ಅಕ್ರಮ ತಡೆಗೆ ಡ್ರೋಣ್‌ ಬಳಕೆ


Team Udayavani, Apr 9, 2021, 9:35 PM IST

್ದಹಗದಹಗಗ್ಹಗ

ಕಾರವಾರ : ಪ್ರಕೃತಿ ವಿಕೋಪ, ನೆರೆ ಹಾವಳಿಯಂತಹ ವಿಪತ್ತು ನಿರ್ವಹಣೆ ಮತ್ತು ಬೃಹತ್‌ ಸಭೆ, ಸಮಾರಂಭಗಳ ಸಂದರ್ಭದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಡ್ರೋಣ್‌ ಕ್ಯಾಮೆರಾ ಬಳಕೆಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಎಸ್ಪಿ ಶಿವಪ್ರಕಾಶ್‌ ದೇವರಾಜ ಹೇಳಿದರು.

ನಗರದ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಡ್ರೋಣ್‌ ಕ್ಯಾಮರಾ ಬಳಕೆ ಹಾಗೂ ಕಾರ್ಯ ವೈಖರಿಯ ಪ್ರಾಯೋಗಿಕ ಪ್ರಾತ್ಯಕ್ಷಿಕೆ ವೀಕ್ಷಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರಣ್ಯ ಹಾಗೂ ಸಮುದ್ರ ಪ್ರದೇಶವಿದ್ದು, ನೆರೆ ಹಾವಳಿ, ಬೆಂಕಿ ಅವಘಡ, ಕಡಲ ಕೊರೆತದಂತಹ ಅನೇಕ ಪ್ರಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ. ಅದಲ್ಲದೇ ಜಿಲ್ಲೆಯಲ್ಲಿ ನಡೆಯುವ ಬೃಹತ್‌ ಸಭೆ, ಸಮಾರಂಭಗಳಲ್ಲಿ ಕಾನೂನು ಬಾಹೀರ ಚಟುವಟಿಕೆಗಳು ನಡೆಯುವುದು ಹೆಚ್ಚಾಗಿದೆ. ಹೀಗಾಗಿ ಈ ಎಲ್ಲ ಸಂದರ್ಭಗಳಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ಸೂಕ್ತವಾಗಿ ಕಾರ್ಯ ನಿರ್ವಹಿಸಲು ಡ್ರೋಣ್‌ ಕ್ಯಾಮರಾ ಬಳಕೆ ಅತ್ಯವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಬಳಸಲಾಗುವ ಈ ಡ್ರೋಣ್‌ ಕ್ಯಾಮೆರಾಗಳು ಸಮುದ್ರ, ಪ್ರವಾಹ ಹಾಗೂ ಕಾಡ್ಗಿಚ್ಚಿನಂತಹ ಪ್ರಕೃತಿ ವಿಪತ್ತುಗಳಲ್ಲಿ ಸಿಲುಕಿಕೊಂಡವರನ್ನು, ಪಕ್ಷಿನೋಟದ ಮೂಲಕ ಗುರುತಿಸಿ ರಕ್ಷಿಸಲು ಮತ್ತು ಜನದಟ್ಟಣೆ ಆಗುವ ಸಭೆ, ಸಮಾರಂಭಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ, ಅಹಿತಕರ ಘಟನೆಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿವೆ. ಹೀಗಾಗಿ ವಿಪತ್ತು ನಿರ್ವಹಣಾ ನಿಧಿ ಯಿಂದ 12 ಲಕ್ಷ ವೆಚ್ಚದಲ್ಲಿ ಈ ಡ್ರೋನ್‌ ಕ್ಯಾಮರಾ ಬಳಕೆ ಆರಂಭಿಸಲಾಗಿದ್ದು, ಈ ಕ್ಯಾಮರಾ 200 ಮೀಟರ್‌ ಎತ್ತರ ಹಾಗೂ 2 ಕಿಮೀ ದೂರದವರೆಗೆ ಹಾರಾಟ ನಡೆಸಿ ವಿವಿಧ ದೃಶ್ಯಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಹೊಂದಿವೆ ಎಂದರು. ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ವಿಸ್ತಾರವಾದ ಜಿಲ್ಲೆಯಾಗಿರುವ ಕಾರಣ ಎರಡು ಡ್ರೋನ್‌ ಕ್ಯಾಮರಾ ಬಳಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಭಟ್ಕಳ, ಕುಮಟಾ, ಹೊನ್ನಾವರ, ಸಿದ್ದಾಪುರ, ಶಿರಸಿ, ಯಲ್ಲಾಪುರ ತಾಲೂಕುಗಳನ್ನು ಒಂದು ವಿಭಾಗವನ್ನಾಗಿ ಮತ್ತು ಅಂಕೋಲಾ, ಕಾರವಾರ, ಜೋಯಿಡಾ, ದಾಂಡೇಲಿ, ಹಳಿಯಾಳ ತಾಲೂಕುಗಳನ್ನು ಮತ್ತೂಂದು ವಿಭಾಗವನ್ನಾಗಿ ಮಾಡಿಕೊಂಡಿದ್ದು, ಈ ಎರಡು ವಿಭಾಗಗಳಲ್ಲಿ ಡ್ರೋನ್‌ ಕ್ಯಾಮರಾ ಕಾರ್ಯಾಚರಣೆಗೆ ಅನುವು ಮಾಡಿಕೊಡುವ ಉದ್ದೇಶ ಹೊಂದಲಾಗಿದೆ ಎಂದರು.

ಡ್ರೋನ್‌ ಕ್ಯಾಮರಾ ಪ್ರಾಯೋಗಿಕ ಪ್ರಾತ್ಯಕ್ಷಿಕೆ ವೀಕ್ಷಿಸಿ ಬಳಿಕ, ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌ ಎಂ.ಪಿ. ಮಾತನಾಡಿ, ಪ್ರಕೃತಿ ವಿಕೋಪದ ವಿಪತ್ತು ನಿರ್ವಹಣಾ ಅನುದಾನದಡಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಒಳಗೊಂಡ ಪೊಲೀಸ್‌ ತಂಡವು ಈ ಡ್ರೋನ್‌ ಕ್ಯಾಮರಾದ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಈ ಕ್ರಮವು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಂತಹ ಕಾರ್ಯಾಚರಣೆ ಹಾಗೂ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಇಟ್ಟಿರುವ ಮಹತ್ತರ ಹೆಜ್ಜೆಯಾಗಿದೆ. ಇದರಿಂದಾಗಿ ಜಿಲ್ಲಾಡಳಿತದ ಶಕ್ತಿ ಹೆಚ್ಚಲು ಸಾಧ್ಯವಾಗುತ್ತಿದ್ದು, ಜಿಲ್ಲಾ ಪೊಲೀಸ್‌ ಇಲಾಖೆ ಕಾರ್ಯ ಅಭಿನಂದನಾರ್ಹ ಎಂದರು.

ಹೆಚ್ಚುವರಿ ಎಸ್ಪಿ ಎಸ್‌. ಬದರೀನಾಥ, ಡಿವೈಎಸ್‌ಪಿ ಅರವಿಂದ ಕಲಗುಜ್ಜಿ, ಡಿಎಸ್‌ಪಿ ಶಿವಾನಂದ ಚಲವಾದಿ, ಕಾರವಾರ ಸಿಪಿಐ ಸಂತೋಷ ಶೆಟ್ಟಿ ಹಾಗೂ ಇತರ ಪೊಲೀಸ್‌ ಸಿಬ್ಬಂದಿ ಉಪಸ್ಥಿರಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.