Gokarna ಬತ್ತುತ್ತಿರುವ ಗುಂಡಬಾಳ ನದಿ ಯೋಜನೆ: ಕುಡಿಯುವ ನೀರಿಗೂ ಪರದಾಡುವ ಸ್ಥಿತಿ


Team Udayavani, Apr 3, 2024, 5:25 PM IST

Gokarna ಬತ್ತುತ್ತಿರುವ ಗುಂಡಬಾಳ ನದಿ ಯೋಜನೆ: ಕುಡಿಯುವ ನೀರಿಗೂ ಪರದಾಡುವ ಸ್ಥಿತಿ

ಗೋಕರ್ಣ : ದಕ್ಷಿಣದ ಕಾಶಿ, ಪ್ರವಾಸಿಗರ ಸ್ವರ್ಗ ಎನಿಸಿಕೊಂಡಿರುವ ಗೋಕರ್ಣಕ್ಕೆ ಈಗ ನೀರಿನ ಬಿಸಿ ತಟ್ಟಿದೆ. ಕಳೆದ ಐದಾರು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅತಿಬೇಗ ನೀರಿನ ಅಭಾವಕ್ಕೆ ಒಳಗಾಗಿದ್ದರಿಂದಾಗಿ ಜನರು ಸಾಕಷ್ಟು ಸಂಕಷ್ಟ ಪಡುವಂತಾಗಿದೆ. ಇನ್ನು ಬಹುತೇಕ ಹೊಟೇಲ್, ರೆಸಾರ್ಟ್ ಗಳಲ್ಲಿಯೂ ಕೂಡ ನೀರಿನ ಅಭಾವ ಉಂಟಾಗಿ ಟ್ಯಾಂಕರ್‌ಗಳ ಮೂಲಕ ನೀರು ತರಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಜನರು ಕೂಡ ಕುಡಿಯುವ ನೀರಿಗಾಗಿ ದೂರದ ಪ್ರದೇಶಗಳಿಗೆ ನಡೆದುಕೊಂಡು ತೆರಳಬೇಕು ಅಥವಾ ನಲ್ಲಿ ನೀರಿಗಾಗಿ ಎರಡು ಮೂರು ದಿನ ಕಾಯಬೇಕು ಎನ್ನುವ ಸ್ಥಿತಿ ಅನುಭವಿಸುತ್ತಿದ್ದಾರೆ.

ಗುಂಡಬಾಳ ಯೋಜನೆಯಿಂದಾಗಿ ಈ ಭಾಗದವರಿಗೆ ಜಲ ಜೀವನ್ ಮಿಷನ್ ಯೋಜನೆಯಿಂದ ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ ಈಗ ಗುಂಡಬಾಳ ನದಿಯಲ್ಲಿಯೇ ನೀರು ಬತ್ತುತ್ತಿರುವುದರಿಂದಾಗಿ ನೀರಿನ ಪೂರೈಕೆ ಕೂಡ ಕುಂಠಿತಗೊಂಡಿದೆ.

ಬಳಲೆಯಲ್ಲಿ ನಿರ್ಮಿಸಲಾದ ನೀರು ಸಂಗ್ರಹಗಾರದಲ್ಲಿ ಪ್ರತಿದಿನ ನಾಲ್ಕು ಲಕ್ಷ ಲೀ. ನೀರು ಸಂಗ್ರಹಗೊಂಡು ಒಟ್ಟು 1700 ಮನೆಗಳಿಗೆ ಪ್ರತಿದಿನ ನೀರನ್ನು ಬಿಡಲಾಗುತ್ತಿದೆ. ಆದರೆ ನೀರಿನ ತಗ್ಗಿದ್ದರಿಂದಾಗಿ ಸದ್ಯ ಎರಡು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಇನ್ನೊಂದಿಷ್ಟು ದಿನ ಕಳೆದರೆ ವಾರಕ್ಕೊಮ್ಮೆ ನೀರು ಬಂದರೂ ಅಚ್ಚರಿಪಡಬೇಕಾಗಿಲ್ಲ.

ಗೋಕರ್ಣ ಭಾಗದಲ್ಲಿ ಹೋಮ್‌ಸ್ಟೇ, ರೆಸಾರ್ಟ್ ಹಾಗೇ ಅನುಕೂಲಸ್ಥರು ತಮ್ಮ ಸಣ್ಣಪುಟ್ಟ ಜಾಗದಲ್ಲಿಯೇ ಕೂಡ ಕೊಳವೆ ಬಾವಿಯನ್ನು ಕೊರೆದು ಯಥೇಚ್ಛವಾಗಿ ನೀರನ್ನು ಬಳಸುತ್ತಿದ್ದರು. ಇದರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ನೀರಿನ ಕ್ಷಾಮ ಕೂಡ ಎದುರಾಗಿದೆ. ಹೀಗಾಗಿ ಇದು ಹೊಟೇಲ್‌ ನವರಿಗೂ ಈಗ ಬಿಸಿ ತಟ್ಟಿದಂತಾಗಿದೆ.

ಇನ್ನು ಗೋಕರ್ಣ ಗ್ರಾ.ಪಂ.ವ್ಯಾಪ್ತಿಯ ಬಿಜ್ಜೂರು, ಚೌಡಗೇರಿ, ತಲಗೇರಿ, ಬಂಡಿಕೇರಿ ಬಾವಿಗಳಿಂದ ಹಾಗೂ ಆರು ಕೊಳವೆ ಬಾವಿಗಳಿಂದ ಈ ಮೊದಲು ನೀರು ನೀಡಲಾಗುತ್ತಿತ್ತು. ಆದರೆ ನಿರ್ವಹಣೆಯಿಲ್ಲದೇ ಪೈಪ್‌ಲೈನ್ ಸೇರಿದಂತೆ ಇನ್ನಿತರ ಸಮಸ್ಯೆಗಳು ಉಂಟಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಬೇಕಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.