ಮೇವಿಲ್ಲದೆ ಕೃಷಿಕರ ಪರದಾಟ


Team Udayavani, Mar 8, 2020, 4:19 PM IST

uk-tdy-1

ಅಂಕೋಲಾ: ಕಳೆದ ಆಗಸ್ಟ್‌ನಲ್ಲಿ ನಡೆದ ಭೀಕರ ನೆರೆ ಹಾವಳಿಯಿಂದ ಕೃಷಿ ಭೂಮಿಯಲ್ಲಿ ವಾರಗಳ ಕಾಲ ನೀರು ತುಂಬಿಕೊಂಡು ಭತ್ತದ ಬೆಳೆ ಸಂಪೂರ್ಣ ನೆಲಕ್ಕಚ್ಚಿರುವ ಪರಿಣಾಮ ರೈತರ ದನ ಕರುಗಳಿಗೆ ಮೇವಿಲ್ಲದೆ ರೈತರು ಪರದಾಡುವ ಪರಿಸ್ಥಿತಿ ಬಂದೊದಗಿದೆ.

ತಾಲೂಕಿನ ಶಿರೂರು, ಬೆಳಸೆ, ಚಂದುಮಠ, ತೆಂಕನಾಡ ಭಾಗದ ದನ ಕರುಗಳಿಗೆ ಮೇವಿಲ್ಲದೆ ಬರಡಾಗುತ್ತಿದೆ. ರೈತರ ಬತ್ತದ ಬೆಳೆ ನೆರೆಯಿಂದ ನಾಶವಾಗಿದ್ದು ಸಾಕಿರುವ ಜಾನುವಾರುಗಳ ಸಂರಕ್ಷಣೆಗೆ ಜುಲೈ 2020ರ ಕೊನೆಯವರೆಗೆ ಅವಶ್ಯವಿರುವ ಮೇವಿನ ಸಂಗ್ರಹಣೆ ಮಾಡಿ ಇಡಲು ಸಾಧ್ಯವಾಗಲಿಲ್ಲ. ಈಗ ಈ ಭಾಗದಲ್ಲಿ ಜಾನುವಾರುಗಳಿಗೆ ಅವಶ್ಯವಿರುವ ಮೇವು ಒದಗಿಸಿಕೊಳ್ಳುವ ಯಾವುದೇ ಮೂಲವು ಇಲ್ಲ. ಸಂಬಂಧಿಸಿದ ಅಧಿಕಾರಿಗಳು ನೆರೆ ಬಂದಿರುವ ಸಂದರ್ಭದಲ್ಲಿ ಬೆಳೆ ನಾಶವಾದ ಮತ್ತು ಜಾನುವಾರುಗಳ ಪರಶೀಲನೆ ನಡೆಸಿದ್ದಾರೆ.

ಪರಿಶೀಲನೆ ನಡೆಸಿದ ಬಳಿಕ ವರದಿಯನ್ನು ಸರಕಾರಕ್ಕೆ ಸರಿಯಾದ ಸಮಯದಲ್ಲಿ ಸಲ್ಲಿಸದೆ ಈ ಬಾಗದ ಹಲವು ಕುಟುಂಬಗಳ ಹೆಸರಗಳೆ ಇಲ್ಲವಾಗಿದೆ. ಈ ಮಧ್ಯೆ ದನಕರುಗಳಿಗೆ ಮೇವು ನಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದರು. ಮಾರ್ಚ ಆರಂಭವಾದರು ಮೇವಿನ ಮಾತು ಎತ್ತುತ್ತಿಲ್ಲ. ರೈತರು ಕಚೇರಿಗೆ ಅಲೆದಾಡಿದರು ಯಾವ ಅಧಿಕಾರಿಗಳೂ ಸರಿಯಾಗಿ ಸ್ಪಂದಿಸುತ್ತಿಲ್ಲವೆ ಎಂದು ರೈತರು ದೂರಿದ್ದಾರೆ. ದನಕರುಗಳ ಸಂರಕ್ಷಣೆಗೆ ಅವಶ್ಯವಿರುವ ಮೇವು ಪೂರೈಸುವ ವ್ಯವಸ್ಥೆಯನ್ನು ಸರಕಾರದಿಂದ ಈ ಕೂಡಲೆ ಪ್ರಾರಂಭಿಸಿ ಎಂಬುದು ಕೃಷಿಕರ ಅಳಲಾಗಿದೆ.

ಈ ಹಿಂದೆ ಮಾಡಿದ ವರದಿ ಆಧಾರದಲ್ಲಿ ರೈತರ ಕುಟುಂಬಗಳ ಮತ್ತು ಜಾನುವಾರುಗಳ ಪರಶೀಲನೆ ಮತ್ತೂಮ್ಮೆ ನಡೆಸಿ ಕುಟುಂಬಕ್ಕೆ ಯೋಗ್ಯ ಪರಿಹಾರವನ್ನು ಶೀಘ್ರದಲ್ಲಿಯೆ ಮಂಜೂರು ಮಾಡುವುದರೊಂದಿಗೆ ತಕ್ಷಣ ದನಕರುಗಳಿಗೆ ಮೇವು ಪೂರೈಸಲು ಆಗ್ರಹಿಸಿದ್ದಾರೆ.

ನಮ್ಮ ಗದ್ದೆಯಲ್ಲಿ ನೆರೆಯಿಂದ ನೀರು ತುಂಬಿದ ಪರಿಣಾಮ ಬೆಳೆದಿರುವ ಭತ್ತ ಎಲ್ಲವು ಕೊಳೆತು ಹೋಗಿದೆ. ನಮ್ಮ ದನಗಳಿಗೆ ಬೇಕಾಗುವ ಹುಲ್ಲು ಸಿಗದಂತಾಗಿದೆ. ಅಧಿಕಾರಿಗಳು ಇಲ್ಲಿಗೆ ಬಂದಾಗ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು. ಮಾರ್ಚ್‌ ಬಂದರು ಮೇವಿಲ್ಲದೆ ದನಗಳು ಬರಡಾಗುತ್ತಿವೆ. ದಿನಗೂಲಿ ಮಾಡಿ ಜೀವನ ನಡೆಸುವ ನಮಗೆ ಮೇವು ಖರೀದಿ ಮಾಡಲು ನಮ್ಮಿಂದ ಸಾಧ್ಯವಾಗದು. -ಮಾಣಿ ಸಣ್ಣು ಗೌಡ, ಗ್ರಾಮಸ್ಥ

ಈಗಾಗಲೇ ಸರಕಾರದಿಂದ ನೆರೆ ಪರಿಹಾರ ನೀಡಲಾಗುತ್ತಿದೆ. ಮೇವನ್ನು ಕೂಡ ಸಕಾಲದಲ್ಲಿ ಆಯಾ ಸ್ಥಳಗಳಿಗೆ ಕಲ್ಪಿಸಿ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಈ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.  -ರೂಪಾಲಿ ನಾಯ್ಕ, ಶಾಸಕಿ

 

-ಅರುಣ ಶೆಟ್ಟಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.