ಸೊಪ್ಪಿನಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕೆ ತೀವ್ರ ವಿರೋಧ


Team Udayavani, Apr 27, 2022, 10:43 AM IST

7

ಯಲ್ಲಾಪುರ: ವಜ್ರಳ್ಳಿ ವ್ಯಾಪ್ತಿಯ ಬಾಗಿನ ಕಟ್ಟಾದಿಂದ ಕಳಚೆಗೆ ಈಗಾಗಲೇ ಎರಡು ರಸ್ತೆ ಇದ್ದಾಗ್ಯೂ, ರಸ್ತೆ ಶಾರ್ಟ್‌ಕಟ್‌ ಮಾಡುವ ಭರದಲ್ಲಿ ಹೊಸದಾಗಿ ಸೊಪ್ಪಿನ ಬೆಟ್ಟದಲ್ಲಿ ರಸ್ತೆ ಮಾಡಿದ್ದನ್ನು ಸಾಮಾಜಿಕ ಕಾರ್ಯಕರ್ತ ನ.ವಿ. ಗಾಂವ್ಕಾರ ಬಾಗಿನಕಟ್ಟಾ ತೀವ್ರವಾಗಿ ಖಂಡಿಸಿದ್ದಾರೆ.

ಇದರಿಂದಾಗಿ ರಸ್ತೆ ನಿರ್ಮಾಣ ಕಾರ್ಯ ವಿವಾದದ ಸುಳಿಯಲ್ಲಿ ಸಿಲುಕಿದೆ. ಅವರು ಈ ಕುರಿತು ಮಂಗಳವಾರ ಹೇಳಿಕೆ ನೀಡಿ, ಕಳಚೆ ಭಾಗದ ಕೆಲ ಜನರ ಹುನ್ನಾರದಿಂದ ಎರಡೆರಡು ರಸ್ತೆ ಇದ್ದಾಗ್ಯೂ ತಮ್ಮ ಸೊಪ್ಪಿನಬೆಟ್ಟದಿಂದ ಪ್ರತ್ಯೇಕ ರಸ್ತೆ ಮಾಡಿದ್ದಾರೆ. ಇದು ಸರಿಯಾದ ಕ್ರಮ ಅಲ್ಲ. ಹಳೆಯ ರಸ್ತೆಯಂತೆ ಹೊಸ ರಸ್ತೆ ಸುರಕ್ಷಿತವೂ ಅಲ್ಲ. ಹೊಸ ರಸ್ತೆಯಿಂದಾಗಿ ಮಳೆಗಾಲದಲ್ಲಿ ಭೂಕುಸಿತವಾಗಿ ನೀರಿನ ಕಾಲುವೆ, ಹಳೆರಸ್ತೆಗೆ ಧಕ್ಕೆ ಆಗಿ, ಅಯೋಮಯ ಉಂಟಾಗುವ ಸಾಧ್ಯತೆ ಇದೆ. ಕಾರಣ ಮೂಲ ರಸ್ತೆಯನ್ನು ಮಾತ್ರ ಸಿಂಧುವಾಗಿ ಪರಿಗಣಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕಳಚೆ ಭಾಗದಿಂದ ಭಾಗಿನಕಟ್ಟಾ ಗ್ರಾಮಕ್ಕೆ ಕಳೆದ 40 ವರ್ಷಗಳ ಹಿಂದೆಯೇ ತಾಲೂಕು ಬೋರ್ಡ್‌ ಸದಸ್ಯ ವಿ.ಎನ್‌. ಭಟ್ಟ ಉಪಾಧ್ಯ ಅವರು ರಸ್ತೆ ಸಂಪರ್ಕ ಕಲ್ಪಿಸಿದ್ದರು. ಅದು ಭಾಗಿನಕಟ್ಟಾದ ಸರ್ವೇ ನಂ. 25 ಮತ್ತು 24 ಮಧ್ಯದಲ್ಲಿದ್ದು ಈವರೆಗೂ ಕಚ್ಚಾ ರಸ್ತೆಯಾಗಿ ಕಾಯಂ ವಾಹನ ಓಡಾಟ ನಡೆಸಲಾಗುತ್ತಿದೆ. ಅಲ್ಲದೇ ಸರ್ವೇ ನಂ.23 ರ ಹೊರಗಿನಿಂದ ಸ್ಥಳಿಯರು ಶ್ರಮದಿಂದ ನಿರ್ಮಿಸಿದ ಮತ್ತೂಂದು ರಸ್ತೆ ಕೂಡಾ ಇದೆ. ಭಾಗಿನಕಟ್ಟಾದಿಂದ ಕಳಚೆಗೆ ಎರಡು ರಸ್ತೆ ಕಾರ್ಯಾಚರಿಸುತ್ತಿದೆ. ಹೀಗಿರುವಾಗ ಕಳೆದ ವರ್ಷ ಭೂ ಕುಸಿತದಿಂದ ಅತಂತ್ರ ಸಂದರ್ಭದಲ್ಲಿ ಬೀಗಾರ ಮುಖ್ಯರಸ್ತೆಯಿಂದ ಭಾಗಿನಕಟ್ಟಾ ಮೂಲಕ ಕಳಚೆಗೆ ಹೋಗಲು ಸರ್ವ ಋತು ರಸ್ತೆ ಮಾಡಲು ಪ್ರಕೃತಿ ವಿಕೋಪ ನಿಧಿಯಿಂದ ಮುಂದಾಗಿದ್ದು, ಸ.ನಂ. 24 ಮತ್ತು 25 ರ ಹೊಂದಿನಲ್ಲಿರುವ ರಸ್ತೆ ಸುರಕ್ಷಿತವಾಗಿದೆ. ಈ ಮೂಲ ರಸ್ತೆಯ ಅಭಿವೃದ್ಧಿ ಆಗಬೇಕು ಎನ್ನುವ ಬಗ್ಗೆ ತಾವು ಜಿಲ್ಲಾಧಿಕಾರಿಗಳಿಗೆ ಈ ಹಿಂದೆಯೇ ಪತ್ರ ಬರೆದು ಆಗ್ರಹಿಸಿದ್ದೇನೆ. ಅದಕ್ಕೆ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರು ಶಿರಸಿ ಅವರಿಗೆ ಸೂಚನೆಯನ್ನೂ ನೀಡಿದ್ದಾರೆ.

ಕಳೆದ ಮಳೆಗಾಲದ ಪ್ರಕೃತಿ ವಿಕೋಪದ ದುರ್ಲಾಭ ಪಡೆಯುವ ಸಲುವಾಗಿ ಕಳಚೆ ಭಾಗದ ಕೆಲವರ ಹಿತಾಸಕ್ತಿಯಿಂದ ರಸ್ತೆ ಮಾಡುವ ಪ್ರಯತ್ನವಾಗಿ ತಮ್ಮ ಸೊಪ್ಪಿನ ಬೆಟ್ಟದಲ್ಲಿ ಬೆಳಸಿದ ಗೇರು, ಮಾವು ಇತ್ಯಾದಿ ಗಿಡಗಳನ್ನು ನಾಶಮಾಡಿ, ರಸ್ತೆ ನಿರ್ಮಿಸಿದ್ದಾರೆ. ಇದರಿಂದ ತಮಗೆ ನಷ್ಟ ಉಂಟಾಗಿದ್ದಲ್ಲದೇ, ಇಳಿ ವಯಸ್ಸಿನಲ್ಲಿ ಮಾನಸಿಕ ಕಿರಿಕಿರಿ ಉಂಟು ಮಾಡಿದ್ದಾರೆ. ಎರಡೆರಡು ರಸ್ತೆ ಇರುವಾಗ ಶಾರ್ಟ್‌ಕಟ್‌ ನೆಪದಲ್ಲಿ ಮತ್ತೂಂದೆಡೆ ರಸ್ತೆ ಮಾಡಿರುವುದು ಸಮಂಜಸವಲ್ಲ. ಇದು ದುರುದ್ದೇಶಪೂರ್ವಕ ಅಂದುಕೊಳ್ಳಬೇಕಾಗುತ್ತದೆ. ಮೂಲ ರಸ್ತೆಯನ್ನೆ ಸರ್ವ ಋತು ರಸ್ತೆಯಾಗಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.