ಹೊನ್ನಾವರದಲ್ಲಿ ಬಂದರು ಕಾಮಗಾರಿಗೆ ವಿರೋಧ : ಮೀನುಗಾರರ ಪ್ರತಿಭಟನೆ
ಮೀನುಗಾರಿಕೆ ಸಂಪೂರ್ಣ ನಶಿಸುವ ಭಯ
Team Udayavani, Feb 2, 2021, 9:33 PM IST
ಹೊನ್ನಾವರ: ಕಾಸರಕೋಡ ಟೊಂಕಾ ಭಾಗದ ಸ್ಥಳೀಯರು ಮತ್ತು ಹೊನ್ನಾವರ ಪೋರ್ಟ್ ಪ್ರೈ.ಲಿ.ನ ನಡುವಿನ ಸಮರ ಮತ್ತೆ ಆರಂಭವಾಗಿದೆ. ತಮ್ಮನ್ನು ಹಂತ ಹಂತವಾಗಿ ಒಕ್ಕಲೆಬ್ಬಿಸುತ್ತಾರೆನ್ನುವ ಅಭದ್ರತೆಯ ಜೊತೆಗೆ ಕುಲಕಸುಬಾದ ಮೀನುಗಾರಿಕೆ ಸಂಪೂರ್ಣ ನಶಿಸುವ ಭಯದಲ್ಲಿ ಕಾಮಗಾರಿಯೇ ಬೇಡ ಎನ್ನುತ್ತಿದ್ದು, ಪೊಲೀಸರ ರಕ್ಷಣೆಯಲ್ಲಿ ರಸ್ತೆ ನಿರ್ಮಾಣಕ್ಕೆ ಖಾಸಗಿ ಕಂಪನಿ ಮುಂದಾಗಿದೆ.
ಹಿಂದಿನ ವರ್ಷ ಟೊಂಕಾ ಮೀನುಗಾರಿಕಾ ಬಂದರಿಗೆ ತೆರಳುವ ರಸ್ತೆಯನ್ನೇ ಬಳಸಿಕೊಂಡಿದ್ದ ಖಾಸಗಿ ಕಂಪನಿಯವರ ಭಾರೀ ವಾಹನಗಳ ಓಡಾಟದಿಂದ ರಸ್ತೆ ಹಾಳಾಗಿದೆ. ಅಳಿವೆಯ ಹೂಳೆತ್ತದ ಕಾರಣ ಹಲವು ಬೋಟ್ಗಳು ದುರಂತಕ್ಕೀಡಾಗಿವೆ. ಈ ನಡುವೆ ಸಮುದ್ರದ ಬದಿಯಿಂದ ಬಂದರು ನಿರ್ಮಾಣದ ಸ್ಥಳದವರೆಗೆ ರಸ್ತೆ ನಿರ್ಮಾಣಕ್ಕೆ ಖಾಸಗಿ ಕಂಪನಿಯವರು ಮುಂದಾಗಿದ್ದರು. ಸಮುದ್ರದಂಚಿನಲ್ಲಿ ಕಲ್ಲುಬಂಡೆಗಳನ್ನು ಹಾಕುವುದರಿಂದ ಜೀವ ವೈವಿದ್ಯತೆಗೆ ಹಾನಿಯಾಗುತ್ತದೆ ಮತ್ತು ನಾಡದೋಣಿ ಮೀನುಗಾರಿಕೆಗೂ ತೊಂದರೆಯಾಗಲಿದೆ. ಕೂಡಲೇ ಇದನ್ನು ತಡೆಯಬೇಕೆಂದು ಜೈನ ಜಟಗೇಶ್ವರ ಯುವಕ ಸಂಘದ ಅಧ್ಯಕ್ಷ ಭಾಸ್ಕರ ತಾಂಡೇಲ್ ಮತ್ತು ಮೀನುಗಾರರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ :83 ತೇಜಸ್ ಯುದ್ಧ ವಿಮಾನ ಖರೀದಿ: HAL ಜತೆ 48 ಸಾವಿರ ಕೋಟಿ ರೂ. ಒಪ್ಪಂದ: ಕೇಂದ್ರ
ಕಾನೂನು ಪ್ರಕಾರವೇ ನಿಯಮಾವಳಿಯಂತೆ ರಸ್ತೆ ನಿರ್ಮಾಣ ಕಾಮಗಾರಿ ನಡೆದಿದೆ ಎಂದು ತಹಶೀಲ್ದಾರ್ ವಿವೇಕ ಶೇಣಿÌ ಹೇಳಿದ್ದು, ಪೊಲೀಸ್ ಬಂದೋಬಸ್ತ್ನಲ್ಲಿ ರಸ್ತೆ ಕಾಮಗಾರಿ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ