಾನೆ-2ರಲ್ಲಿಯೇ ಮಾಡುವಂತೆ ಸರ್ಕಾರ ಆದೇಶಿ 2 ವರ್ಷ ಕಳೆದಿವೆ. ಸರ್ಕಾರದಿಂದ ಹೊಸ ತಂತ್ರಾಂಶ ಒದಗಿಸಿ ಎರಡು ವರ್ಷಗಳು ಸಂದಿವೆ. ಆದರೂ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳು ಕೆ-2 ವ್ಯವಸ್ಥೆ ಅಡಿ ಬಂದಿರಲಿಲ್ಲ. ಹಾಗೂ ಕೆಲ ಇಲಾಖೆಗಳಲ್ಲಿ ಖಜಾನೆ-2ರಲ್ಲಿ ವ್ಯವಹರಿಸುವ ಸಂದರ್ಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳು, ಜ್ಞಾನದ ಕೊರತೆ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸಬೇಕಾಗಿತ್ತು. ಇದನ್ನು ಅರಿತ ಜಿಲ್ಲಾಧಿಕಾರಿ ಎಸ್‌. ಎಸ್‌. ನಕುಲ್‌ ಅವರು ಜಿಲ್ಲಾಡಳಿತ ಭವನದಲ್ಲಿಯೇ ಒಂದು ವಿಶೇಷ ತರಬೇತಿ ಕೇಂದ್ರ ತೆರೆಯುವ ಸಲಹೆ ನೀಡಿ ಕೊಠಡಿಯನ್ನು ಒದಗಿಸಿದ ಹಿನ್ನೆಲೆಯಲ್ಲಿ ಒಂದು ಸುಸಜ್ಜಿತ ಖಜಾನೆ-2 ಸೌಕರ್ಯ ಮತ್ತು ತರಬೇತಿ ಕೇಂದ್ರ ತೆರೆಯಲು ಅನುಕೂಲವಾಯಿತು ಎಂದು ಜಿಲ್ಲಾ ಖಜಾನೆ
ಉಪನಿರ್ದೇಶಕ ಸುನೀಲ್‌ ವಿಶ್ವನಾಥ್‌ ಮೂಗಿ ಹೇಳಿದರು.

ಖಜಾನೆ-2ರಲ್ಲಿ ಹಣಕಾಸಿನ ವ್ಯವಹಾರಗಳನ್ನು ಮಾಡುವ ಇಲಾಖೆಗಳಲ್ಲಿ ಕಂಪ್ಯೂಟರ್‌ ಸಮಸ್ಯೆ, ಮುದ್ರಣ ಯಂತ್ರದ ಸಮಸ್ಯೆ ಅಥವಾ ಜ್ಞಾನದ ಸಮಸ್ಯೆಯಿಂದ ಒಂದಿಲ್ಲೊಂದು ಸಮಸ್ಯೆಯಿಂದ ವಿಳಂಬಕ್ಕೆ ಕಾರಣವಾಗುತ್ತಿತ್ತು. ದಾಖಲೆಗಳು ಸರಿಯಿದ್ದರೂ ಮಾಡುವ ವಿಧಾನದಲ್ಲಿ ತಪ್ಪಾಗಿ ಖಜಾನೆಯಿಂದ ಆಕ್ಷೇಪಣೆಗೆ ಕಾರಣವಾಗುತ್ತಿತ್ತು. ಆ ಕಾರಣದಿಂದಲೇ ಈ ಸೌಲಭ್ಯ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲಾಗಿದ್ದು ಇಲ್ಲಿ ಕಂಪ್ಯೂಟರ್‌ಗಳು, ಮುದ್ರಣ ಯಂತ್ರಗಳು ಹಾಗೂ ಮೂರು ಮಂದಿ ಕಂಪ್ಯೂಟರ್‌ ಎಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ. ಸಮಸ್ಯೆಯಿರುವ ಇಲಾಖೆ ಅಧಿಕಾರಿಗಳು ಈ ಕೇಂದ್ರದ ಉಪಯೋಗವನ್ನು ಸಂಪೂರ್ಣ ಉಚಿತವಾಗಿ ಪಡೆಯಬಹುದಾಗಿದೆ. ಅಲ್ಲದೆ ಸರ್ಕಾರದ ಇಲಾಖೆಗೆ ಸಾರ್ವಜನಿಕರು ಖಜಾನೆ-2ರಲ್ಲಿ ಡಿಡಿ ಚಲನ್‌ ತೆಗೆಯಲೂ ಈ ಕೇಂದ್ರವನ್ನು  ಪಯೋಗಿಸಿಕೊಳ್ಳಬಹುದಾಗಿದೆ ಎಂದು ಸುನೀಲ್‌ ಮೂಗಿ ಹೇಳಿದರು. ಜಿಪಂ ಸಿಇಒ ಎಂ.ರೋಷನ್‌, ಎಸ್ಪಿ ವಿನಾಯಕ್‌ ಪಾಟೀಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.