ಹೆಲ್ಮೆಟ್‌ಯಿಲ್ಲದದರಿಗೆ ದಂಡದ ಬಿಸಿ

ಪೊಲೀಸರಿಂದ ವಿವಿಧ ವೃತ್ತಗಳಲ್ಲಿ ಚುರುಕಿನ ತಪಾಸಣೆ,ದಂಡವಿಧಿಸಿ ಹೆಲ್ಮೆಟ್‌ ಬಗ್ಗೆ ಜಾಗೃತಿ

Team Udayavani, Feb 16, 2021, 4:29 PM IST

ಹೆಲ್ಮೆಟ್‌ಯಿಲ್ಲದದರಿಗೆ ದಂಡದ ಬಿಸಿ

ಕುಮಟಾ: ಪಟ್ಟಣದಾದ್ಯಂತ ಹೆಲ್ಮೆಟ್‌ ಧರಿಸದೇ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ಕುಮಟಾ ಪೊಲೀಸರು ಸೋಮವಾರ ಬಿಸಿ ಮುಟ್ಟಿಸಿದ್ದಾರೆ. ಪಟ್ಟಣದ ಪ್ರಮುಖ ರಸ್ತೆ ಸೇರಿದಂತೆ ವಿವಿಧ ವೃತ್ತಗಳಲ್ಲಿ ಚುರುಕಿನ ತಪಾಸಣೆ ನಡೆಸಿದ ಪೊಲೀಸರು ಹಲವು ವಾಹನ ಸವಾರರಿಗೆ ದಂಡ ವಿಧಿಸಿದ್ದಾರೆ.

ತಾಲೂಕಿನಲ್ಲಿ ಹೆಲ್ಮೆಟ್‌ ಕಡ್ಡಾಯಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಪೊಲೀಸರೂಈ ಬಗ್ಗೆ ಜಾಥಾ ಸೇರಿದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡುಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಆದರೂ ಕೆಲ ಯುವಕರು ಹೆಲ್ಮೆಟ್‌ ಧರಿಸದೇ, ವಾಹನ ಪರವಾನಿಗೆಯಿಲ್ಲದೇ,ತ್ರಿಬಲ್‌ ರೈಡ್‌ ಮಾಡುತ್ತಿದ್ದಾರೆ. ಇದರವಿರುದ್ಧ ಕಾರ್ಯೋನ್ಮುಖರಾದ ಪೊಲೀಸರು ಪ್ರತಿದಿನ ಒಂದಿಲ್ಲೊಂದು ಸ್ಥಳದಲ್ಲಿ ನಿಂತುತೀವ್ರ ತಪಾಸಣೆ ನಡೆಸುತ್ತಿದ್ದಾರೆ.ಪಟ್ಟಣದ ಗಿಬ್‌ ಸರ್ಕಲ್‌, ಹೆಗಡೆ ವೃತ್ತ, ಜೈವಂತ ಸ್ಟುಡಿಯೋ, ಹೊಸ ಬಸ್‌ ನಿಲ್ದಾಣ ಹಾಗೂಸುಭಾಸ ರಸ್ತೆ ಸೇರಿದಂತೆ ವಿವಿಧ ಕಡೆಗಳಲ್ಲಿ ತಪಾಸಣೆ ನಡೆಸಿದ ಸಿಪಿಐ ಪರಮೇಶ್ವರ ಗುನಗಾ, ಪಿಎಸ್‌ಐಗಳಾದ ಆನಂದಮೂರ್ತಿ, ರವಿ ಗುಡ್ಡಿ ಹಾಗೂ ಸುಧಾ ಅಘನಾಶಿನಿ ನೇತೃತ್ವದ ಪೊಲೀಸರ ತಂಡವು, ಹೆಲ್ಮೆಟ್‌ ಧರಿಸದ, ಪರವಾನಿಗೆಯಿಲ್ಲದ ಹಾಗೂತ್ರಿಬಲ್‌ ರೈಡ್‌ ಮಾಡುತ್ತಿರುವ ಸವಾರರಿಗೆ ದಂಡ ವಿಧಿಸಿ ಜಾಗೃತಿ ಮೂಡಿಸುವುದರ ಜೊತೆಗೆ ಬಿಸಿ ಮುಟ್ಟಿಸಿದ್ದಾರೆ.

ಇನ್ನು ಪೊಲೀಸರಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕೆಲವು ಸವಾರರು ಪರ್ಯಾ ರಸ್ತೆಯನ್ನು ಅವಲಂಬಿಸಿದರೆ, ಇನ್ನು ಕೆಲವರು ತಪಾಸಣೆ ಮುಗಿಯುವವರೆಗೂ ಅಂಗಡಿ ಮುಂಗಟ್ಟು ಹಾಗೂ ರಸ್ತೆಬದಿಯಲ್ಲಿಯೇ ಕಾದು ನಿಂತರು. ಕಳೆದ ಹಲವಾರು ತಿಂಗಳುಗಳಿಂದ ಕುಮಟಾ ಪೊಲೀಸರು ಹೆಲ್ಮೆಟ್‌ ಕಡ್ಡಾಯಗೊಳಿಸಿ, ಹೆಲ್ಮೆಟ್‌ ಧರಿಸುವುದರ ಬಗ್ಗೆ ಜಾಗೃತಿ ಮೂಡಿಸಿ, ತೀವ್ರ ತಪಾಸಣೆ ನಡೆಸುತ್ತಿದ್ದರೂ ಕೆಲವರು ತಮಗೆ ಸಂಬಂಧವಿಲ್ಲದಂತೆ ಹೆಲ್ಮೆಟ್‌ ಧರಿಸದೇ ಸಂಚರಿಸುತ್ತಿರುವುದು ಬೇಸರದ ಸಂಗತಿಯಾಗಿದೆ.

ದ್ವಿಚಕ್ರ ವಾಹನ ಸವಾರರು ತಮ್ಮ ಜೀವದ ರಕ್ಷಣೆಗಾಗಿ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕುಹಾಗೂ ವಾಹನ ಚಲಾವಣೆಯಪರವಾನಗಿ, ಹೊಗೆ ತಪಾಸಣಾ ಪತ್ರ, ವಾಹನ ನೋಂದಣಿ ಪತ್ರದ ಜೊತೆಗೆವಿಮಾ ಪತ್ರವನ್ನು ಹೊಂದಿರಬೇಕು. ಈ ಬಗ್ಗೆ ಸ್ವಯಂ ಪ್ರೇರಿತರಾಗುವುದರ ಜೊತೆ ಸುತ್ತಮುತ್ತಲಿನವರಲ್ಲೂ ಜಾಗೃತಿ ಮೂಡಿಸಬೇಕು.- ಅರವಿಂದ ವೆರ್ಣೇಕರ, ಸಾಮಾಜಿಕ ಕಾರ್ಯಕರ್ತ

ಕಾನೂನಿನ ನಿಯಮದಂತೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸುವುದು ಕಡ್ಡಾಯ. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸಿ, ಅರಿವು ಮೂಡಿಸಲಾಗುತ್ತಿದ್ದು, ಈ ಪ್ರಕ್ರಿಯೆ ನಿರಂತರವಾಗಿರುತ್ತದೆ.– ಪರಮೇಶ್ವರ ಗುನಗಾ,  ಪೊಲೀಸ್‌ ವೃತ್ತ ನಿರೀಕ್ಷಕ, ಕುಮಟಾ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.