Sirsi ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್‌ನ ಸುವರ್ಣ ಮಹೋತ್ಸವ

ಚಿಂತನ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ ಪ್ರದರ್ಶನ...

Team Udayavani, May 18, 2023, 7:26 PM IST

1-sadsd

ಶಿರಸಿ: ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲೊಂದಾದ, ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮವು ಮೇ 20 ಹಾಗೂ 21 ರಂದು ಪ್ರೌಢಶಾಲೆಯ ಆವಾರದಲ್ಲಿ ನಡೆಯಲಿದೆ.

ಮೇ 20 ರ ಮಧ್ಯಾಹ್ನ 3 ಗಂಟೆಗೆ ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಹೆಗಡೆ ಹೊನ್ನೆಕಟ್ಟಾ ಅಧ್ಯಕ್ಷತೆ ವಹಿಸುವರು. ಎಂ.ಇ.ಎಸ್. ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಹೆಗಡೆಕಟ್ಟಾ ಗ್ರಾ.ಪಂ. ಅಧ್ಯಕ್ಷೆ ವೀಣಾ ಭಟ್ಟ ಹಾಗೂ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ, ಪ್ರೌಢಶಾಲೆಯ ನಿವೃತ್ತ ಮುಖ್ಯಾಧ್ಯಾಪಕ ವಿ.ಪಿ. ಹೆಗಡೆ ಹನ್ಮಂತಿ ಉಪಸ್ಥಿತರಿರುವರು.

ಮೇ 21ರ ಬೆಳಗ್ಗೆ 10.30ರಿಂದ ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶಗಳ ಹಿನ್ನೆಲೆಯಲ್ಲಿ ಕನ್ನಡ ಮಾಧ್ಯಮ ಶಿಕ್ಷಣ ಎಂಬ ವಿಷಯದ ಕುರಿತು ಚಿಂತನ ಗೋಷ್ಠಿ ನಡೆಯುವುದು. ಗೋಷ್ಠಿಯನ್ನು ವಿ.ಪ. ಸದಸ್ಯ ಪ್ರೊ. ಎಸ್. ವಿ. ಸಂಕನೂರು ಉದ್ಘಾಟಿಸುವರು‌. ವಿ.ಪಿ. ಹೆಗಡೆ ಹನ್ಮಂತಿ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಮಾಧ್ಯಮಿಕ ಶಿಕ್ಷಣ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ದೈಮನೆ ಉಪಸ್ಥಿತರಿರುವರು. ಶಾಲೆಯ ಹಳೆಯ ವಿದ್ಯಾರ್ಥಿಗಳಾದ ವಿ.ಎಂ. ಭಟ್ ಶಿರಸಿ, ಕಿಶೋರ್ ಹೆಬ್ಬಾರ್ ಬೆಂಗಳೂರು, ಗೋಪಾಲಕೃಷ್ಣ ರಾ. ಹೆಗಡೆ ಹೆಗಡೆಕೇರಿ ಹಾಗೂ ಇತರ ಶಿಕ್ಷಣಾಸಕ್ತರು ಗೋಷ್ಠಿಯಲ್ಲಿ ವಿಷಯ ಪ್ರಸ್ತುತ ಪಡಿಸುವರು ಎಂದು ತಿಳಿಸಲಾಗಿದೆ.

ಮೇ 21 ರ ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ವಿ.ಪ. ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಹೆಚ್‌ಡಿಎಫ್‌ಸಿ ಬ್ಯಾಂಕಿನ ನಿವೃತ್ತ ಸೀನಿಯರ್ ವೈಸ್ ಪ್ರೆಸಿಡೆಂಟ್ ಹಾಗೂ ಮ್ಯಾನೇಜ್‌ಮೆಂಟ್ ಕನ್ಸಲ್ಟಂಟ್ ಮಧುಸೂದನ ಹೆಗಡೆ ಮರಿಯಜ್ಜನಮನೆ ಮತ್ತು ಶಿರಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಹೆಗಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಸಂಸ್ಥೆಯ ಅಧ್ಯಕ್ಷ ಎಂ. ಆರ್. ಹೆಗಡೆ ಹೊನ್ನೆಕಟ್ಟಾ ಅಧ್ಯಕ್ಷತೆ ವಹಿಸುವರು. ವಿ.ಪಿ. ಹೆಗಡೆ ಹನ್ಮಂತಿ ಉಪಸ್ಥಿತರಿರುವರು.

ಸಮಾರೋಪ ಸಮಾರಂಭದ ನಂತರ ಹಳೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 10.30 ರಿಂದ ಆರ್‌.ಟಿ. ಹೆಗಡೆ ತೀರ್ಥಗಾನ ಹಾಗೂ ಸುಬ್ರಾಯ ಹೆಗಡೆ ಕಲ್ಲರೆಗದ್ದೆ ನಿರ್ದೇಶನದಲ್ಲಿ ಸಹೋದರರು ಹಾಕಿದ ಸವಾಲ್ ಎಂಬ ಸಾಮಾಜಿಕ ನಾಟಕ ಪ್ರದರ್ಶನ ನಡೆಯುವುದು. ನಾಟಕಕ್ಕೆ ಕುಮಟಾದ ಗೋಪಾಲಕೃಷ್ಣ ಡ್ರಾಮಾ ಸೀನ್ಸ್ ಅವರ ರಂಗಸಜ್ಜಿಕೆ ಹಾಗೂ ಕೋಡ್ಲಿಯ ಸು.ವೇ. ಗ ಕಲಾವೃಂದದ ಸಂಗೀತವಿರಲಿದೆ. ಸೀತಾರಾಮ ಸರಕುಳಿ, ಗಣೇಶ ಯಡಳ್ಳಿ, ಸುಬ್ಬಣ್ಣ ಕಲ್ಲರೆಗದ್ದೆ, ರಾಜೇಶ ಶಿವಳ್ಳಿ, ಸಂದೀಪ ಶಿವಳ್ಳಿ, ರಾಮಚಂದ್ರ ಶಿವಳ್ಳಿ, ಚಿನ್ಮಯ ಕಂಬಿಗಾರ, ಗಪ್ಪು ಮೂಡ್ಗಾರ, ನಾರಾಯಣ ಮೂಡ್ಗಾರ, ವಿನಾಯಕ ಹೆಗ್ಗಾರ ಹಾಗೂ ಪ್ರಭಾಕರ ತುಂಬೇಮನೆ ಪಾತ್ರ ನಿರ್ವಹಿಸಲಿದ್ದಾರೆ. ಸುನೇತ್ರಾ ಬೆಂಗಳೂರು, ಮಾಧುರಿ ತುಮಕೂರು ಹಾಗೂ ತೇಜು ಬಾದಾಮಿ ಸ್ತ್ರೀಪಾತ್ರಗಳಲ್ಲಿ ರಂಜಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.