ದೇಶಾದ್ಯಂತ ಬಿಜೆಪಿ ಸರಕಾರ ಭಯದ ವಾತಾವರಣ ಸೃಷ್ಟಿಸಿದೆ:ಶಿವಾನಂದ ಕಡತೋಕ
Team Udayavani, Oct 4, 2021, 4:23 PM IST
ಶಿರಸಿ: ಉತ್ತರ ಪ್ರದೇಶದಲ್ಲಿ ವಾಹನ ಚಲಾಯಿಸಿ ರೈತರ ಸಾವಿಗೆ ಕಾರಣವಾದ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಪ್ರಮುಖ ಎಸ್.ಕೆ.ಭಾಗವತ ಹೇಳಿದರು.
ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ, ಪ್ರಿಯಾಂಕಾ ಗಾಂಧಿ ಅವರನ್ನು ಸಾಂತ್ವನ ಹೇಳಲೂ ಕೊಡದೇ ಬಂಧಿಸಿದ್ದು ಸರಿಯಲ್ಲ. ಉತ್ತರ ಪ್ರದೇಶ ಸರಕಾರ ಪ್ರತಿಭಟನೆ ಮಾಡುವ ಅವಕಾಶವೂ ಇಲ್ಲವಾ. ಪ್ರಿಯಾಂಕಾ ಅವರ ಮೇಲೆ ಯಾವುದೇ ಕೇಸ್ ಹಾಕದೇ ಬಿಡುಗಡೆ ಮಾಡಬೇಕು. ಬಂಧಿಸಿದ ಪೊಲೀಸ್ ಅಧಿಕಾರಿ ವಿರುದ್ದ ಕ್ರಮ ಆಗಬೇಕು. ರಾಷ್ಟ್ರ ನಾಯಕರನ್ನು ಹೀಗೆ ನಡೆಸಿಕೊಳ್ಳುವುದು ಸರಿಯಲ್ಲ ಎಂದರು.
ಪಕ್ಷದ ಸೂಚನೆ ಮೇರೆಗೆ ಮುಂದೆ ನಡೆದುಕೊಳ್ಳುತ್ತೇವೆ. ಈ ಬಗ್ಗೆ ಬೀದಿಗಳಿದು ಹೋರಾಟ ಮಾಡಲೂ ಸಿದ್ದ ಎಂದರು.
ರೈತ ಮೋರ್ಚಾ ಅಧ್ಯಕ್ಷ ಶಿವಾನಂದ ಕಡತೋಕ, ದೇಶಾದ್ಯಂತ ಬಿಜೆಪಿ ಸರಕಾರ ಭಯದ ವಾತಾವರಣ ಸೃಷ್ಟಿಸಿದೆ. ರೈತ ಪರ ಚಳುವಳಿ ನಿರಂತರ ಹತ್ತಿಕ್ಕುತ್ತಿದ್ದಾರೆ. ರೈತರ ಮಹಸೂಲು ಖಾಸಗೀಕರಣ ಮಾಡಲಾಗುತ್ತಿದೆ ಎಂದೂ ಹೇಳಿದರು.
ಈ ವೇಳೆ ದೀಪಕ ದೊಡ್ಡೂರು, ಶ್ರೀಲತಾ ಕಾಳೇರಮನೆ, ಡಿ.ಎನ್.ಗಾಂವಕರ್, ಕೃಷ್ಣ ಹಿರೇಹಳ್ಳಿ, ಜಗದೀಶ ಗೌಡ, ಶ್ರೀನಿವಾಸ ನಾಯಕ, ಬಸವರಾಜ್ ದೊಡ್ಮನಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್