ಹೊನ್ನಾವರ: ಗೇರುಸೊಪ್ಪಾದ ಗ್ರಾಮೀಣ ಪ್ರತಿಭೆ ರಾಜ್ಯಕ್ಕೆ ಫಸ್ಟ್
Team Udayavani, Aug 10, 2021, 1:32 PM IST
ಹೊನ್ನಾವರ: ಗ್ರಾಮೀಣ ಪ್ರದೇಶವಾದ ಗೇರುಸೊಪ್ಪಾ ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ ಎಲ್ಸಿ ವಿದ್ಯಾರ್ಥಿನಿ ಭೂಮಿಕ ಕೃಷ್ಣ ನಾಯ್ಕ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ.
ಈ ಬಾರಿ ಕೋವಿಡ್ ಮಹಾಮಾರಿಯಿಂದ ಗೊಂದಲದ ಗೂಡಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಕಳೆದ ತಿಂಗಳು ನಡೆದಿತ್ತು. ಇದೀಗ ಫಲಿತಾಂಶ ಬಂದಿದ್ದು, ತಾಲೂಕಿನ ನಿವಾಸಿ ರಾಜ್ಯಮಟ್ಟದಲ್ಲಿ ಗುರುತಿಸುವಂತಹ ಸಾಧನೆ ಮಾಡಿದ್ದಾಳೆ. ಸರ್ಕಾರಿ ಪ್ರಾಥಮಿಕ ಶಾಲೆ ಮುಗಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ಸರ್ಕಾರಿ ಪ್ರೌಢಶಾಲೆಯಲ್ಲಿ ಅಧ್ಯಯನ ನಡೆಸಿ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ.
ಗೌರಿ ಹಾಗೂ ಕೃಷ್ಣ ನಾಯ್ಕ ದಂಪತಿ ಮಗಳಾಗಿರುವ ಭೂಮಿಕ ಮುಂದಿನ ದಿನದಲ್ಲಿ ವಿಜ್ಞಾನ ವಿಭಾಗ ಆಯ್ಕೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾಳೆ. ಉದಯವಾಣಿ ಪತ್ರಿಕೆಯೊಂದಿಗೆ ಮಾತನಾಡಿದ ಭೂಮಿಕಾ ನಾಯ್ಕ, ಮೂರು ತಿಂಗಳಿನಲ್ಲಿ ಶಿಕ್ಷಕರು ಬಹು ಮುಖ್ಯವಾದ ಮಾಹಿತಿ ನೀಡಿದ್ದರು. ಕೊರೊನಾ ಕಾರಣದಿಂದ ಗೂಗಲ್ ಮೀಟ್ ಮೂಲಕ ಪರೀಕ್ಷೆಗೆ ಎದುರಿಸಲು ಅಗತ್ಯವಿರುವ ಮಾಹಿತಿ ನೀಡಿದ್ದರು. ಆರಂಭದಲ್ಲಿ ಕೊರೊನಾದಿಂದ ಪರೀಕ್ಷೆ ಎದುರಿಸಲು ಭಯವಿತ್ತು. ಶಿಕ್ಷಣ ಸಚಿವರ ಸಮಯಕ್ಕನುಗುಣವಾಗಿ ಮಾಹಿತಿ, ತಂದೆ ತಾಯಿಯ ಸಹಕಾರ, ಶಾಲೆ ಗುರುಗಳ ಪೋತ್ಸಾಹ ಹಾಗೂ ಮಾರ್ಗದರ್ಶನದಲ್ಲಿ ಪರೀಕ್ಷೆ ಎದುರಿಸಿದ್ದೆ. ನನ್ನ ಫಲಿತಾಂಶ ಸಂತಸ ಮೂಡಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?