ರೇಷನ್‌ಗಾಗಿ ಇ-ಕೆವೈಸಿ ಸಲ್ಲಿಕೆ ಕಡ್ಡಾಯ

•ಪಡಿತರ ಧಾನ್ಯ ಅಂಗಡಿ ಎದುರು ಸಾಲುಗಟ್ಟಿ ನಿಂತ ಸಾರ್ವಜನಿಕರು

Team Udayavani, Jun 17, 2019, 3:25 PM IST

uk-tdy-4..

ಅಂಕೋಲಾ: ರೇಷನ್‌ ಅಂಗಡಿಯಲ್ಲಿ ಇ-ಕೆವೈಸಿ ಸಲ್ಲಿಸುತ್ತಿರುವ ಪಡಿತರ ಕಾರ್ಡದಾರರು.

ಅಂಕೋಲಾ: ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗೆ ಹೋಗಿ ತಮ್ಮ ಪಡಿತರ ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರ ಬೆರಳಚ್ಚು ನೀಡಿ ಇ-ಕೆವೈಸಿ ಮಾಡಿಸಲು ರೇಷನ್‌ ಅಂಗಡಿ ಎದುರು ಜಮಾಯಿಸುತ್ತಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಆದೇಶದನ್ವಯ ಇ-ಕೆವೈಸಿ ಅಪ್‌ಲೋಡ್‌ ಕಾರ್ಯಗಳು ತಾಲೂಕಿನ ಎಲ್ಲಾ ರೇಷನ್‌ ಅಂಗಡಿಗಳಲ್ಲಿ ಆರಂಭವಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ನಿಯಮದಂತೆ ಅಂತ್ರ್ಯೋದಯ, ಬಿಪಿಎಲ್, ಎಪಿಎಲ್ ಕಾರ್ಡ್‌ ಮೂಲಕ ರೇಷನ್‌ ಅಂಗಡಿಯಲ್ಲಿ ಆಹಾರಧಾನ್ಯ ಪಡೆಯುತ್ತಿರುವವರು ಇ-ಕೆವೈಸಿ ಅನ್ನು ಜೂ.1 ರಿಂದ ಜು.31ರ ಒಳಗಾಗಿ ತಮ್ಮ ಕುಟುಂಬ ಸದಸ್ಯರ ಆನ್‌ಲೈನ್‌ನಲ್ಲಿ ಅಪಲೋಡ್‌ ಮಾಡಬೇಕಾಗಿದೆ. ಇದರ ಜೊತೆಯಲ್ಲಿಯೆ ಕಾರ್ಡ್‌ನಲ್ಲಿ ಬದಲಾವಣೆ ತಂದಿದ್ದು ಮನೆಯ ಯಜಮಾನಿ ಮುಖ್ಯಸ್ಥೆಯಾಗಿ ಮಾಡಲಾಗುತ್ತಿದೆ.

ಪರ ಊರಿನಲ್ಲಿರುವ ಮತ್ತು ಎರಡೆರಡು ರೇಷನ್‌ ಕಾರ್ಡ್‌ ಹೊಂದಿರುವವರು, ಮೃತಪಟ್ಟವರು ಕಾರ್ಡ್‌ನಲ್ಲಿ ಹೆಸರು ಉಳಿದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಅಂತಹದನ್ನು ಹೊರಹಾಕಲು ಮತ್ತು ಅಕ್ರಮವನ್ನು ತಪ್ಪಿಸಲು ಬೆರಳಚ್ಚು ಪಡೆಯಲಾಗುತ್ತಿದೆ. ಕಾರ್ಡ್‌ನಲ್ಲಿ ಹೆಸರಿರುವ ಎಲ್ಲರೂ ಬೆರಳಚ್ಚು ನೀಡುವುದು ಕಡ್ಡಾಯವಾಗಿದೆ.

ತಾಲೂಕಿನಲ್ಲಿ ಒಟ್ಟೂ 35 ರೇಷನ್‌ ಅಂಗಡಿಯಲ್ಲಿ ಇ-ಕೆವೈಸಿ ಆರಂಭವಾಗಿದೆ. 28161 ಪಡಿತರ ಕಾರ್ಡ್‌ ತಾಲೂಕಿನಲ್ಲಿದ್ದು ಅದರಲ್ಲಿ ಅಂತ್ರ್ಯೋದಯ 944, ಬಿಪಿಎಲ್ 25077 ಮತ್ತು ಎಪಿಎಲ್ 2140 ಕಾರ್ಡುದಾರರು ಇದ್ದಾರೆ.

ಸರ್ವರ್‌ ಸಮಸ್ಯೆ: ಜೂ.1 ರಿಂದ ಇ-ಕೆವೈಸಿ ಕಾರ್ಯ ತಾಲೂಕಿನ ಎಲ್ಲಾ ರೇಷನ್‌ ಅಂಗಡಿಗಳಲ್ಲಿ ಆರಂಭವಾಗಿದ್ದು ಎಲ್ಲೆಡೆ ಸರ್ವರ್‌ ತೊಂದರೆ ಕೊಡುತ್ತಿರುವ ಕಾರಣ ಕಾರ್ಡುದಾರರ ಇ-ಕೆವೈಸಿ ಸರಿಯಾಗಿ ಆಗುತ್ತಿಲ್ಲ. ಇದರಿಂದ ಕಾರ್ಡುದಾರರು ಪ್ರತಿನಿತ್ಯ ತಮ್ಮ ಕುಟುಂಬವನ್ನು ಕರೆದುಕೊಂಡು ರೇಷನ್‌ ಅಂಗಡಿಗೆ ಅಲೆಯುತ್ತಿರುವುದು ಕಂಡುಬರುತ್ತಿದೆ. ನಿಗದಿತ ಅವಧಿಯೊಳಗೆ ಅಪ್‌ಲೋಡ್‌ ಮಾಡದಿದ್ದಲ್ಲಿ ಆಗಸ್ಟ್‌ ತಿಂಗಳಿನಿಂದ ಆಹಾರ ಧಾನ್ಯ ವಿತರಣೆ ಸ್ಥಗಿತಗೊಳ್ಳುತ್ತದೆ.

ಅಂಗಡಿ ಮಾಲಕರಿಗೆ ತರಬೇತಿ: ಇ-ಕೆವೈಸಿ ಮಾಡುವ ಕುರಿತು ತಾಲೂಕಿನ 35 ರೇಷನ್‌ ಅಂಗಡಿ ಕಂಪ್ಯೂಟರ್‌ ಆಪೇಟರ್‌ಗಳಿಗೆ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ತರಬೇತಿ ನೀಡಲಾಗಿದೆ. ಕಾರ್ಡುದಾರರಿಗೆ ಯಾವುದೇ ತೊಂದರೆ ಆಗದಂತೆ ಇ-ಕೆವೈಸಿ ಮಾಡಿಸಿಕೊಳ್ಳಲು ಅವರಿಗೆ ಸೂಚಿಸಲಾಗಿದ್ದು ಅಂಗಡಿಯವರು ಕಾರ್ಡುದಾರರಿಗೆ ಮಾಹಿತಿ ನೀಡಿ ಕಾರ್ಯ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.