Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
Team Udayavani, May 8, 2024, 8:53 PM IST
ಭಟ್ಕಳ: ಅಳ್ವೆಕೋಡಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟವೊಂದರ ಮೀನುಗಾರನೊರ್ವ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಮೀನುಗಾರನನ್ನು ಶಿರಾಲಿ ಮಾವಿನಕಟ್ಟೆಯ ಹೆದ್ದಾರಿಮನೆ ನಿವಾಸಿ ಗಿರೀಶ ಪರಮಯ್ಯ ದೇವಾಡಿಗ ಎಂದು ಗುರುತಿಸಲಾಗಿದೆ.
ಬುಧವಾರ ಈತನು ಇತರೇ ಮೀನುಗಾರರೊಂದಿಗೆ ಅಳ್ವೆಕೋಡಿ ಬಂದರಿನಿಂದ ಜಲ ವಿಜಯ ಎಂಬ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಸಮಯದಲ್ಲಿ ಶಿರಾಲಿ ಕುಂದದ ಸಮೀಪ ಮೀನಿಗಾಗಿ ಬಲೆ ಬೀಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲಿಗೆ ಬಲೆ ಸಿಲುಕಿ ಸಮುದ್ರದಲ್ಲಿ ಬಿದ್ದು ತೀವ್ರ ಅಸ್ವಸ್ಥಗೊಂಡದ್ದು,ತಕ್ಷಣ ಅವರನ್ನು ಬೋಟ್ನ ಮಾಲೀಕರು ಹಾಗೂ ಇತರ ಮೀನುಗಾರರು ಸೇರಿ ರಕ್ಷಣೆ ಮಾಡಿ ಅಳ್ವೆಕೊಡಿ ಧಕ್ಕೆಗೆ ತಂದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ