ಶೇಡಿಗದ್ದೆಗೆ ಬಂತು ವಿದ್ಯುತ್‌ ಬೆಳಕು!

•ಪಂ| ದೀನ ದಯಾಳ ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ಮಂಜೂರು: ಶಾಸಕ ದಿನಕರ ಶೆಟ್ಟಿ

Team Udayavani, Jun 2, 2019, 9:37 AM IST

uk-tdy-2..

ಕುಮಟಾ: ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಈವರೆಗೆ ಚಿಮಣಿ ದೀಪದಲ್ಲೇ ಜೀವನ ನಡೆಸುತ್ತಿದ್ದ ತಾಲೂಕಿನ ಯಾಣ ಸಮೀಪದ ಶೇಡಿಗದ್ದೆ ಗ್ರಾಮಕ್ಕೆ ಪಂ| ದೀನ ದಯಾಳ ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ಅಡಿ ಮಂಜೂರಾದ ವಿದ್ಯುತ್‌ಗೆ ಶಾಸಕ ದಿನಕರ ಶೆಟ್ಟಿ ಶನಿವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಕನಸಿನ ಯೋಜನೆಗಳಲ್ಲೊಂದಾದ ದೀನ್‌ ದಯಾಳ ಉಪಾಧ್ಯಾಯ ವಿದ್ಯುದ್ದೀಕರಣ ಯೋಜನೆ ಗ್ರಾಮೀಣ ಭಾಗಗಳ ಜನರ ಕಷ್ಟದ ಬದುಕಿಗೆ ಉಪಯೋಗವಾಗುತ್ತಿದೆ. ಈ ಕುಗ್ರಾಮಕ್ಕೆ ಬಂದು ಹೋಗುವುದೇ ಒಂದು ದೊಡ್ಡ ಸಾಹಸ. ಈ ಭಾಗದ ಶಾಸಕನಾಗಿ ಇಲ್ಲಿಯ ಜನರಿಗೆ ಮೂಲ ಸೌಕರ್ಯಗಳನ್ನು ದೊರಕಿಸಿಕೊಡುವುದು ನನ್ನ ಜವಾಬ್ದಾರಿ. ಕೇವಲ 12 ಮನೆಗಳಿಗೆ 150 ಕಂಬಗಳನ್ನು ಅಳವಡಿಸಿ ಎರಡು ವರ್ಷಗಳ ಹಿಂದೆ ಕಾರ್ಯರೂಪಕ್ಕೆ ಬಂದ ಈ ಯೋಜನೆ ಇಂದು ಮುಕ್ತಾಯಗೊಂಡಿದೆ. ಮೊದಲ ಹಂತದಲ್ಲಿ ಇಷ್ಟು ಮನೆಗಳಿಗೆ ವಿದ್ಯುತ್‌ ನೀಡಲಾಗಿದ್ದು, ಇನ್ನುಳಿದ ಮನೆಗಳಿಗೆ ಮುಂದಿನ ದಿನಗಳಲ್ಲಿ ಪೂರೈಸಲಾಗುತ್ತದೆ ಎಂದರು.

ಈ ಭಾಗದ ರಸ್ತೆಯ ಕುರಿತು ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಶೀಘ್ರದಲ್ಲಿ ರಸ್ತೆ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು. ಈ ರಸ್ತೆಯಲ್ಲಿ ಸಿಗುವ ಕಾಲುಸಂಕಕ್ಕೆ ಕಿರುಸೇತುವೆ ಮಂಜೂರಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದಾರೆ. ಈ ಗ್ರಾಮದ ಹಲವು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಶ್ರಮಿಸಿ ಹಂತ ಹಂತವಾಗಿ ಕಾರ್ಯರೂಪಕ್ಕೆ ತರುತ್ತೇನೆ ಎಂದರು.

ಜಿಪಂ ಸದಸ್ಯ ಗಜಾನನ ಪೈ ಮಾತನಾಡಿ, ಈ ಗ್ರಾಮಕ್ಕೆ ವಿದ್ಯುತ್‌ ಇಲ್ಲದಿರುವುದರಿಂದ ಇಲ್ಲಿಯ ಯುವಕರಿಗೆ ಹೆಣ್ಣು ಕೊಡುವುದಿಲ್ಲ ಎಂಬ ಮಾತೂ ಕೇಳಿ ಬರುತ್ತಿತ್ತು. ಅದಲ್ಲದೇ, ಅನೇಕ ವರ್ಷಗಳಿಂದ ವಿದ್ಯುತ್‌ ಇಲ್ಲದೆ ಇಲ್ಲಿಯ ಜನರು ಕರಾಳ ದಿನಗಳನ್ನು ಕಳೆದಿದ್ದಾರೆ. ಮೋದಿಯವರ ಹಾಗೂ ಶಾಸಕ ದಿನಕರ ಶೆಟ್ಟಿಯವರ ಪ್ರಾಮಾಣಿಕ ಪ್ರಯತ್ನದಿಂದ ಅದು ಈಗ ದೂರವಾಗಿದೆ. ನಾಲ್ಕು ಗ್ರಾಪಂ ವ್ಯಾಪ್ತಿಯಲ್ಲಿ ದೀನ ದಯಾಳ ವಿದ್ಯುದ್ದೀಕರಣ ಯೋಜನೆ ಪ್ರಗತಿ ಹೊಂದಿದೆ ಎಂದರು.

ಸ್ಥಳೀಯ ವೆಂಕಟ್ರಮಣ ಮರಾಠಿ ಮಾತನಾಡಿ, ಇಷ್ಟು ವರ್ಷಗಳ ನಮ್ಮ ಕಷ್ಟದ ಬುದುಕು ಪ್ರಧಾನಿ ನರೇಂದ್ರ ಮೋದಿ ಹಾಗೂ ನಮ್ಮ ಭಾಗದ ಶಾಸಕ ದಿನಕರ ಶೆಟ್ಟಿ ಮತ್ತು ಜಿ.ಪಂ. ಸದಸ್ಯ ಗಜಾನನ ಪೈ ಅವರಿಂದ ಕೊಂಚ ದೂರವಾಗಿದೆ. ಅವರ ಪ್ರಾಮಾಣಿಕ ಪ್ರಯತ್ನಕ್ಕೆ ಗ್ರಾಮಸ್ಥರು ಚಿರರುಣಿ. ಇವರಿಂದ ಈ ಗ್ರಾಮಕ್ಕೆ ಆಗುವಂತಹ ಇನ್ನುಳಿದ ಮೂಲ ಸೌಕರ್ಯ ಅಪೇಕ್ಷಿಸುತ್ತೇವೆ ಎಂದರು.

ವಿದ್ಯುತ್‌ ಸಂಪರ್ಕದಿಂದ ಗ್ರಾಮಸ್ಥರ ಹರ್ಷ ಮುಗಿಲು ಮುಟ್ಟಿತ್ತು. ಶೇಡಿಗದ್ದೆ ಗ್ರಾಮದ ಕಮಲಾಕರ ಮರಾಠಿ, ನಾಗವೇಣಿ ಮರಾಠಿ, ಶಿವರಾಮ ಮರಾಠಿ, ರಾಮಚಂದ್ರ ಪರಾಠಿ, ಗೋಪಾಲ ಪರಾಠಿ, ಸೋಮಾ ಮರಾಠಿ, ಗಣಪತಿ ಮರಾಠಿ, ಶೇಖರ ಮರಾಠಿ, ದಾಮೋದರ ಮರಾಠಿ, ಹರೀಶ ಮರಾಠಿ, ಲೂಮಾ ಮರಾಠಿ ಇವರ ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಫಲಾನುಭವಿಗಳಿಗೆ ಬಲ್ಪ್ ವಿತರಿಸಿದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.