ಅವಧಿಗೆ ಮೊದಲೇ ನಿವೃತ್ತಿ ಮಾಡಿದ್ದಕ್ಕೆ ಆಕ್ರೋಶ

ಶಾಸಕ ದಿನಕರ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿ ನ್ಯಾಯಕ್ಕಾಗಿ ಮೊರೆ ಹೋದ ಹಾಲಕ್ಕಿ ಒಕ್ಕಲಿಗರ ಸಂಘಟನೆ

Team Udayavani, Jun 23, 2021, 9:43 PM IST

22 kmt 03

ಕುಮಟಾ: ಗೋಕರ್ಣ ಅರ್ಬನ್‌ ಬ್ಯಾಂಕ್‌ನಲ್ಲಿ ಅಟೆಂಡರ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಮ ತಿಮ್ಮ ಗೌಡರನ್ನು ಎರಡು ವರ್ಷಗಳ ಮೊದಲೇ ಸೇವಾ ನಿವೃತ್ತಿ ಮಾಡಿರುವುದನ್ನು ವಿರೋಧಿಸಿ ಹಾಲಕ್ಕಿ ಒಕ್ಕಲಿಗರ ಸಂಘವು ಅಧ್ಯಕ್ಷ ಗೋವಿಂದ ಗೌಡರ ನೇತೃತ್ವದಲ್ಲಿ ಶಾಸಕ ದಿನಕರ ಶೆಟ್ಟಿಗೆ ದೂರು ಸಲ್ಲಿಸಿದೆ.

ಗೋಕರ್ಣ ಅರ್ಬನ್‌ ಬ್ಯಾಂಕ್‌ನಲ್ಲಿ ಅಟೆಂಡರ್‌ ಆಗಿದ್ದ ರಾಮ ತಿಮ್ಮ ಗೌಡರನ್ನು ಎರಡು ವರ್ಷ ಮೊದಲೇ ನಿವೃತ್ತಿಗೊಳಿಸುವ ಮೂಲಕ ಅವರಿಗೆ ಅನ್ಯಾಯ ಮಾಡಲಾಗಿದೆ. 28 ವರ್ಷಗಳಿಂದ ಬ್ಯಾಂಕ್‌ ನಲ್ಲಿ ಡಿ ದರ್ಜೆ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದ ರಾಮ ಗೌಡ 1994ರ ಅ. 1 ರಂದು ಅಟೆಂಡರ್‌ ಹುದ್ದೆಗೆ ನೇಮಕಾತಿ ಪಡೆದಿದ್ದರು. ಸಹಕಾರಿ ಇಲಾಖೆ ಮತ್ತು ಸರ್ಕಾರದ ನಿಯಮಗಳ ಪ್ರಕಾರ ರಾಮ ಗೌಡರಿಗೆ 2023 ರ ತನಕ ಬ್ಯಾಂಕ್‌ನಲ್ಲಿ ನೌಕರಿ ಮಾಡುವ ಅವಕಾಶವಿದೆ. ಆದರೆ ಬ್ಯಾಂಕ್‌ ವ್ಯವಸ್ಥಾಪಕರು ಕಳೆದ ಏ.29 ರಂದು ಗೌಡರಿಗೆ ನಿವೃತ್ತಿಗೊಳಿಸುವ ಬಗ್ಗೆ ಮಾಹಿತಿ ನೀಡಿದ್ದರು. ಇದರಿಂದ ಅಚ್ಚರಿಗೊಂಡ ಗೌಡರು, ನನಗಿನ್ನೂ 58 ವರ್ಷ. 2 ವರ್ಷ ಸೇವಾವಧಿ ಇನ್ನೂ ಬಾಕಿಯಿದೆ. ನನಗೆ ಅನ್ಯಾಯ ಮಾಡಬೇಡಿ ಎಂದು ವಿನಂತಿಸಿಕೊಂಡರೂ ಕಳೆದ ಮೇ 31 ರಂದು ನಿವೃತ್ತಿಗೊಳಿಸಿದ್ದಾರೆ.

ನೌಕರರನ್ನು 58 ವರ್ಷಕ್ಕೆ ನಿವೃತ್ತಿಗೊಳಿಸುವ ಸಹಕಾರಿ ಸಂಘ ಅಥವಾ ಸಹಕಾರಿ ಬ್ಯಾಂಕ್‌ಗಳ 1960ರ ನಿಯಮ 18(2)ನ್ನು ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಎರಡು ವರ್ಷ ಹೆಚ್ಚಿಗೆ ಸೇವಾವಧಿ ಕಲ್ಪಿಸಿ, ಬದಲಾಯಿಸಲಾಗಿದೆ. ಆದರೂ ಸರ್ಕಾರದ ನಿಯಮ ಗಾಳಿಗೆ ತೂರಿದ ಗೋಕರ್ಣ ಅರ್ಬನ್‌ ಬ್ಯಾಂಕ್‌ ಆಡಳಿತ ಮಂಡಳಿ ರಾಮ ಗೌಡರನ್ನು 58 ವರ್ಷಕ್ಕೆ ನಿವೃತ್ತಿಗೊಳಿಸಿರುವುದು ಖಂಡನೀಯ. ಈ ಪ್ರಕರಣದ ವಿಚಾರಣೆ ನಡೆಸಿದ ಉಪ ನಿಬಂಧಕರು, ಬ್ಯಾಂಕ್‌ ಗೌಡರಿಗೆ ಕೊಟ್ಟಿರುವ ನಿವೃತ್ತಿ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದಾರೆ. ಇಷ್ಟಾದರೂ ಬ್ಯಾಂಕ್‌ ನವರು ಮಾತ್ರ ಗೌಡರನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳದೇ ಸತಾಯಿಸುತ್ತಿದ್ದಾರೆ. ರಾಮಗೌಡ ದಿನವೂ ಡಿಆರ್‌ ಕೋರ್ಟಿನ ತಡೆಯಾಜ್ಞೆ ಹಿಡಿದುಕೊಂಡು ಬ್ಯಾಂಕಿಗೆ ಹೋಗುತ್ತಿದ್ದು, ಒಳಗೆ ಪ್ರವೇಶಿಸಲು ಬಿಡುತ್ತಿಲ್ಲ. ಅವರು ಬೆಳಗ್ಗೆಯಿಂದ ಸಂಜೆವರೆಗೆ ಬ್ಯಾಂಕ್‌ ಮೂಲೆಯಲ್ಲಿಯೇ ಕುಳಿತು ಎದ್ದು ಬರುತ್ತಿದ್ದಾರೆ. ಈಗ ಅವರಿಗೆ ಬ್ಯಾಂಕಿನ ಅಧಿಕಾರಿಗಳೂ ಸಹ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕರಿಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಲಾಗಿದೆ.

ಶಾಸಕ ದಿನಕರ ಶೆಟ್ಟಿ ಪ್ರತಿಕ್ರಿಯೆ ನೀಡಿ, ಸಹಕಾರಿ ಕ್ಷೇತ್ರದಲ್ಲಿ ನಾನು ಹಸ್ತಕ್ಷೇಪ ಮಾಡುವವನಲ್ಲ. ಆದರೆ ಗೋಕರ್ಣ ಅರ್ಬನ್‌ ಬ್ಯಾಂಕ್‌ನಿಂದ ಓರ್ವ ಬಡ ನೌಕರನಿಗೆ ಅನ್ಯಾಯವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಬ್ಯಾಂಕ್‌ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ, ಅನ್ಯಾಯ ಸರಿಪಡಿಸುತ್ತೇನೆ ಎಂದರು. ಪುರಸಭೆ ಅಧ್ಯಕ್ಷೆ ಮೋಹಿನಿ ಗೌಡ, ತಾಪಂ ಸದಸ್ಯ ಮಹೇಶ ಶೆಟ್ಟಿ, ಪುರಸಭೆ ಸದಸ್ಯ ಶೈಲಾ ಗೌಡ, ಸೂರ್ಯಕಾಂತ ಗೌಡ, ತುಳಸು ಗೌಡ, ಗೋಕರ್ಣ ಗ್ರಾಪಂ ಸದಸ್ಯ ಸತೀಶ ಭಂಡಾರಿ, ಮೋಹನದಾಸ, ಕುಮಾರ ಕವರಿ, ಹಾಲಕ್ಕಿ ಸಮಾಜದ ಪ್ರಮುಖರಾದ ಸುಬ್ರಾಯ ಗೌಡ ಹೊನ್ನಾವರ, ಗಣಪತಿ ಗೌಡ, ಮಾಣೇಶ್ವರ ಗೌಡ, ಅರುಣ ಗೌಡ, ನಾಗೇಶ ಗೌಡ, ಮಹಾಬಲೇಶ್ವರ ಗೌಡ, ಹೊನಪ್ಪ ಗೌಡ, ರಾಮಚಂದ್ರ ಗೌಡ, ದೇವಕಿ ಗೌಡ, ನಾಗರಾಜ ಗೌಡ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.