ಆಯುಷ್ಮಾನ್‌ ಭಾರತಕ್ಕೆ ಆರೋಗ್ಯ ಕರ್ನಾಟಕ ಅಡ್ಡಗಾಲು


Team Udayavani, Aug 28, 2019, 11:57 AM IST

uk-tdy-2

ಹೊನ್ನಾವರ: ಕೇಂದ್ರ ಸರ್ಕಾರದ ಆಯುಷ್ಮಾನ್‌ ಭಾರತ ಯೋಜನೆಯ ಲಾಭ ಪಡೆಯಲು ಉತ್ತರ ಕನ್ನಡ ಜನರಿಗೆ ಮತ್ತು ಬಹುಪಾಲು ಮಲೆನಾಡು ಜಿಲ್ಲೆಯವರಿಗೆ ರಾಜ್ಯ ಸರ್ಕಾರದ ಕಾನೂನು ಅಡ್ಡಗಾಲಾಗಿದೆ. ಇದರಿಂದ ತೊಂದರೆಗೊಳಗಾದ ಹಲವರು ಅಸಹಾಯಕರಾಗಿ ಮಾಧ್ಯಮಗಳ ಎದುರು ದೂರುತ್ತಿದ್ದಾರೆ.

ಕೇಂದ್ರದ ಕಾನೂನಿಗೆ ರಾಜ್ಯದ ಕಾನೂನು ಪೂರಕವಾಗಿರಬೇಕಿತ್ತು. ಬಿಜೆಪಿ ಸರ್ಕಾರ ಇದ್ದ ರಾಜ್ಯಗಳು ಕೇಂದ್ರದ ಆಯುಷ್ಮಾನ್‌ ಭಾರತದ ಕಾನೂನನ್ನು ಇದ್ದಕ್ಕಿದ್ದಂತೆ ಜಾರಿಗೆ ತಂದಿದೆ. ಕಾರ್ಡು ಕಿಸೆಯಲ್ಲಿಟ್ಟುಕೊಂಡವರು ಎಲ್ಲಿ ಬೇಕಾದರೂ ಚಿಕಿತ್ಸೆ ಪಡೆಯಬಹುದು. ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪ್ರಜೆಗಳು ತಮಗೆ ಇಷ್ಟವಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದ ಕಾಲದಲ್ಲಿ ಉದ್ದೇಶ ಪೂರ್ವಕವಾಗಿ ಆರೋಗ್ಯ ಕರ್ನಾಟಕ ಎಂಬ ಕಾನೂನನ್ನು ಅನಗತ್ಯವಾಗಿ ಜಾರಿಗೆ ತಂದು ಆಯುಷ್ಮಾನ್‌ ಪ್ರಯೋಜನ ಪಡೆಯಲು ಆರೋಗ್ಯ ಕರ್ನಾಟಕದ ಯೋಜನೆಯ ತಾಲೂಕಾಸ್ಪತ್ರೆ, ಜಿಲ್ಲಾಸ್ಪತ್ರೆ, ಅಲ್ಲಿ ಆಗದಿದ್ದರೆ ನೆರೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು, ಅಲ್ಲಿ ಸಾಧ್ಯವಾಗದಿದ್ದರೆ ಅಲ್ಲಿಂದ ಪತ್ರ ಪಡೆದು ಖಾಸಗಿ ದೊಡ್ಡ ಆಸ್ಪತ್ರೆಗೆ ಹೋಗಬಹುದು ಎನ್ನುತ್ತದೆ ಕಾನೂನು. ಬಹುಶಃ ಆಯುಷ್ಮಾನ್‌ ಭಾರತ ಯೋಜನೆಯ ಜನಪ್ರೀಯತೆ ತಗ್ಗಿಸಲು ಅಥವಾ ಕರ್ನಾಟಕದ ಜನತೆಗೆ ಅದನ್ನು ಮರೆಮಾಚಿ ತನ್ನ ಯೋಜನೆ ಹೇಳಲೋ ಅಮಾನವೀಯ ಕಾನೂನನ್ನು ಹೇರಿದೆ.

ಉತ್ತರ ಕನ್ನಡದಲ್ಲಿ ಜಟಿಲವಾದ ಹೆರಿಗೆ ಮಾಡಿಸಲು ಸಾಧ್ಯವಿಲ್ಲವಾದರೆ, ಸಿಜೇರಿಯನ್‌ ಮಾಡಿದರೂ ರಕ್ತಸ್ರಾವ, ರಕ್ತದೊತ್ತಡ ನಿಯಂತ್ರಿಸಲು ಸಾಧ್ಯವಿಲ್ಲವಾದರೆ ಅವರನ್ನು ನೆರೆ ಜಿಲ್ಲೆಯ ಆಸ್ಪತ್ರೆಗೆ ಕಳಿಸುತ್ತಾರೆ. ಅಲ್ಲಿ ತಕ್ಷಣ ಚಿಕಿತ್ಸೆ ದೊರೆತರೂ ಹಣ ಕಟ್ಟಬೇಕು. ಮಾಗೋಡ ಗ್ರಾಮದ ರೋಹಿಣಿ ಎಂಬ ಗೃಹಿಣಿಯ ಹೆರಿಗೆಯಲ್ಲಿ ಸಮಸ್ಯೆ ಉಂಟಾದಾಗ ಅವಳನ್ನು ನೆರೆ ಜಿಲ್ಲೆ ಆಸ್ಪತ್ರೆಗೆ ಕಳಿಸಲಾಯಿತು. ಕೂಡಲೇ ಚಿಕಿತ್ಸೆ ನೀಡುವುದರ ಜೊತೆ ತಾಲೂಕು ಮತ್ತು ಜಿಲ್ಲಾಸ್ಪತ್ರೆಯ ಪತ್ರ ತರಲು ಹೇಳಲಾಯಿತು. ತಾಲೂಕಾಸ್ಪತ್ರೆ ಪತ್ರ ಪಡೆದು ಜಿಲ್ಲಾಸ್ಪತ್ರೆಗೆ ಹೋಗುವಷ್ಟರಲ್ಲಿ ಅಲ್ಲಿ ವೈದ್ಯರಿರಲಿಲ್ಲ. ಮರುದಿನ ರವಿವಾರ ರಜೆ. ಸೋಮವಾರ ಪತ್ರಪಡೆದು ಒಯ್ದರೆ 24ತಾಸು ಮೀರಿದ ಕಾರಣ ಅರ್ಜಿಯನ್ನು ಆರೋಗ್ಯ ಕರ್ನಾಟಕ ಕಂಪ್ಯೂಟರ್‌ ತಿರಸ್ಕರಿಸಿತು. 2.60ಲಕ್ಷ ರೂ. ಕಟ್ಟುವ ಪರಿಸ್ಥಿತಿ ಬಂತು.

ನಗರದ ಗಣಪತಿ ಎಂಬವರು ಗಂಭೀರ ಸಮಸ್ಯೆಯಿಂದ ನೆರೆ ಜಿಲ್ಲೆ ಆಸ್ಪತ್ರೆಗೆ ದಾಖಲಾದರು. ತುರ್ತು ಚಿಕಿತ್ಸೆ ನೀಡಲಾಯಿತು. ಆಸ್ಪತ್ರೆಗೆ ಬರುವಾಗಲೇ ಆರೋಗ್ಯ ಕರ್ನಾಟಕದ ಪತ್ರ ತರದ ಕಾರಣ ಇವರ ಮನವಿಯನ್ನು ಆರೋಗ್ಯ ಕರ್ನಾಟಕದ ಕಂಪ್ಯೂಟರ್‌ ತಿರಸ್ಕರಿಸಿತು. 60ಸಾವಿರ ರೂ. ಹಣ ತೆರಬೇಕಾಗಿ ಬಂತು. 2ತಿಂಗಳ ಹಿಂದೆ ಸಿಜೇರಿಯನ್‌ ಮಾಡಿಸಿಕೊಂಡ ಮಹಿಳೆಯನ್ನು ಮಗುವಿನ ರಕ್ತದೊತ್ತಡ ಕಡಿಮೆಯಾದ ಕಾರಣ ತಕ್ಷಣ ನೆರೆ ಜಿಲ್ಲೆಗೆ ಕಳುಹಿಸಲಾಯಿತು. ಯಥಾ ಪ್ರಕಾರ ತಾಲೂಕು ಮತ್ತು ಜಿಲ್ಲಾ ಕೇಂದ್ರದ ಸರ್ಕಾರಿ ಆಸ್ಪತ್ರೆಯ ಪತ್ರ ತರಲು ಹೇಳಿದರು. ಶನಿವಾರ, ರವಿವಾರ ರಜೆ. ಪತ್ರ ಸಿಗಲಿಲ್ಲ. ನಿತ್ಯ ಎಂಬಂತೆ ಇಂತಹ ಸುದ್ದಿಗಳು ಬರುತ್ತಿವೆ. ಬಡವರಿಗೆ ಆಯುಷ್ಮಾನ್‌ ಭಾರತ ವರವಾಗಿತ್ತು. ಪಕ್ಷ ರಾಜಕಾರಣದಿಂದಾಗಿ ಹುಟ್ಟಿಕೊಂಡ ಆರೋಗ್ಯ ಕರ್ನಾಟಕ ಶಾಪವಾಗಿದೆ.

ದೇಶಕ್ಕೆ ಆಯುಷ್ಮಾನ್‌ ಭಾರತ ಒಂದೇ ಕಾನೂನು ಸಾಕು. ರಾಜ್ಯದ ಕಾನೂನು ರದ್ದಾಗಬೇಕು ಎಂದು ಈಗ ಸಭಾಪತಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ, ಕುಮಟಾ ಶಾಸಕ ದಿನಕರ ಶೆಟ್ಟಿ, ಭಟ್ಕಳ ಶಾಸಕ ಸುನೀಲ್ ನಾಯ್ಕ, ಸಹಿತ ಎಲ್ಲ ಶಾಸಕರು ಅಭಿಪ್ರಾಯಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಇದನ್ನು ಪ್ರಶ್ನಿಸಿ, ರದ್ದುಪಡಿಸಲು ಆಗ್ರಹಿಸುವುದಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಆಗ ಸಚಿವರಾಗಿದ್ದ ಆರ್‌.ವಿ. ದೇಶಪಾಂಡೆಯವರು ಸೂಕ್ತ ಕ್ರಮಕ್ಕಾಗಿ ಅಂದಿನ ಆರೋಗ್ಯ ಮಂತ್ರಿಗಳಿಗೆ ಬರೆದಿದ್ದರು. ಈಗ ಬಿಜೆಪಿ ಸರ್ಕಾರ ಬಂದಿದೆ. ಎಲ್ಲರೂ ನೆರೆ ಗೊಂದಲದಲ್ಲಿ ಮುಳುಗಿದ್ದಾರೆ. ಮುಖ್ಯಮಂತ್ರಿಗಳನ್ನು ಕಂಡು ಏಕ ಕಾನೂನು ಆಯುಷ್ಮಾನ್‌ ಭಾರತ ಬರುವಂತೆ ಆದೇಶ ಮಾಡಿಸಲಿ ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.

 

•ಜೀಯು, ಹೊನ್ನಾವರ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.