Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್
ಕಾವೇರಿ ನ್ಯಾಯ ರಾಜ್ಯಕ್ಕೆ ಸಿಗಬೇಕು
Team Udayavani, Sep 29, 2023, 12:26 PM IST
ಶಿರಸಿ: ರಾಜ್ಯ ಸರಕಾರವು ನೀರು ಬಿಡೋದು ನಿಲ್ಲಿಸಿ ಕನ್ನಡ ನಾಡಿನ ಹಿತ ಕಾಪಾಡಬೇಕು. ಕಾವೇರಿ ನ್ಯಾಯ ರಾಜ್ಯಕ್ಕೆ ಸಿಗಬೇಕು ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿ ಪಾದಿಸಿದರು.
ಅವರು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ಸರಕಾರದ ಮೇಲೆ ಕರ್ನಾಟಕದ ಹಿತ ಕಾಯಲು ಒತ್ತಡ ತರುತ್ತಿದೆ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರ ಹಣ ಬಳಕೆಗೆ ಮಾತ್ರ ಬಳಸುತ್ತಿದೆ. ಈ ದುರಾಡಳಿತದ ಕಾರಣದಿಂದ ಸಮಸ್ಯೆ ಆಗುತ್ತಿದೆ ಎಂದರು.
ಕಾವೇರಿ ನೀರನ್ನು ಕಳೆದ ಒಂದು ತಿಂಗಳುಗಳಿಂದ ತಮಿಳುನಾಡಿಗೆ ಬಿಡುತ್ತಿದೆ. ರಾಜ್ಯ ರಾಜಕಾರಣದಲ್ಲಿ ಅಧಿಕಾರದ ದುರ್ಬಳಕೆ ಮಾಡಿಕೊಂಡಿದೆ. ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ. ಸಿಎಂ, ಡಿಸಿಎಂ, ಕೃಷಿ, ಕಾನೂನು ಸಚಿವರ ವಿಫಲತೆ ಕ್ಷಣ ಕ್ಷಣಕ್ಕೆ ಕಾಣುತ್ತಿದೆ ಎಂದರು.
ಅರಣ್ಯ ಅತಿಕ್ರಮಣದಾರರಿಗೆ ಸಚಿವ ಈಶ್ವರ ಖಂಡ್ರೆ ಅವರ ಪತ್ರ ಒಕ್ಕಲೆಬ್ಬಿಸಲು ಕಾರಣ ಆಗುವಂತೆ ಇದ್ದು, ಇದು ಆಘಾತಕಾರಿ ಎಂದೂ ಹೇಳಿದರು.
ಈ ವೇಳೆ ಆರ್.ಡಿ.ಹೆಗಡೆ, ಗಣಪತಿ ನಾಯ್ಕ, ರಾಜೇಶ ಶೆಟ್ಟಿ, ಸದಾನಂದ ಭಟ್ಟ, ಉಷಾ ಹೆಗಡೆ, ನಂದನ ಸಾಗರ್, ನಾಗರಾಜ ಶೆಟ್ಟಿ ಇತರರು ಇದ್ದರು.
ಇದನ್ನೂ ಓದಿ: Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ