ಪ್ಲಾಸ್ಟಿಕ್‌- ತ್ಯಾಜ್ಯಗಳಿಂದಾಗಿ ಪರಿಸರ ನಾಶ

ಕಸ ವಿಲೇವಾರಿ ಘಟಕಕ್ಕಿಲ್ಲ ಗೇಟ್‌-ಪ್ಲಾಸ್ಟಿಕ್‌ಗಳಿಂದ ಜಾನುವಾರುಗಳಿಗೆ ಅಪಾಯ

Team Udayavani, Jun 2, 2022, 12:03 PM IST

7

ಯಲ್ಲಾಪುರ: ಪಟ್ಟಣದ ಕಸದ ವಿಲೇವಾರಿ ಘಟಕ ಎಲ್ಲಾ ನೀತಿ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ. ಘಟಕ ಮಾಡಿದಾಗಿನಿಂದ ಹಿಡಿದು ಇವತ್ತಿನ ವರೆಗೂ ಕಾಮಗಾರಿ ಯಾವುದೇ ಮಾಹಿತಿ ಇಲ್ಲ. ಆವರಣದೊಳಗಿದ್ದ ಭಾರೀ ಪ್ರಮಾಣದಲ್ಲಿ ಬೆಲೆಬಾಳುವ ಮರಗಳನ್ನು ತೆಗೆದು ಉಪಯೋಗಿಸದೇ ಸರಕಾರಕ್ಕೆ ಬರುವ ಆದಾಯಕ್ಕೆ ಕತ್ತರಿ ಹಾಕಲಾಗಿದೆ. ಅಷ್ಟೇ ಅಲ್ಲದೆ ಕಸಗಳಿಗೆ ಬೆಂಕಿ ಹಾಕುವ ಮೂಲಕ ಒಳಗಿದ್ದ ನೂರಾರು ಮರಗಳ ಮಾರಣ ಹೋಮ ಮಾಡಲಾಗಿದೆ. ಹೀಗೆ ಒಣಗಿಸಿ ಬಿದ್ದ ಮರಗಳಿಗೆ ಬೆಂಕಿಯಿರಿಸಿ ಬೂದಿ ಮಾಡಿ ಮರದ ಬುಡಚಿಯ ಲವಲೇಶವೂ ಇಲ್ಲದಂತೆ ಮಾಡಲಾಗಿದೆ. ಇಷ್ಟಕ್ಕೂ ಅರಣ್ಯ ಇಲಾಖೆ ಈ ಬಗ್ಗೆ ಯಾಕೆ ಕ್ರಮ ವಹಿಸಿಲ್ಲ ಎಂಬುದು ಸಾರ್ವಜನಿಕರ ಕಳಕಳಿಯ ಪ್ರಶ್ನೆಯಾಗಿದೆ. ಕಸ ವಿಲೇವಾರಿ ಘಟಕಕ್ಕೆ ಸರಿಯಾದ ಗೇಟ್‌ ಇಲ್ಲ. ಗ್ರಾಮೀಣ ಭಾಗದ ದನಕರುಗಳು ಒಳಹೋಗಿ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ತಿಂದು ರೋಗಕ್ಕೆ ತುತ್ತಾಗುತ್ತಿವೆ.

ಕಸವಿಲೇವಾರಿ ಘಟಕ ನಿರ್ಮಾಣ ಮಾಡುವಾಗ ಅನೇಕ ನಿಬಂಧನೆ ಹಾಕಿದ್ದರೂ ಅದನ್ನೂ ಸಂಪೂರ್ಣ ಗಾಳಿಗೆ ತೂರಲಾಗಿದೆ ಎಂದು ಆನಗೋಡ ಗ್ರಾಪಂ ಸದಸ್ಯರು ದೂರಿದ್ದಾರೆ.

ಕಸಕ್ಕೆ ಬೆಂಕಿ ಹಾಕದೆ ಜೈವಿಕ ಗೊಬ್ಬರ ಮಾಡಬೇಕು ಎಂಬ ನಿಯಮವಿದೆ. ವೈಜ್ಞಾನಿಕವಾಗಿ ಸಂಸ್ಕರಿಸಿ ಆದಾಯ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಿತ್ತು. ಅದನ್ನು ಬಿಟ್ಟು ಬೆಂಕಿ ಹಾಕಿ, ಇರುವ ಮರವನ್ನು ಸುಟ್ಟು ನಾಶ ಮಾಡುತ್ತಿರುವುದು ಎಷ್ಟು ಸರಿ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಈ ಹಿಂದೆ ಮಾನವಹಕ್ಕು ಆಯೋಗಕ್ಕೆ ಸಾರ್ವಜನಿಕರು ದೂರಿದಾಗ ಆಯೋಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಸೂಚಿಸಿ ಹೋಗಿದ್ದರು. ಆದರೆ ಅದಲ್ಲೆವನ್ನು ಪಪಂ ಅಧಿಕಾರಿಗಳು ಮರೆತಂತಿದೆ. ಒಂದಷ್ಟು ಕಾಮಗಾರಿ ನಡೆದರೂ ಯಾವುದೇ ನಾಮಫಲಕವಿಲ್ಲ. ಘಟಕಕ್ಕೆ ಬೇಕಾಬಿಟ್ಟಿ ಸರಕಾರದ ಹಣ ಹಾಕಲಾಗಿದ್ದು ಹಣದ ಸದುಪಯೋಗವಾಗಿಲ್ಲ ಎಂಬ ದೂರು ಕೇಳಿಬಂದಿದೆ.

 

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.