ಮಳೆ ಆರ್ಭಟ: ಮನೆಗಳಿಗೆ ನುಗ್ಗಿದ ನೀರು

•ಮುಂದಿನ 24 ಗಂಟೆ ಎಚ್ಚರಿಕೆಯಿಂದಿರಲು ಸೂಚನೆ•ವಾಸರೆ ಕೊಡ್ಸಣಿ- ಕುರ್ವೆ ದ್ವೀಪಗಳಲ್ಲಿ ನೆರೆ ಭೀತಿ•50ಕ್ಕೂ ಹೆಚ್ಚು ಮನೆಗಳು ಜಲಾವೃತ

Team Udayavani, Jun 23, 2019, 12:29 PM IST

uk-tdy-1..

ಅಂಕೋಲಾ: ಮನೆಯಿಂದ ಮುಖ್ಯ ರಸ್ತೆಗೆ ಸೈಕಲ್ ಹೊತ್ತಿಕೊಂಡು ಬಂದ ವ್ಯಕ್ತಿ.

ಅಂಕೋಲಾ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನಲ್ಲಿ ನದಿ, ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳು ಜಲಾವೃತಗೊಂಡು ಇಲ್ಲಿನ ನಿವಾಸಿಗಳಿಗೆ ಆತಂಕ ಸೃಷ್ಠಿಸಿದೆ.

ಕಳೆದ ಗುರುವಾರದಿಂದ ಈ ವರೆಗೆ 205 ಮಿ.ಮೀ. ಮಳೆ ಸುರಿದಿದ್ದು, ಮುಂದಿನ 24 ಗಂಟೆ ತಾಲೂಕಿನಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ತಾಲೂಕಾಡಳಿತ ತಿಳಿಸಿದೆ. ಗಂಗಾವಳಿ ನದಿ ಪಾತ್ರದ ವಾಸರೆ ಕೊಡ್ಸಣಿ ಮತ್ತು ಕುರ್ವೆ ದ್ವಿಪಗಳಲ್ಲಿ ನೆರೆ ಭೀತಿ ಎದುರಾಗಿದೆ. ಪೂಜಗೇರಿ ಹಳ್ಳ ಉಕ್ಕಿ ಹರಿದ ಪರಿಣಾಮ ಪೂಜಗೇರಿ ಮತ್ತು ನದಿಬಾಗ ಗ್ರಾಮದಲ್ಲಿ ಹಳ್ಳದ ನೀರು ಸಮುದ್ರ ಸೇರುವ ಕೊಂಡಿಯು, ಬೇಸಿಗೆಯಲ್ಲಿ ಸಮುದ್ರದ ಅಲೆಯ ರಭಸಕ್ಕೆ ಮರಳಿನಿಂದ ಮುಚ್ಚಿರುವುದರಿಂದ ಹಳ್ಳದ ಹಿನ್ನೀರು ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗಿ ಅವಘಡಗಳನ್ನು ಸೃಷ್ಠಿಸುತ್ತಿದೆ. ಇದರಿಂದಾಗಿ ಈ ಭಾಗದಲ್ಲಿರುವ ಸುಮಾರು 50ಕ್ಕೂ ಹೆಚ್ಚಾ ಮನೆಗಳು ಜಲಾವೃತಗೊಂಡಿದೆ.

ವಂದಿಗೆ, ಹೊಸಗದ್ದೆ ಬೆಟ್ಟದ ಮೇಲಿನಿಂದ ಮಳೆಗಾಲದಲ್ಲಿ ಹರಿದು ಬರುವ ನೀರು ಇದೇ ಹಳ್ಳದಿಂದ ಸಮುದ್ರ ಸೇರುತ್ತದೆ. ಮಳೆಗಾಲದ ಆರಂಭದಲ್ಲಿ ಮಳೆಯ ರಭಸಕ್ಕೆ ಹಳ್ಳ ತುಂಬಿ ಹರಿಯುವುದರಿಂದ ಸಮುದ್ರ ಸೇರದೆ ಇಲ್ಲಿಯ ಅವಾಂತರಕ್ಕೆ ಕಾರಣವಾಗುತ್ತಿದೆ.

ತಡೆಗೋಡೆ ಇಲ್ಲ: ಸಮುದ್ರದ ಅಲೆಗಳು ಅಪ್ಪಳಿಸುವ ಭಾಗದಲ್ಲಿ ಈ ಹಿಂದೆ ಹಾಕಿರುವ ತಡೆಗೋಡೆ ಅಲೆಗಳ ರಭಸಕ್ಕೆ ಕೊಚ್ಚಿ ಹೊಗಿದ್ದು ನದಿಬಾಗ ತೀರದ ಕೆಲವು ಮನೆಗಳಿಗೆ ನೀರು ಒಳ ನುಗ್ಗುತ್ತಿದೆ. ಸಮುದ್ರದ ಅಲೆಗಳ ರಭಸ ಹೆಚ್ಚಾದರೆ ನೇರವಾಗಿ ಇಲ್ಲಿನ ಮನೆಗಳಿಗೆ ನುಗ್ಗುವುದಲ್ಲದೆ. ಈ ಪುಟ್ಟ ಗ್ರಾಮ ದ್ವೀಪವಾಗುತ್ತದೆ. ಇಲ್ಲಿಯ ಜನರಿಗೆ ಒಡಾಡಲು ದಾರಿ ಇಲ್ಲದೆ ಮನೆಯಲ್ಲಿಯೆ ಇರುವ ಸಂಕಷ್ಟ ಎದುರಾಗಿದೆ. ಯುವಕರು ಮಾತ್ರ ಮನೆಗೆ ಬೇಕಾಗುವ ಸಾಮಗ್ರಿಗಳನ್ನು ತರಲು ಗ್ರಾಮದಿಂದ ಪಟ್ಟಣಕ್ಕೆ ಬರಲು ತಮ್ಮ ಜೀವ ಕೈಯಲ್ಲಿಟ್ಟುಕೊಂಡು ಎದೆ ಮಟ್ಟದವರೆಗೆ ತುಂಬಿದ ನೀರಿನಲ್ಲಿ ಸಾಗಿ ಬರುತ್ತಾರೆ. ಈ ಭಾಗಕ್ಕೆ ಶಾಶ್ವತ ಪರಿಹಾರ ಸಿಗಬಹುದೆ ಎಂದು ಜನ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ನೆರೆ ಭೀತಿ: ಗುರುವಾರದಿಂದ ತಾಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗಂಗಾವಳಿ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದ್ದು ವಾಸರೆ ಕೊಡ್ಸಣಿ ಮತ್ತು ಕುರ್ವೆ ದ್ವಿಪಗಳಲ್ಲಿ ಭಾಗದಲ್ಲಿ ಮುಳುಗಡೆ ಆಗುವ ಸಂಭವವು ಇದೆ. ಹೀಗೆ ಮಳೆ ಮುಂದುವರೆದರೆ ಈ ಪ್ರದೇಶದಲ್ಲಿನ ಜನರಿಗೆ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗುವುದು ಎಂದು ತಾಲೂಕಾಡಳಿತ ತಿಳಿಸಿದೆ. ತಾಲೂಕಾಡಳಿತ ಎಲ್ಲಡೆ ತನ್ನ ಅಧಿಕಾರಿ ವರ್ಗದವರನ್ನು ನೇಮಿಸಿದ್ದು, ಮಳೆಗೆ ಯಾವುದೆ ಅನಾಹುತ ಸಂಭವಿಸಿದರೆ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳುವ ಭರವಸೆ ನೀಡಿದೆ.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.