ಬಾಲಕಿ ಅಪಹರಿಸಿ ಅತ್ಯಾಚಾರಕ್ಕೆ ಯತ್ನ: ವ್ಯಕ್ತಿಯ ಬಂಧನ


Team Udayavani, Jan 29, 2018, 2:27 PM IST

29-30.jpg

ಹಳಿಯಾಳ: ವಿಳಾಸ ಕೇಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ಆಟೋ ರಿಕ್ಷಾದಲ್ಲಿ ಅಪಹರಿಸಿಕೊಂಡು ಹೋಗಿ ಕಾಡಿನ ನಿರ್ಜನ
ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಧಾರವಾಡ ರಾಜೀವಗಾಂಧಿ  ನಗರದ ನಿವಾಸಿ ಅಬ್ದುಲ್‌ ಕರಿಮ ಅಬ್ದುಲ್‌ಗ‌ಫಾರ ಮೇಸ್ತ್ರಿ (45) ಆಗಿದ್ದು ತನ್ನ ಆಟೋದಲ್ಲಿ
ಹಳಿಯಾಳಕ್ಕೆ ಬಾಡಿಗೆ ಬಂದಿದ್ದ ಈತ ಹಳಿಯಾಳದಲ್ಲಿ ಈ ದುಷ್ಕೃತ್ಯ ನಡೆಸಿದ್ದಾನೆಂದು ಹೇಳಲಾಗಿದೆ.

ಘಟನೆ: ಶನಿವಾರ ಸಂಜೆ ಪಟ್ಟಣದ ಮಿಲಾಗ್ರಿಸ್‌ ಚರ್ಚ್‌ ಬಳಿ ತೆರಳಿದ್ದ ಆರೋಪಿ ಬಾಲಕಿಯನ್ನು ವಿಳಾಸ ಕೇಳುವ ನೆಪದಿಂದ
ಮಾತನಾಡಿಸಿ ಅಪಹರಣ ಮಾಡಿಕೊಂಡು ಧಾರವಾಡ ರಸ್ತೆಗೆ ಹೊರಟು ಪಟ್ಟಣದಿಂದ 5 ಕಿಮೀ ದೂರದಲ್ಲಿ ಹೊಗಿ ಅರಣ್ಯದ
ಕಚ್ಚಾ ರಸ್ತೆಯೊಳಗೆ ಹೋಗಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಗ ಧೈರ್ಯದಿಂದ ಕಾಮುಕನನ್ನು ಎದುರಿಸಿದ 
ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ತಪ್ಪಿಸಿಕೊಂಡು ಬಂದು ಮುಖ್ಯ ರಸ್ತೆ ಬಳಿ ನಿಂತು ಸಾಗುತ್ತಿದ್ದ ವಾಹನಗಳಿಗೆ ಕೈಮಾಡಿದರೂ ಯಾರೂ ವಾಹನ ನಿಲ್ಲಿಸಿಲ್ಲ. ಆಗ ಅದೇ ಮಾರ್ಗದಿಂದ ತೇರಳುತ್ತಿದ್ದ ಪೊಲೀಸ್‌ ಪೇದೆಗಳಾದ ಅಶೋಕ ಹುಬ್ಬಳ್ಳಿ ಮತ್ತು ಮಾಹಾಂತೇಶ ಬಾರ್ಕೆರ ಬಾಲಕಿಯನ್ನು ವಿಚಾರಿಸಿದಾಗ ನೀಡಿದ ಮಾಹಿತಿ ಆಧರಿಸಿ ಅರಣ್ಯ ಹೊಕ್ಕಿ ಪರಾರಿಯಾಗುತ್ತಿದ್ದ ಅಬ್ದುಲ್‌ ಕರೀಮ್‌ನನ್ನು ಹಿಂಬಾಲಿಸಿ ಸೆರೆ ಹಿಡಿದಿದ್ದಾರೆ.

ದೌರ್ಜನ್ಯಕ್ಕೊಳಗಾದ ಬಾಲಕಿ ಕ್ರೈಸ್ತ ಸಮುದಾಯಕ್ಕೆ ಸೇರಿದವಳಾಗಿದ್ದು ಘಟನೆಯ ಬಗ್ಗೆ ಪಟ್ಟಣದಲ್ಲಿ ತಿಳಿಯುತ್ತಿದ್ದಂತೆ ಕ್ರೈಸ್ತ ಸಮಾಜ ಸೇರಿದಂತೆ ಎಲ್ಲ ಸಮಾಜಗಳ ಮಹಿಳೆಯರು, ಸಾರ್ವಜನಿಕರು, ಯುವಕರು ನೂರಾರು ಸಂಖ್ಯೆಯಲ್ಲಿ ಠಾಣೆಯ ಎದುರು ಜಮಾಯಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು.  ದಾಂಡೇಲಿ ಸಿಪಿಐ ಅನೀಸ್‌ ಮುಜಾವರ ಹಳಿಯಾಳ ಠಾಣೆಗೆ ಆಗಮಿಸಿ ಮಾಹಿತಿ ಪಡೆದು ಆರೋಪಿ ವಿಚಾರಣೆ ನಡೆಸಿದರು. ಪಿಎಸ್‌ಐ ಹೂಗಾರ್‌ ಆರೋಪಿ ಅಬ್ದುಲ್‌ಕರೀಮ್‌ ವಿರುದ್ಧ ಅಪಹರಣ ಹಾಗೂ ಫೂಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಆತನ ಆಟೋ ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.