Dandeli; ಗಾಯಗೊಂಡ ಗಿಡುಗ ಪಕ್ಷಿಯನ್ನು ರಕ್ಷಿಸಿದ ಯುವಕರು
ಯುವಕರ ವನ್ಯ ಕಾಳಜಿಗೆ ಮೆಚ್ಚುಗೆ
Team Udayavani, Jul 5, 2023, 10:45 AM IST
ದಾಂಡೇಲಿ: ನಗರದ ಸಮೀಪದಲ್ಲಿರುವ ಹಸನ್ಮಾಳದಲ್ಲಿ ಬಿದ್ದು ಗಾಯಗೊಂಡು ನರಾಳುಡುತ್ತಿದ್ದ ಗಿಡುಗ ಪಕ್ಷಿಯೊಂದನ್ನು ಸ್ಥಳೀಯ ಯುವಕರು ರಕ್ಷಿಸಿ, ಉಪಚರಿಸಿ, ಕೊನೆಗೆ ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ನಡೆದಿದೆ.
ಹಸನ್ಮಾಳದಲ್ಲಿರುವ ವೈಟ್ ಪೆಟಲ್ ಹೋಂ ಸ್ಟೇ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಿಡುಗವೊಂದು ಬಿದ್ದು ಗಾಯಗೊಂಡು ಜೀವ ಉಳಿಸಲು ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಅಲ್ಲೆ ಇದ್ದ ವೈಟ್ ಪೆಟಲ್ ಹೋಂಸ್ಟೇಯ ವ್ಯವಸ್ಥಾಪಕರಾದ ಕುಮಾರ್ ಅವರು ಸ್ಥಳಕ್ಕೆ ಹೋಗಿ ಗಿಡುಗ ಹಕ್ಕಿಯನ್ನು ಹೋಂಸ್ಟೇಗೆ ತಂದು ನೀರುಣಿಸಿ, ಗಾಯಕ್ಕೆ ಅರಸಿನ ಪುಡಿ ಹಚ್ಚಿ ಉಪಚರಿಸಿದ್ದಾರೆ.
ಈ ಸಂದರ್ಭದಲ್ಲಿ ಹೋಂಸ್ಟೇಯ ಸಿಬ್ಬಂದಿ ಪ್ರಕಾಶ್ ಸಹಕರಿಸಿದ್ದಾರೆ. ಉಪಚರಿಸಿದ ಬಳಿಕ ಗಿಡುಗ ತಕ್ಕಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದಂತೆಯೆ ಕುಮಾರ್ ಮತ್ತು ಪ್ರಕಾಶ್ ಅವರು ಗಿಡುಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಯುವಕರಿಬ್ಬರ ವನ್ಯ ಕಾಳಜಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನೂ ಗಿಡುಗವನ್ನು ರಕ್ಷಿಸಿದ ಕುಮಾರ್ ಮತ್ತು ಪ್ರಕಾಶ್ ಅವರಿಗೆ ಅನಿಲ್ ಪಾಟ್ನೇಕರ್ ಹಾಗೂ ಶಮಲ್ ಅಬ್ದುಲ್ಲಾ ಅವರು ಬಹುಮಾನವನ್ನು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ