ಯಶಸ್ವಿಯಾಗಿ ಸಂಪನ್ನಗೊಂಡ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ


Team Udayavani, Oct 17, 2021, 5:42 PM IST

ಯಶಸ್ವಿಯಾಗಿ ಸಂಪನ್ನಗೊಂಡ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ

ದಾಂಡೇಲಿ: ನಗರದ ಗಾಂಧಿನಗರದ ಸಾಯಿ ಯುವಕ ಮಂಡಳದ ಆಶ್ರಯದಲ್ಲಿ ಹಳೆ ನಗರ ಸಭಾ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಮುಕ್ತ ಪ್ರೊ ಕಬಡ್ಡಿ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಶನಿವಾರ ರಾತ್ರಿ ಆರಂಭವಾದ ಪಂದ್ಯಾವಳಿ ಭಾನುವಾರ ಬೆಳಿಗ್ಗೆ ಮುಕ್ತಾಯ ಗೊಂಡಿತು.

ನಗರದಲ್ಲಿ ಮೊದಲ ಬಾರಿಗೆ ನಡೆದ ಪ್ರೊ ಕಬಡ್ಡಿ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೇಕರ ಅವರು ಉದ್ಘಾಟಿಸಿ, ಪರಸ್ಪರ ಸೌಹಾರ್ಧತೆ ಮತ್ತು ಉತ್ತಮ ಆರೋಗ್ಯ ನಿರ್ಮಾಣಕ್ಕೆ ಕ್ರೀಡೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಸಾಯಿ ಯುವಕ ಮಂಡಳದವರು ಕ್ರೀಡಾ ಉತ್ಸಾಹದೊಂದಿಗೆ ಪಂದ್ಯಾವಳಿಯನ್ನು ಆಯೋಜಿಸುವುದರ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡಿದ್ದಾರೆ ಎಂದು ಹೇಳಿ ಸಾಯಿ ಯುವಕ ಮಂಡಳದ ಕಾರ್ಯವನ್ನು ಶ್ಲಾಘಿಸಿ ಪಂದ್ಯಾವಳಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಪಂದ್ಯಾವಳಿಯ ಸಂಘಟಕ ಮಹೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪಂದ್ಯಾವಳಿಯ ಯಶಸ್ಸಿಗೆ ಎಸ್.ಎಲ್.ಘೋಟ್ನೇಕರ ಅವರು ಹಾಗೂ ದಾನಿಗಳು ತುಂಬು ಹೃದಯದ ಸಹಕಾರ ನೀಡಿರುವುದರಿಂದ ಪಂದ್ಯಾವಳಿಯನ್ನು ಆಯೋಜಿಸಲು ಸಾಧ್ಯವಾಯ್ತು ಎಂದರು. ಸಾಯಿ ಯುವಕ ಮಂಡಳದ ಪರವಾಗಿ ಸಂಘಟಕರುಗಳಾದ ಮಹೇಶ್, ಸಂಜು, ರಾಘವೇಂದ್ರ ಮತ್ತು ಸ್ಯಾಮಸನ್ ಅವರುಗಳು ಎಸ್.ಎಲ್.ಘೋಟ್ನೇಕರ ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಯುವ ನ್ಯಾಯವಾದಿ ವಿಶ್ವನಾಥ ಜಾಧವ್, ಮುಖಂಡರುಗಳಾದ ದಾದಾಪೀರ್ ನದಿಮುಲ್ಲಾ, ರಾಮಲಿಂಗ ಜಾಧವ್, ರವಿ ಸುತಾರ್, ಗಣೇಶ ಖಾನಪುರಿ, ಅಜೀತ್ ಥೋರಾತ್, ಶ್ರೀನಾಥ್ ಮಿರಾಶಿ, ವಿಜಯ್ ಮಿರಾಶಿ, ಕೃಷ್ಣ ಗೌಡ, ಸಂತೋಷ ತಾಂಬೂಡಾ, ಸಂದೀಪ್ ಸಿದ್ದಾನಿ ಹಾಗೂ ಸಾಯಿ ಯುವಕ ಮಂಡಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹೊನಲು ಬೆಳಕಿನ ಈ ಪಂದ್ಯಾವಳಿಯನ್ನು ನೋಡಲು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಕೂಟದಲ್ಲಿ ಒಟ್ಟು 15 ತಂಡಗಳು ಭಾಗವಹಿಸಿದ್ದವು. ಅಂತಿಮವಾಗಿ ಕೊಲ್ಲಾಪುರದ ಶಿವಮುದ್ರ ತಂಡ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ನಗರದ ಗಾಂಧಿನಗರದ ಎಸ್.ವೈ.ಎಂ ತಂಡ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಕೊಲ್ಲಾಪುರದ ಜೈ ಶಿವರಾಯಿ ತಂಡ ತೃತೀಯ ಬಹುಮಾನವನ್ನು ಪಡೆದುಕೊಂಡಿತು. ಹಳಿಯಾಳದ ಮಲ್ವಾಡಿ ತಂಡ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಪಂದ್ಯಾವಳಿಯಲ್ಲಿ ಉತ್ತಮ ಕ್ಯಾಚರ್ ಹಾಗೂ ಸವ್ಯಸಾಚಿ ಆಟಗಾರರಾಗಿ ಕೊಲ್ಲಾಪುರದ ಶಿವಮುದ್ರ ತಂಡದ ಅತುಲ್ ಮತ್ತು ಮೋಹನ್ ಕ್ರಮವಾಗಿ ಬಹುಮಾನವನ್ನು ಪಡೆದುಕೊಂಡರು. ಎಸ್.ವೈ.ಎಂ ತಂಡದ ರಾಮು ಗಾವಡೆ ಉತ್ತಮ ದಾಳಿಗಾರನಾಗಿ ಬಹುಮಾನಕ್ಕೆ ಪಾತ್ರರಾದರು. ಅತ್ಯುತ್ತಮ ತಂಡಕ್ಕೆ ನೀಡುವ ಪ್ರಶಸ್ತಿ ಹಳಿಯಾಳದ ಮಲ್ವಾಡಿ ತಂಡದ ಪಾಲಾಯ್ತು.

ಬಹುಮಾನ ವಿತರಣೆಯನ್ನು ಯುವ ನ್ಯಾಯವಾದಿ ಹಾಗೂ ಶ್ರೀ.ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ಜಾಧವ್, ನಗರ ಸಭಾ ಸದಸ್ಯ ಬುದ್ದಿವಂತ ಗೌಡ ಪಾಟೀಲ, ಸಮಾಜ ಸೇವಕ ದಾದಾಪೀರ್ ನದೀಮುಲ್ಲಾ, ಮಾಜಿ ನಗರ ಸಭಾ ಸದಸ್ಯ ರವಿ ಸುತಾರ್, ಮುಖಂಡರುಗಳಾದ ಸಂತೋಷ ಸೋಮನಾಚೆ, ಗಣೇಶ ಖಾನಪುರಿ, ಕೃಷ್ಣ ಗೌಡ, ಸಂತೋಷ ತಾಂಬೂಡಾ, ವಿಜಯ್ ಮಿರಾಶಿ, ಶ್ರೀನಾಥ್ ಮಿರಾಶಿ ಮೊದಲಾದವರು ನೀಡಿದರು.

ಪಂದ್ಯಾವಳಿಯ ಯಶಸ್ಸಿಗೆ ಸಾಯಿ ಯುವಕ ಮಂಡಳದ ಮಹೇಶ್, ಸಂಜು, ರಾಘವೇಂದ್ರ, ಸ್ಯಾಮಸನ್ ಅಹರ್ನಿಶಿ ಶ್ರಮಿಸಿದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.