ಪ್ರತೀ ವರ್ಷ ಹತ್ತು ಯಕ್ಷಗಾನಕ್ಕೆ ಆರ್ಥಿಕ ನೆರವು‌ : ಉಪೇಂದ್ರ ಪೈ

ಕಡಬಾಳದಲ್ಲಿ ಗಮನ ಸೆಳೆದ ಯಕ್ಷಗಾನ ಭೌಮಾಸುರ ಕಾಳಗ

Team Udayavani, Jun 20, 2022, 1:15 PM IST

1-sdffd

ಶಿರಸಿ: ಮುಂದಿನ ವರ್ಷಗಳಲ್ಲೂ ಪ್ರತೀ ವರ್ಷ ಹತ್ತು ಯಕ್ಷಗಾನಕ್ಕೆ ಆರ್ಥಿಕ ನೆರವು‌ ನೀಡಲಿದ್ದೇವೆ ಎಂದು ಶಿರಸಿ‌ ಜಿಲ್ಲಾ ಹೋರಾಟ‌ ಸಮಿತಿ ಹಾಗೂ ಉಪೇಂದ್ರ ಪೈ‌ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.

ಶನಿವಾರ ರಾತ್ರಿ ಕಡಬಾಳದಲ್ಲಿ ಶಬರ ಸಂಸ್ಥೆ, ಉಪೇಂದ್ರ ‌ಪೈ ಸೇವಾ ಟ್ರಸ್ಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಹಮ್ಮಿಕೊಂಡ ಯಕ್ಷಗಾನ ಪ್ರದರ್ಶನ ಹಾಗೂ ಸನ್ಮಾನ ಸಮಾರಂಭದಲ್ಲಿ‌ ಪಾಲ್ಗೊಂಡು ಮಾತನಾಡಿದರು.

ಕಳೆದ ಕೋವಿಡ್ ಅವಧಿಯಲ್ಲಿ ಸಂಕಷ್ಟದಲ್ಲಿ ಇದ್ದ‌ ಕಲಾವಿದರಿಗೆ ನೆರವಾಗಿದ್ದೆವು. ಅದೇ ವೇಳೆ ಕಲಾವಿದರಿಗೆ ನೆರವಾಗುವ ಕಾರಣದಿಂದ ಯಕ್ಷದಶ ಎಂದು ಯಕ್ಷಗಾನ ಹಮ್ಮಿಕೊಳ್ಳಲು ತೀರ್ಮಾನಿಸಿದ್ದೆವು. ಈಗಾಗಲೇ ಹಲವಡೆ ಏಳು ಯಕ್ಷಗಾನ ನಡೆಸಿದ್ದೇವೆ. ಇನ್ನು ‌ಮುಂದೆಯೂ ಪ್ರತೀ ವರ್ಷ ಒಂದು ಯಕ್ಷಗಾನಕ್ಕೆ 30 ಸಾವಿರದಂತೆ ಮೂರು ಲಕ್ಷ ರೂ. ಟ್ರಸ್ಟ್ ತೆಗೆದಿರಿಸಲಿದೆ‌ ಎಂದರು.

ಕಳೆದ 19 ವರ್ಷದಿಂದ15 ಸಾವಿರ ವಿದ್ಯಾರ್ಥಿಗಳಿಗೆ 60 ಸಾವಿರ ಪಟ್ಟಿಗಳನ್ನು ವಿತರಿಸಲಾಗಿದೆ. ಪ್ರಸಕ್ತ 800 ವಿದ್ಯಾರ್ಥಿಗಳಿಗೆ 12 ಲ.ರೂ.ಪ್ರತಿಭಾ ಪುರಸ್ಕಾರ‌ ನೀಡಲಾಗಿದೆ.‌ ಈ ವರ್ಷ ಕೂಡ ಪಟ್ಟಿ ವಿತರಿಸುತ್ತೇವೆ. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂದರು.

ಕೆಡಿಸಿಸಿ‌ ಬ್ಯಾಂಕ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ‌ ಕೆಶಿನ್ಮನೆ,ಯಕ್ಷಗಾನದ ‌ಮೇಲಿನ ಪ್ರೀತಿ ಉಳಿಯಲು ಧಾರ್ಮಿಕ ಹಿನ್ನಲೆಯಲ್ಲಿ ಕೂಡ ಇದೆ.‌ ಕಲಾವಿದರು ತಲೆ ಮೇಲೆ ಇಟ್ಟುಕೊಂಡು ಕುಣಿಯುವ ಕಿರೀಟಕ್ಕೆ ಪೂಜೆ ಸಲ್ಲಿಸುತ್ತಾರೆ. ಕಿರೀಟವನ್ನು ಗಣಪತಿ‌ ಎಂದು ಪೂಜೆ ಮಾಡಿ‌ ರಂಗಸ್ಥಳಕೆ ಅಪ್ಪಣೆ ಪಡೆಯುತ್ತಾರೆ. ಇಂಥ‌ ಕಲೆಗೆ ಪ್ರೋತ್ಸಾಹ ಆಗಬೇಕು ಎಂದರು.

ತುಳಸಿ ಈಗಿನ ಮಕ್ಕಳಿಗೆ ಮಾದರಿ

ವಿಶ್ವಶಾಂತಿ ಸರಣಿ ಯಕ್ಷನೃತ್ಯ ರೂಪಕ ಪ್ರದರ್ಶಿಸುವ ಈಚೆಗಷ್ಟೇ ಇಂಡಿಯಾ ಬುಕ್ ಆಫ್ ರೆಕಾರ್ಡ ನಲ್ಲಿ‌ ದಾಖಲಾದ ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಯನ್ನು ಆತ್ಮೀಯವಾಗಿ ಗೌರವಿಸಲಾಯಿತು.

ಅತಿ ಸಣ್ಣ ವಯಸ್ಸಿನಲ್ಲೇ ಯಕ್ಷಗಾನದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ತುಳಸಿ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಾಗಿರುವದು ಹೆಮ್ಮೆ. ಈಕೆ ಆಕಳ‌ ಮೈ ತೊಳೆದು, ಗೋಮಯ ಬಾಚಿ, ಹಾಲು ಕರೆಯುವುದು ಈಗಿನ ಮಕ್ಕಳಿಗೆ ಮಾದರಿ ಎಂದು ಸನ್ಮಾನದ ಬಳಿಕ ಹಾಲು‌ಒಕ್ಕೂಟ ಕಲ್ಯಾಣ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಪ್ರತಿಭಾ ಸಂಪನ್ನೆಯನ್ನು ಹಾಡಿ ಹೊಗಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸಾಲಕಣಿ ಗ್ರಾ.ಪಂ.ಅಧ್ಯಕ್ಷ ತಿಮ್ಮಯ್ಯ ಮ ಹೆಗಡೆ ವಹಿಸಿಕೊಂಡಿದ್ದರು. ಶಾಲಾಭಿವೃದ್ದಿ‌ ಸಮಿತಿ ಅಧ್ಯಕ್ಷ ಗುರುಮೂರ್ತಿ ಹೆಗಡೆ, ನಿವೃತ್ತ ಅಧಿಕಾರಿ ಸುಂದರೇಶ ಮೈಸೂರು ಇದ್ದರು‌. ನಾಗರಾಜ್ ಜೋಶಿ ಸೋಂದಾ ನಿರ್ವಹಿಸಿ ವಂದಿಸಿದರು.

ಗಮನ ಸೆಳೆದ ಯಕ್ಷಗಾನ

ಬಳಿಕ ನಡೆದ ಭೌಮಾಸುರ ಕಾಳಗ ಯಕ್ಷಗಾನ ಪ್ರೇಕ್ಷಕರ ಗಮನ ಸೆಳೆಯಿತು. ಪ್ರಸಿದ್ಧ‌ ಭಾಗವತರಾದ ರಾಮಕೃಷ್ಣ ಹೆಗಡೆ ಹಿಲ್ಲೂರು, ಮದ್ದಲೆ ವಾದಕ ಅನಿರುದ್ಧ ಬೆಣ್ಣೆಮನೆ, ಚಂಡೆಯಲ್ಲಿ ಪ್ರಸನ್ನ ಹೆಗ್ಗಾರ ಸಹಕಾರ ನೀಡಿದರು.

ಅಶೋಕ ಭಟ್ಟ ಸಿದ್ದಾಪುರ ದೇವೇಂದ್ರನಾಗಿ, ಉದಯ‌ ಕಡಬಾಳ ಕೃಷ್ಣನಾಗಿ, ಶ್ರೀಧರ ಚಪ್ಪರಮನೆ ಧೂತನಾಗಿ, ನಾಗರಾಜ ಕುಂಕಿಪಾಲ ಸತ್ಯಭಾಮೆಯಾಗಿ, ನಿರಂಜನ ಜಾಗನಳ್ಳಿ ಭೌಮಾಸುರನಾಗಿ, ಸಂತೋಷ ಕಡಕಿನಬೈಲು ಮುರಾಸುರನಾಗಿ, ಅರ್ಪಿತಾ ಹೆಗಡೆ ಬಲನಾಗಿ ಪಾಲ್ಗೊಂಡು ಆಖ್ಯಾನಕ್ಕೆ ಮೆರುಗು ನೀಡಿದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.