ಕಾಡಾನೆ ದಾಳಿ; ಆಲೂರಿನಲ್ಲಿ ಭತ್ತ ಹಾಗೂ ಕಬ್ಬಿನ ಗದ್ದೆಗಳಿಗೆ ಹಾನಿ
ಸಂಕಷ್ಟದಲ್ಲಿ ರೈತರು : ಸೂಕ್ತ ಕ್ರಮಕ್ಕೆ ಮನವಿ
Team Udayavani, Jul 26, 2023, 6:04 PM IST
ದಾಂಡೇಲಿ : ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಕಾಡಾನೆಗಳ ದಾಳಿ ದಿನೆ ದಿನೇ ಹೆಚ್ಚಾಗತೊಡಗಿದ್ದು, ಸ್ಥಳೀಯ ರೈತರಲ್ಲಿ ಆತಂಕ ಮನೆ ಮಾಡಿದೆ. ಪ್ರತಿದಿನ ಬಿಡದೇ ಕಾಡಾನೆಗಳು ಇಲ್ಲಿಯ ಕಬ್ಬು ಮತ್ತು ಭತ್ತದ ಗದ್ದೆಗಳಿಗೆ ದಾಳಿ ಮಾಡಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಮಾಡುತ್ತಿವೆ. ಬುಧವಾರವೂ ನಸುಕಿನ ವೇಳೆಯಲ್ಲಿ ಕಾಡಾನೆಗಳ ಹಿಂಡು ರೈತರ ಹೊಲ ಗದ್ದೆಗೆ ನುಗ್ಗಿ ಕೃಷಿ ಬೆಳೆಗಳನ್ನು ದ್ವಂಸ ಮಾಡಿವೆ.
ಬೆವರು ಸುರಿಸಿ ದುಡಿದ ಕೃಷಿ ಬೆಳೆ ವನ್ಯಪ್ರಾಣಿಗಳ ಪಾಲಾಗುತ್ತಿರುವುದರಿಂದ ಇಲ್ಲಿಯ ರೈತರು ಸಂಕಷ್ಟದ ಪರಿಸ್ಥಿಯನ್ನು ಅನುಭವಿಸುವಂತಾಗಿದೆ.
ಕಳೆದ ಅನೇಕ ವರ್ಷಗಳಿಂದ ಕೃಷಿ ಚಟುವಟಿಕೆಯನ್ನು ನಡೆಸುತ್ತಾ ಬಂದಿದ್ದರೂ, ಇಲ್ಲಿ ಕೆಲ ರೈತರ ಕೃಷಿ ಭೂಮಿ ಅತಿಕ್ರಮಿಸಲ್ಪಟ್ಟ ಭೂಮಿ ಎಂಬ ಹಿನ್ನಲೆಯಲ್ಲಿ ವನ್ಯಪ್ರಾಣಿಗಳ ಹಾವಳಿಯಿಂದ ಕೃಷಿ ಹಾನಿಗೊಳಗಾದ ರೈತರಿಗೆ ಅರಣ್ಯ ಇಲಾಖೆಯಿಂದ ಪರಿಹಾರವು ಸಿಗದಂತಾಗಿದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ರಾಜ್ಯ ಸರಕಾರ ಸ್ಥಳೀಯ ರೈತರ ಬೆವರ ಹನಿಗೆ ಸೂಕ್ತ ರೀತಿಯಲ್ಲಿ ನ್ಯಾಯ ದೊರಕಿಸಿಕೊಡಬೇಕೆಂದು ಸ್ಥಳೀಯ ರೈತರಾದ ವಿಷ್ಣು ರಾಮಚಂದ್ರ ಪಾಟೀಲ್ ಅವರು ನಗರದಲ್ಲಿ ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’