ಸಿಎಂ ಎದುರು ಸಮಸ್ಯೆಗಳ ಸುರಿಮಳೆ

ಉತ್ತರ ಕನ್ನಡವೀಗ ಶಾಪಗ್ರಸ್ತ­ಅತಿವೃಷ್ಟಿ-ನೆರೆಯಿಂದ ತತ್ತರಿಸಿದ ಜನತೆಗೆ ಸಾಂತ್ವನ ಸಿಕ್ಕೀತೆ?

Team Udayavani, Jul 29, 2021, 10:00 PM IST

dfgyt

ವರದಿ: ನಾಗರಾಜ ಹರಪನಹಳ್ಳಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊಟ್ಟ ಮೊದಲ ಪ್ರವಾಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮೇಲೆ ಅವರ ಮೊದಲ ಪ್ರವಾಸ ಸಹ ಉತ್ತರ ಕನ್ನಡ ಜಿಲ್ಲೆಗೆ ಎಂಬುದು ಗಮನಾರ್ಹ.

ನೆರೆಯಿಂದ ನಾಲ್ಕು ದಿನದ ಹಿಂದೆ ಅಕ್ಷರಶಹ ನಲುಗಿರುವ ಜಿಲ್ಲೆಯ ನದಿ ದಂಡೆ ಗ್ರಾಮಗಳ 5000 ಕುಟುಂಬಗಳು ದುಃಖದಲ್ಲಿವೆ. ಮನೆ ಸೇರಿದಂತೆ ಬದುಕನ್ನು ನದಿ ದಂಡೆ ಜನರು ಕಳೆದುಕೊಂಡಿದ್ದಾರೆ. 2019-20ರಲ್ಲಿ ಬಂದ ನೆರೆಗೆ ಪರಿಹಾರ ಸಿಗದ ಹಲವು ಕುಟುಂಬಗಳಿವೆ. ನೂರಾರು ಮನೆಗಳನ್ನು ನದಿ ದಡದಿಂದ ಎತ್ತರದ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಹೊಸ ಮನೆಗಳನ್ನು ನಿರ್ಮಿಸಿಕೊಡುವ ಬಹುದೊಡ್ಡ ಸವಾಲು ನೂತನ ಮುಖ್ಯಮಂತ್ರಿ ಮುಂದಿದೆ.

ಬಾಳೆಗುಳಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಅರಬೈಲ್‌ ಬಳಿ ಕುಸಿದಿದೆ. ಕೈಗಾ ಇಳಕಲ್‌, ಅಣಶಿ ಖಾನಾಪುರ, ಕುಮಟಾ ಶಿರಸಿ ರಾಜ್ಯ ಹೆದ್ದಾರಿಗಳು ಕ್ರಮವಾಗಿ ಕಳಚೆ, ಚಾಪೋಲಿ, ಉಪ್ಪಿನಪಟ್ಟಣ ಬಳಿ ಸಮಸ್ಯೆ ಎದುರಿಸುತ್ತಿವೆ. ರಸ್ತೆಗಳನ್ನು ಪುನಃ ನಿರ್ಮಿಸುವ ಬಹುದೊಡ್ಡ ಸವಾಲು ಬಸವರಾಜ ಬೊಮ್ಮಾಯಿ ಎದುರು ಇದೆ. ಇನ್ನು ಗುಳ್ಳಾಪುರ ಸೇತುವೆ ಸೇರಿದಂತೆ 30 ಸೇತುವೆಗಳು ಕೊಚ್ಚಿಹೋಗಿವೆ. 500 ಹೆಕ್ಟೇರ್‌ಗೂ ಮಿಕ್ಕಿ ಭೂಮಿ ನೆರೆ ಹಾವಳಿಗೆ ತುತ್ತಾಗಿದೆ. ಇವುಗಳಿಗೆ ವಿಶೇಷ ಅನುದಾನ ಘೋಷಣೆಯನ್ನು ಜಿಲ್ಲೆ ಎದುರು ನೋಡುತ್ತಿದೆ. ಜೊತೆಗೆ ಈಗಾಗಲೇ ಮುಗಿದ ಕಾಮಗಾರಿಗಳಿಗೆ ಚಾಲನೆ ಹಾಗೂ ಯಡಿಯೂರಪ್ಪ ಅವರ ಕಾಲದಲ್ಲಿ ಮಂಜೂರಾದ ಕೋಟ್ಯಾಂತರ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಬೇಕಿದೆ.

ಪ್ರಮುಖ ಸವಾಲುಗಳು: ಉತ್ತರ ಕನ್ನಡ ಜಿಲ್ಲೆ 12 ತಾಲೂಕುಗಳಿರುವ ದೊಡ್ಡ ಜಿಲ್ಲೆ. ಬೆಳಗಾವಿ ಜಿಲ್ಲೆಯನ್ನು ಬಿಟ್ಟರೆ ಅತೀ ದೊಡ್ಡ ಭೌಗೋಳಿಕವಾಗಿ ಸಹ ಅತೀ ಹೆಚ್ಚು ವಿಸ್ತೀರ್ಣ ಹಾಗೂ ವೈವಿಧ್ಯತೆ ಹೊಂದಿರುವ ಜಿಲ್ಲೆ. ದೊಡ್ಡ ಜಿಲ್ಲೆಯನ್ನು ವಿಭಜಿಸಿ ಎರಡು ಜಿಲ್ಲೆಯನ್ನಾಗಿಸಬೇಕೆಂಬ ಸವಾಲು ಸಹ ನೂತನ ಮುಖ್ಯಮಂತ್ರಿಯ ಮುಂದಿದೆ. ಆಡಳಿತಾತ್ಮಕ ಅನುಕೂಲಕ್ಕಾಗಿ ಜಿಲ್ಲೆಯನ್ನು ಎರಡಾಗಿಸಬೇಕಿದೆ. ಇದಕ್ಕೆ ಬೇಕಾದ ಪೂರ್ವ ತಯಾರಿ ದಶಕದಿಂದ ನಡೆದಿದೆ. ನೂತನ ಜಿಲ್ಲೆಯ ಘೊಷಣೆ ಬಾಕಿಯಿದ್ದು ಅದು ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಆಗಬಹುದೇ ಎಂಬ ಪ್ರಶ್ನೆಯಿದೆ.

ಇನ್ನು ಬಂದರುಗಳು ನಿರ್ಮಾಣದಲ್ಲಿ ವಿವಾದಗಳು ಎದ್ದಿವೆ. ಹೊನ್ನಾವರ ವಾಣಿಜ್ಯ ಬಂದರು ವಿವಾದ, ಕಾರವಾರ ಬಂದರು ಎರಡನೇ ಹಂತದ ವಿಸ್ತರಣೆ, ಬೇಲೆಕೇರಿ ಬಂದರು ನಿರ್ಮಾಣ ಹಾಗೂ ಅಲಗೇರಿ ಬಳಿ ನೂತನ ನಾಗರಿಕ ವಿಮಾನ ನಿಲ್ದಾಣ ಕಾರ್ಯ ಎಲ್ಲವೂ ಹೀಗೆ ಸಾಲು ಸಾಲು ಸಮಸ್ಯೆಗಳಿವೆ. ಇವುಗಳನ್ನು ಅತ್ಯಂತ ಚಾಣಕ್ಷತನದಿಂದ ನಿರ್ವಹಿಸಬೇಕಿದೆ. ಕೆಲ ವಿವಾದಗಳು ಅನಗತ್ಯವಾಗಿ ಹುಟ್ಟಿಕೊಂಡವುಗಳಿದ್ದು, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಹಲವು ಅಭಿವೃದ್ಧಿ ಕಾರ್ಯಗಳಿಗೆ ಪರಿಸರದ ನೆಪದಲ್ಲಿ ಹೊರಗಿನವರು, ಒಳಗಿನವರು ಮುಳ್ಳಾಗಿದ್ದಾರೆ. ಕೆಲ ಕುಡಿಯುವ ನೀರಿನ ಯೋಜನೆಗಳಿಗೆ ಸ್ವಪಕ್ಷೀಯರೇ ಅಡ್ಡಿಯಾಗಿದ್ದಾರೆ. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸುವ ಸವಾಲು ಇದೆ. ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗದ ಯೋಜನೆ 30 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅಟಲ್‌ ಬಿಹಾರಿ ವಾಜಪೇಯಿ ಅಡಿಗಲ್ಲು ಇಟ್ಟ ಯೋಜನೆಯನ್ನು ಬಿಜೆಪಿ ಸರ್ಕಾರ ಅನುಷ್ಟಾನ ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಹುಬ್ಬಳ್ಳಿ ಮೂಲದವರೇ ಮುಖ್ಯಮಂತ್ರಿಯಾಗಿದ್ದು, ಈಗ ಅತೀ ದೊಡ್ಡ ಸವಾಲನ್ನು ನೂತನ ಮುಖ್ಯಮಂತ್ರಿ ಎದುರಿಸುತ್ತಿದ್ದಾರೆ.

ನೂತನ ಅರಣ್ಯ ಪರಿಸರ ನೀತಿ ಬಳಸಿ ರೈಲು ಯೋಜನೆಯ ಅನುಷ್ಠಾನದ ಸವಾಲು ಇದೆ. ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿವೆ. ಪ್ರವಾಸಿತಾಣಗಳಿಗೆ ರಸ್ತೆ ಸಹ ಮಾಡಲು ಬಿಡದ ಮನಸುಗಳನ್ನು ಕಾನೂನಿ ಅಡಿ ಬಂಧಿಸಿ, ಕೆಲಸ ಮಾಡಬೇಕಾದ ತುರ್ತು ಸನ್ನಿವೇಶ ಈಗ ನಿರ್ಮಾಣವಾಗಿದೆ. ಯೋಜನೆಗಳಿಗೆ ವೈಜ್ಞಾನಿಕ ಕಾರಣ ನೀಡದೆ ಅಡ್ಡಿ ಮಾಡುವವರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಮಾಡದಿದ್ದರೆ, ಜಿಲ್ಲೆ ಇನ್ನು ಕತ್ತಲೆಯಲ್ಲೇ ಉಳಿಯಬೇಕಿದೆ. ಶಾಪಗ್ರಸ್ತ ಕನ್ಯೆಯಂತಿರುವ ಜಿಲ್ಲೆಗೆ ನೂತನ ಮುಖ್ಯಮಂತ್ರಿಯ ಕರುಣೆಯ ಕಣ್ಣು ಬೀಳಬೇಕಿದೆ.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.