Isrel ಯುದ್ಧ ಭೂಮಿಯಲ್ಲಿ ಸಿಲುಕಿದ ಉತ್ತರ ಕನ್ನಡದ ನಾಲ್ವರು ಯುವಕರು ಸುರಕ್ಷಿತ
Team Udayavani, Oct 9, 2023, 9:33 PM IST
ಕಾರವಾರ : ಯುದ್ಧಪೀಡಿತ ಇಸ್ರೇಲ್ ದೇಶದಲ್ಲಿ ಉತ್ತರ ಕನ್ನಡದ ನಾಲ್ವರು ಯುವಕರು ಉದ್ಯೋಗ ಅರಸಿ ಹೋಗಿದ್ದು, ಅವರೀಗ ಭಾರತೀಯ ರಾಯಭಾರ ಕಚೇರಿಯ ಸಂಪರ್ಕಕ್ಕೆ ಬರುತ್ತಿದ್ದಾರೆ. ಇಸ್ರೇಲ್ ಯುದ್ಧ ಘೋಷಣೆ ಮಾಡುತಿದ್ದಂತೆ ಭಾರತದ ರಾಯಭಾರಿ ಕಚೇರಿ ಸಹ ಇಸ್ರೇಲ್ ನಲ್ಲಿ ಇರುವ ಭಾರತೀಯರಿಗೆ ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ನಾಲ್ವರು ಯುವಕರು ಯುದ್ಧಪೀಡಿತ ಇಸ್ರೆಲ್ ನಲ್ಲಿ ಸಿಲುಕಿದ್ದು, ಸದ್ಯ ಸುರಕ್ಷಿತವಾಗಿದ್ದಾರೆ.ಜಿಲ್ಲೆಯ ಶಿರಸಿಯ ಇಬ್ಬರು ಯುವಕರು, ಯಲ್ಲಾಪುರದ ಓರ್ವ ಯುವಕ ,ಹೊನ್ನಾವರದ ಕವಲಕ್ಕಿಯ ಜೇಮ್ಸ್ ಎಂಬ ಯುವಕ ಇಸ್ರೇಲ್ ನಲ್ಲಿ ಇದ್ದಾರೆ ಎಂಬ ಮಾಹಿತಿ ಇದೀಗ ಹೊರಬಂದಿದೆ. ಜಿಲ್ಲಾಡಳಿತ ಸಹ ಮಾಹಿತಿ ನೀಡುವಂತೆ ಜಿಲ್ಲೆಯ ಜನತೆಯನ್ನು ಕೋರಿದೆ.
ಶಿರಸಿ ನಗರದ ಮೀನುಮಾರುಕಟ್ಟೆಯ ನಿವಾಸಿಯಾಗಿರುವ ಕ್ರಿಸೊಸ್ಟೆಮ್ ಪಾಲ್ ವಾಜ್ ಇಸ್ರೇಲ್ ನ ಹೈಫಾ ಗ್ರಾಮದಲ್ಲಿ ಹೋಮ್ ನರ್ಸ್ ಆಗಿ ಕಳೆದ ನಾಲ್ಕು ವರ್ಷದಿಂದ ಕಾರ್ಯನಿರ್ವಹಿಸುತಿದ್ದು, ಇದೀಗ ಅವರು ಇಸ್ರೇಲ್ ನ ಯುದ್ಧ ಪೀಡಿತ ಸ್ಥಳದಿಂದ 150 ಕಿಲೋಮೀಟರ್ ದೂರದಲ್ಲಿದ್ದಾರೆ. ಹಾಗೂ ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಶಿರಸಿಯ ಮತ್ತೋರ್ವ ಯುವಕ ವಿಲ್ಸನ್ ಡಯಾಸ್ ಎಂಬುವವರು ಹೋಮ್ ನರ್ಸಿಂಗ್ ಉದ್ಯೋಗ ಮಾಡುತ್ತಿದ್ದು, ಇಸ್ರೇಲ್ ನ ಪೇಟಾ ಟಿಕ್ವಾ ದಲ್ಲಿ ಸಿಲುಕಿದ್ದಾರೆ. ಹೊನ್ನಾವರದ ಕವಲಕ್ಕಿ ಗ್ರಾಮದ ಯುವಕ ಜೇಮ್ಸ್ ಸಹ ಇಸ್ರೇಲ್ ನಲ್ಲಿ ಸಿಲುಕಿದ್ದು ಇವರ ಬಗ್ಗೆ ಹೆಚ್ಚಿನ ಮಾಹಿತಿ ಹೊರಬರಬೇಕಿದೆ. ಯಲ್ಲಾಪುರದ ಯುವಕನ ಹೆಸರು ಇನ್ನು ತಿಳಿದು ಬಂದಿಲ್ಲ.
ಇಸ್ರೇಲ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಯುವಕರು ಸಿಲುಕಿದ್ದು ಇವರ ಮಾಹಿತಿಯನ್ನು ಪೋಷಕರು ಜಿಲ್ಲಾಡಳಿತಕ್ಕೆ ಇನ್ನಷ್ಟೇ ನೀಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ