ದುರ್ಗಪ್ಪ ಗುಡಿಗಾರ ಓರ್ವ ಅಪ್ರತಿಮ ಕಲಾಕಾರ: ಜಿ.ಎಲ್. ಹೆಗಡೆ

ನನಗೆ ದೊಡ್ಡ ಹೆಸರು ತಂದು ಕೊಟ್ಟಿದ್ದರು : ಸುಬ್ರಹ್ಮಣ್ಯ ಧಾರೇಶ್ವರ

Team Udayavani, Apr 9, 2022, 6:33 PM IST

1-dasdsadsa

ಭಟ್ಕಳ: ದುರ್ಗಪ್ಪ ಗುಡಿಗಾರ ಓರ್ವ ಅಪ್ರತಿಮ ಕಲಾಕಾರರಾಗಿದ್ದು, ಅವರೊಂದಿಗಿನ ಒಡನಾಟ ಸದಾ ಹಸಿರಾಗಿದೆ ಎಂದು ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ ಜಿ.ಎಲ್. ಹೆಗಡೆ ಕುಮಟಾ ಅವರು ಹೇಳಿದರು.

ಅವರು ದುರ್ಗಪ್ಪ ಗುಡಿಗಾರ ಮೆಮಮೋರಿಯಲ್ ಯಕ್ಷಗಾನ ಆರ್ಟ್ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ಹಾಗೂ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ “ವರ್ಷದ ಹರ್ಷ ಸಮಾರಂಭ” ಹಾಗೂ ಪ್ರೊ. ಎಂ. ಎ. ಹೆಗಡೆ ದಂಡಕಲ್ ಸಂಸ್ಮರಣೆ, ಯಕ್ಷಗಾನ ಪ್ರದರ್ಶನ ಕಾರ್ಯಕ್ರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು.

ದುರ್ಗಪ್ಪ ಗುಡಿಗಾರ ಅವರ ಮದ್ದಳೆಯ ಮೋಡಿಯನ್ನು ವಿವರಿಸಿದ ಅವರು ತಾವೂ ಕೂಡಾ ಅವರೊಂದಿಗೆ ಯಕ್ಷಗಾನ ಅರ್ಥಗಾರಿಕೆಯಲ್ಲಿ ಭಾಗವಹಿಸಿದ್ದ ಅನುಭವಗಳನ್ನು ಹಂಚಿಕೊಂಡರು. ಯಕ್ಷಗಾನ ಕನ್ನಡ ಭಾಷೆಗೆ ಒಂದು ಉತ್ತಮ ಕೊಡುಗೆಯಾಗಿದ್ದು ಯಕ್ಷಗಾನ ಇರುವ ತನಕವೂ ಕೂಡಾ ಕನ್ನಡಕ್ಕೆ ಯಾವುದೇ ತೊಂದರೆಯಾಗದು ಎಂದರು.

ಯಕ್ಷಗಾನದ ಮೇರು ವ್ಯಕ್ತಿ ದುರ್ಗಪ್ಪ ಗುಡಿಗಾರ ಅವರ ಹೆಸರಿನಲ್ಲಿರುವ ಈ ಸಂಸ್ಥೆ ನೂರಾರು ವರ್ಷಗಳ ಕಾಲ ಬಾಳಲಿ ಎಂದು ಹರಸಿದರು. ಭಟ್ಕಳ ಊರು ಐತಿಹಾಸಿಕವಾಗಿ, ಸಾಹಿತ್ಯಿಕವಾಗಿ ಬಹಳ ದೊಡ್ಡ ಹೆಸರಿದ್ದ ಊರಿದು, ಇದನ್ನು ಹಾಳುಗೆಡವಲು ನೋಡಿದರೂ ಸಹ ಇದು ಮತ್ತೆ ಮತ್ತೆ ಎದ್ದು ನಿಂತಿದೆ. ಮುಂದಿನ ದಿನಗಳಲ್ಲಿ ಇದೊಂದು ಯಕ್ಷಗಾನದ ಕೇಂದ್ರವಾಗಲಿ ಎಂದೂ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಮಾತನಾಡಿ ದುರ್ಗಪ್ಪ ಗುಡಿಗಾರರು ಕೇವಲ ಮದ್ದಲೆಯ ಮಾಂತ್ರಿಕ ಮಾತ್ರವಲ್ಲ ಉತ್ತಮ ಭಾಗವತರೂ ಕೂಡಾ ಹೌದು. ಕಾಳಿದಾಸ ಪ್ರಸಂಗದಲ್ಲಿನ ಒಂದು ಪದ್ಯದ ಶೈಲಿಯನ್ನು ತಮಗೆ ತಿಳಿಸಿಕೊಟ್ಟು ಆ ಪ್ರಸಂಗದಲ್ಲಿ ತನಗೆ ದೊಡ್ಡ ಹೆಸರು ತಂದು ಕೊಡುವಂತೆ ಮಾಡಿದ್ದರು ಎಂದು ನೆನಪಿಸಿಕೊಂಡರು.

ಇನ್ನೋರ್ವ ಮುಖ್ಯ ಅತಿಥಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉ.ಕ.ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಮಾತನಾಡಿ ದುರ್ಗಪ್ಪ ಗುಡಿಗಾರ್ ಓರ್ವ ಅಪ್ರತಿಮ ಕಲಾವಿದರಾದರೂ ಕೂಡಾ ಎಂದೂ ಪ್ರಚಾರ ಬಯಸಿದವರಲ್ಲ. ಇಂದಿನ ದಿನಗಳಲ್ಲಿ ಆಗಿದ್ದರೆ ಅವರು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುವುದಲ್ಲದೇ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗುತ್ತಿದ್ದರು ಎಂದರು.

ಟ್ರಸ್ಟ್ ವತಿಯಿಂದ ಯಕ್ಷಗಾನಕ್ಕಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟ ಯಕ್ಷರಕ್ಷೆಯ ಅಧ್ಯಕ್ಷ ಡಾ. ಐ. ಆರ್. ಭಟ್ಟ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಾತನಾಡಿದ ಅವರು ತನ್ನ ಜೀವನದ ಗುರಿಯೇ ಯಕ್ಷಗಾನವನ್ನು ಉಳಿಸುವುದಾಗಿದೆ. ತಮ್ಮ ತಂದೆ ತಾಯಿಯವರೇ ಇದಕ್ಕೆ ಪ್ರೇರಣೆಯಾಗಿದ್ದು ಕೊಪ್ಪದಮಕ್ಕಿ ಭಾಗವತರ ಪ್ರಭಾವ ಕೂಡಾ ತನ್ನ ಯಕ್ಷಪ್ರೇಮಕ್ಕೆ ಕಾರಣ ಎಂದರು.

ಟ್ರಸ್ಟಿನ ಅಧ್ಯಕ್ಷೆ ಶಾರದಾ ದುರ್ಗಪ್ಪ ಗುಡಿಗಾರ ಅವರು ಮಾತನಾಡಿ ಗುಡಿಗಾರರು ಹಾಗೂ ಧಾರೇಶ್ವರರ ಸುದೀರ್ಘ ಜುಗಲ್‍ಬಂದಿಯ ಕುರಿತು ವಿವರಿಸುತ್ತಾ, ತಮ್ಮ ಕುಟುಂಬ ಎದುರಿಸಿದ ಸಂಕಷ್ಟಗಳ ಕುರಿತು ವಿವರಿಸಿದರು. ವೇದಿಕೆಯಲ್ಲಿ ಮಂಜೂಷಾ ಗುಡಿಗಾರ ಉಪಸ್ಥಿತರಿದ್ದರು. ಉಮಾ ಗುಡಿಗಾರ ಪ್ರಾರ್ಥಿಸಿದರು. ಉಪನ್ಯಾಸಕ ಗಣಪತಿ ಕಾಯ್ಕಿಣಿ ಸ್ವಾಗತಿಸಿದರು. ಕೆ.ಬಿ. ಹೆಗಡೆ ಮುರ್ಡೇಶ್ವರ ನಿರ್ವಹಿಸಿ ವಂದಿಸಿದರು. ಎನ್.ಟಿ.ಭಂಡಾರಿ, ಚಂದ್ರಕಾಂತ ಕಿಣಿ, ವೀಣಾ ಸಹಕರಿಸಿದರು.

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.