ಇ-ಶಿಕ್ಷಣ ಕೇಂದ್ರ ಉದ್ಘಾಟನೆ
Team Udayavani, Jun 2, 2019, 2:41 PM IST
ಹೊನ್ನಾವರ: ಇ-ಶಿಕ್ಷಣ ಕೇಂದ್ರವನ್ನು ಮಾವಿನಕುರ್ವಾ ಪಂಚಾಯತ್ ಅಧ್ಯಕ್ಷ ತಿಲಕ ಗೌಡ ಉದ್ಘಾಟಿಸಿದರು.
ಹೊನ್ನಾವರ: ಹೊಸಾಡಿನ ಶರಾವತಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಸಲುವಾಗಿ ಇ-ಶಿಕ್ಷಣ ಉದ್ಘಾಟನೆ ನಡೆಯಿತು.
ಶರಾವತಿ ಶಿಕ್ಷಣ ಸಂಸ್ಥೆ ಹಾಗೂ ದಾನಿಗಳ ನೆರವಿನಿಂದ ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಆಧಾರಿತ ಇ-ಶಿಕ್ಷಣ ವ್ಯವಸ್ಥೆಯನ್ನು ಮಾವಿನಕುರ್ವಾ ಪಂಚಾಯತ್ ಅಧ್ಯಕ್ಷ ತಿಲಕ ಗೌಡ ಉದ್ಘಾಟಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಇಂತಹ ಆಧುನಿಕ ಪದ್ಧತಿ ಅಳವಡಿಸಿಕೊಂಡಿರುವ ಪ್ರೌಢಶಾಲೆಯ ಪ್ರಯತ್ನವನ್ನು ಶ್ಲಾಘಿಸಿದರು.
ಅಧ್ಯಕ್ಷ ಆರ್.ವಿ. ಶಾನಭಾಗ ಮಾತನಾಡಿ ಶಿಕ್ಷಣದಲ್ಲಿ ಮಕ್ಕಳು ನೋಡುವುದರಿಂದ ಬೇಗ ಕಲಿಯುತ್ತಾರೆ. ಕಾರಣ ಇಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ನಮ್ಮ ಶಾಲೆ ಮಕ್ಕಳಿಗೆ ವಿಷಯದ ಜ್ಞಾನವನ್ನು ಬೇಗನೆ ಅರ್ಥ ಮಾಡಿಸಲು ಇದು ಸಹಕಾರಿ ಎಂದರು.
ಎಂಟನೇ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ಹಾಗೂ ಪಠ್ಯ-ಪುಸ್ತಕಗಳನ್ನು ವಿತರಿಸಲಾಯಿತು. ಮುಖ್ಯಾಧ್ಯಾಪಕ ಜಿ.ಎನ್. ಗಣಪತಿ ಸ್ವಾಗತಿಸಿದರು. ಬಿ.ಕೆ. ಕನ್ನಣ್ಣನವರ್ ವಂದಿಸಿದರು. ರಮೇಶ ಮೇಸ್ತ ನಿರೂಪಿಸಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಮಹೇಶ ಹೆಗಡೆ, ಸದಸ್ಯರಾದ ಹನುಮಂತ ಗೌಡ, ಮಂಜುನಾಥ ಗೌಡ ಹಾಗೂ ವಿದ್ಯಾರ್ಥಿ ಪಾಲಕರು, ಶಿಕ್ಷಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ