ಯಲ್ಲಾಪುರದಲ್ಲಿ ಗಟಾರ ಕಾಮಗಾರಿ ಅಪೂರ್ಣ
Team Udayavani, Apr 25, 2019, 5:23 PM IST
ಯಲ್ಲಾಪುರ: ಕಾಮಗಾರಿ ಮುಗಿಸಬೇಕೆನ್ನುವ ತರಾತುರಿಯಲ್ಲಿ ಪಟ್ಟಣದಲ್ಲಿ ನಡೆಯುತ್ತಿರುವ ಹೆದ್ದಾರಿ ಪಕ್ಕದ ಗಟಾರ ಕಾಮಗಾರಿ ಹಲವು-ಅಧ್ವಾನಗಳನ್ನು ಸೃಷ್ಟಿಸುತ್ತಿದೆ.
ಪಟ್ಟಣದ ರಾಷ್ಟ್ರೀಯ ಹೆದ್ದಾರಿ 63ರ ಪಕ್ಕ ಕೇಂದ್ರ ಸರಕಾರದ ಅನುದಾನದಲ್ಲಿ ಕಳೆದ ಎರಡು ವರ್ಷಗಳಿಂದ ಗಟಾರ ನಿರ್ಮಾಣ ಕಾಮಗಾರಿ ವಿವಿಧ ಕಾರಣಗಳಿಂದ ಕುಂಟುತ್ತ ಸಾಗಿದೆ. ಆದರೆ ಈಗ ಬಹುತೇಕ ಪೂರ್ಣತೆಯತ್ತ ಸಾಗುತ್ತಿದೆ. ಆದರೆ ಅಲ್ಲಲ್ಲಿ ಕಾಮಗಾರಿ ಬಾಕಿಯಿದ್ದು, ಅಪೂರ್ಣ ಸ್ಥಿತಿಯಲ್ಲಿನ ಕಾಮಗಾರಿಯಿಂದಾಗಿ ಸಾರ್ವಜನಿಕರು, ಸ್ಥಳೀಯರು ಪರದಾಡುವಂತಾಗಿದೆ.
ಇಲ್ಲಿ ಸಬಗೇರಿಯ ಶಿವಾಜಿಚೌಕ್ ಬಳಿ ರಾಷ್ಟ್ರೀಯ ಹೆದ್ದಾರಿ 63 ಪಕ್ಕ ಗಟಾರ ನಿರ್ಮಿಸಲಾಗುತ್ತಿದೆ. ಕಾಮಗಾರಿಯ ಅಪೂರ್ಣತೆಯಿಂದಾಗಿ ಇಲ್ಲಿ ಮತ್ತು ಹಲವೆಡೆ ನಿತ್ಯ ಓಡಾಡುವ ಪಾದಾಚಾರಿಗಳು, ಸ್ಥಳೀಯ ನಿವಾಸಿಗಳು ಅಪಾಯದಲ್ಲಿಯೇ ಓಡಾಡುವಂತಾಗಿದೆ. ಮನೆಯ ಎದುರುಗಡೆ ಚರಂಡಿ ನಿರ್ಮಿಸಲಾಗುತ್ತಿದೆ. ಚರಂಡಿ ನಿರ್ಮಿಣಕ್ಕೆ ಹೊಂಡ ತೆಗೆಯಲಾಗಿದೆ. ಮಣ್ಣನ್ನು ರಸ್ತೆಯ ಪಕ್ಕ ಹಾಕಲಾಗಿದೆ. ಕೆಲವು ಕಡೆ ಕಾಮಗಾರಿಯನ್ನು ಅರೆ ಬರೆ ನಿರ್ಮಾಣ ಮಾಡಲಾಗಿದೆ. ಸ್ಥಳೀಯ ನಿವಾಸಿಗಳು ತಮ್ಮ ಮನೆಗೆ ಹೋಗಲು ದ್ವಿಚಕ್ರ ವಾಹನ ಒಯ್ಯಲು ಸಾಧ್ಯವಾಗದ ಸ್ಥಿತಿ ಇದೆ. ಚಿಕ್ಕ ಮಕ್ಕಳು ಮನೆಯಿಂದ ಹೊರ ಹೋಗಲು, ಶಾಲೆಗೆ ಓಡಾಡಲು ಅಪಾಯದ ಸ್ಥಿತಿಯನ್ನು ಲೆಕ್ಕಿಸದೇ ಓಡಾಟ ನಡೆಸಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಪ.ಪಂಗೆ ಮನವಿ ಸಲ್ಲಿಸಿದರೂ ಅದಕ್ಕೆ ಸ್ಪಂದನೆ ದೊರೆಯುತ್ತಿಲ್ಲ. ಗುತ್ತಿಗೆದಾರರು ಈ ಬಗ್ಗೆ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ