ರೈತರ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜಮೀನಿನಲ್ಲಿಯೇ ಚಾಲನೆ
Team Udayavani, Aug 17, 2020, 3:33 PM IST
ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ಆ್ಯಪ್ನಿಂದ ರೈತರ ಜಮೀನಿಗೆ ತೆರಳಿ ರೈತರಿಂದಲೇ ಬೆಳೆಯನ್ನು ನಮೂದಿಸುವ ಕಾರ್ಯಕ್ಕೆ ಸಕ್ಕರೆ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಚಾಲನೆ ನೀಡಿದರು.
ಬಿಣಗಾ ಗ್ರಾಮದ ರೈತ ವಾಸು ದಿಲಗಾ ಗೌಡ ಅವರ ಜಮೀನಿನಲ್ಲಿ ಬೆಳೆದ ಭತ್ತದ ಬೆಳೆಯ ಛಾಯಾಚಿತ್ರ ಅಪ್ಲೋಡ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೇ ನಂಬರ್, ಹಿಸ್ಸಾ ನಂಬರ್ವಾರು ತಾವು ಬೆಳೆದ ಬೆಳೆ ವಿವರವನ್ನು ಆ್ಯಪ್ ಡೌನ್ಲೋಡ್ ಮಾಡಿಕೊಂಡು ಸ್ವತಃ ತಾವೇ ನೋಂದಾಯಿಸಬಹುದಾಗಿದೆ ಎಂದು ತಿಳಿಸಿದರು. ಬೆಳೆ ನಮೂದಿಸಲು ಆ. 24 ಕೊನೆಯ ದಿನವಾಗಿದ್ದು, ರೈತರು ನಿಗದಿತ ಸಮಯದಲ್ಲಿ ತಾವು ಬೆಳೆದ ಬೆಳೆ ವಿವರ ಅಪ್ಲೋಡ್ ಮಾಡಬೇಕು. ಈ ಸಮೀಕ್ಷೆಯಿಂದ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆಯಡಿ ಸರ್ವೇ ನಂಬರ್ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಫಲಾನುಭವಿ ಆಧಾರಿತ ವಿವಿಧ ಯೋಜನೆ ಅನುಷ್ಠಾನಕ್ಕೆ ಸಹಾಯವಾಗಲಿದೆ ಎಂದರು.
ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್ಲೋಡ್ ಮಾಡಿಕೊಂಡು ತಮ್ಮ ಭಾಗದ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದರು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಧಕಾರಿ ಡಾ| ಕೆ. ಹರೀಶ ಕುಮಾರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ., ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪಗೌಡ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ