ಸ್ಥಳೀಯರಿಗೆ ಮೊದಲು ಉದ್ಯೋಗ ನೀಡಿ


Team Udayavani, Apr 19, 2021, 9:14 PM IST

gjfghfg

ದಾಂಡೇಲಿ: ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಉದ್ಯೋಗ ನೀಡಿ ಎಂದು ಡಿವೈಎಫ್‌ಐ ಸಂಘಟನೆ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಸರಕಾರವನ್ನು ಆಗ್ರಹಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ ಬಂದ ನಂತರ ದೇಶದ ಪರಿಸ್ಥಿತಿ ತೀರಾ ಬದಲಾಗಿದೆ. ರಾಜ್ಯದಲ್ಲಿ ಎರಡು ಲಕ್ಷ ಅರ್ವತ್ತು ಸಾವಿರ ಉದ್ಯೋಗ ಖಾಲಿಯಿದೆ. ಸರೋಜಿನಿ ಮಹಿಷಿ ವರದಿಯು ಆದ್ಯತೆಯ ಮೇರೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕೆಂದು ಹೇಳಿದ್ದರೂ ಸ್ಥಳೀಯರಿಗೆ ಉದ್ಯೋಗ ನೀಡಲಾಗುತ್ತಿಲ್ಲ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಕೈಗಾರಿಕೆ ಬಿಟ್ಟರೆ ಬೇರೆ ಕಡೆ ಯಾವ ತಾಲೂಕಿನಲ್ಲಿಯೂ ದೊಡ್ಡ ಕೈಗಾರಿಕೆಗಳನ್ನು ಸ್ಥಾಪಿಸಲಾಗಿಲ್ಲ. ದಾಂಡೇಲಿಯಲ್ಲಿ ಕಾಗದ ಕಾರ್ಖಾನೆ ಬಿಟ್ಟರೆ, ಸ್ಥಗಿತಗೊಂಡ ಕಾರ್ಖಾನೆಗೆ ಪರ್ಯಾಯವಾಗಿ ಯಾವೊಂದು ಕಾರ್ಖಾನೆಯನ್ನು ಪ್ರಾರಂಭಿಸಲಾಗಿಲ್ಲ ಎಂದು ಮುನೀರ್‌ ಕಾಟಿಪಳ್ಳ ಕಿಡಿಕಾರಿದರು.

ರಾಜ್ಯ ಮತ್ತು ಕೇಂದ್ರ ಸರಕಾರ ಉದ್ಯೋಗ ಸೃಷ್ಟಿಸುವಲ್ಲಿ ಸಂಪೂರ್ಣ ಸೋತಿದೆ. ಕೇವಲ ನಾಮಕಾವಸ್ಥೆ ಯೋಜನೆ ಜಾರಿ ಮಾಡಿದರೆ ಸಾಕಾಗಲ್ಲ. ಪರಿಪಕ್ವವಾದ ಮತ್ತು ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯಾಗುವ ನಿಟ್ಟಿನಲ್ಲಿ ಯೋಜನೆ ಜಾರಿಯಾಗಿಲ್ಲ. ಅದೇರೀತಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದ್ದರೂ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯಾಗಬಲ್ಲ ಯೋಜನಾಬದ್ಧ ನಿಯಾಮವಳಿಗಳನ್ನು ಜಾರಿಗೊಳಿಸಲಾಗಿಲ್ಲ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಸ್ಪಷ್ಟ ನೀತಿ, ನಿಯಮಗಳನ್ನು ಅಳವಡಿಸಿ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯಾಗುವ ನಿಟ್ಟಿನಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಉ.ಕ ಜಿಲ್ಲೆಯಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಆರಂಭಿಸಬೇಕು ಎಂದು ಡಿವೈಎಫ್‌ಐ ಸಂಘಟನೆ ಹೋರಾಟ ಮಾಡುತ್ತಾ ಬಂದರೂ, ಈ ಬಗ್ಗೆ ಸರಕಾರವಾಗಲೀ, ಜನಪ್ರತಿನಿಧಿ ಗಳಾಗಿ ಮುಂದಾಗಿಲ್ಲ ಎಂದು ಮುನೀರ್‌ ಕಾಟಿಪಳ್ಳ ಆರೋಪಿಸಿದರು. ಜಿಲ್ಲೆಯಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇಲ್ಲದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಚಿಕಿತ್ಸೆಗಾಗಿ ಹೊರ ಜಿಲ್ಲೆಗೆ, ಹೊರ ರಾಜ್ಯಕ್ಕೆ ಹೋಗಬೇಕಾದ ಸಂದಿಗ್ಧ ಸ್ಥಿತಿಯಿದೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳೆರಡು ಸಂಪೂರ್ಣ ವಿಫಲವಾಗಿವೆ. ಕೊರೊನಾದಿಂದಾಗಿ ಹಲವಾರು ಕ್ಷೇತ್ರದಲ್ಲಿ ಉದ್ಯೋಗ ನಷ್ಟವಾಗಿದೆ ಎಂದು ಸರಕಾರ ಹೇಳುತ್ತಿದೆ. ಆದರೆ ಕೊರೊನಾ ಪೂರ್ವದಲ್ಲೆ ಅನೇಕ ಉದ್ಯಮಗಳು ಕಾರ್ಮಿಕರನ್ನು, ಯುವಕರನ್ನು ಕೆಲಸದಿಂದ ತೆಗೆದು ಹಾಕಿವೆ. ಸರಕಾರ ಅನುಸರಿಸುತ್ತಿರುವ ಆರ್ಥಿಕ ನೀತಿ ಮತ್ತು ಕಾರ್ಪೊರೇಟ್‌ ನೀತಿಯಿಂದ ಅನೇಕ ಸಾರ್ವಜನಿಕ ಉದ್ಯಮಗಳು ಮುಚ್ಚುತ್ತಿವೆ. ಇದು ದೇಶದ ಆರ್ಥಿಕತೆ ಮೇಲೆ ದೊಡ್ಡ ಪರಿಣಾಮ ಬೀರಿದೆ ಎಂದ ಮುನೀರ್‌ ಕಾಟಿಪಳ್ಳ, ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಉದ್ಯೋಗ ದೊರಕಿಸಿ ಎಂದು ಡಿವೈಎಫ್‌ಐ ರಾಜ್ಯಾದಾದ್ಯಂತ ಚಳವಳಿ ಆರಂಭಿಸಲಿದೆ ಎಂದರು.

ಡಿವೈಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಸ್ಯಾಮಸನ್‌, ಸಂಘಟನೆ ಪ್ರಮುಖರಾದ ಇಮ್ರಾನ್‌, ಕಾಂತರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

1-asdadad

Government ನೀತಿಗಳಿಂದಾಗಿ ಯಕ್ಷಗಾನ ಕ್ಷೇತ್ರ ಇಂದು ಕಷ್ಟಕ್ಕೆ ಸಿಲುಕಿದೆ:ಡಾ.ಜಿ.ಎಲ್.ಹೆಗಡೆ

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.