ಉತ್ತರ ಕನ್ನಡದಲ್ಲಿ ಭಾರೀ ಮಳೆ: ಗುರುವಾರವೂ ಶಾಲಾ ಕಾಲೇಜಿಗೆ ರಜೆ ಘೋಷಣೆ
Team Udayavani, Jul 6, 2022, 5:47 PM IST
ಕಾರವಾರ : ಉತ್ತರ ಕನ್ನಡದ ಕರಾವಳಿಯಲ್ಲಿ ಬುಧುವಾರ ಅಪರಾಹ್ನದ ನಂತರ ಭಾರೀ ಮಳೆ ಸುರಿಯುತ್ತಿದೆ. ಗುರುವಾರ ಮಳೆ ಹೆಚ್ಚಾಗುವ ಸುಳಿವು ಹವಾಮಾನ ಇಲಾಖೆಯಿಂದ ದೊರೆಯುತ್ತಿದ್ದಂತೆ ಜಿಲ್ಲಾಧಿಕಾರಿ ಮುಗಿಲನ್ ಶಾಲಾ ಕಾಲೇಜುಗಳಿಗೆ , ಅಂಗನವಾಡಿ ,ತಾಂತ್ರಿಕ ಶಿಕ್ಷಣ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ನೀಡಿದ್ದಾರೆ.
ಗುರುವಾರದ ರಜೆ ಸಂಗತಿಯನ್ನು ಬುಧುವಾರ ಸಂಜೆ ಘೋಷಿಸಿದರು ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ತಿಳಿಸಿದರು. ವಿಪತ್ತು ನಿರ್ವಹಣಾ ಸಮಿತಿ ಸೆಕ್ಷನ್ 34 ರ ಅಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಉದಯವಾಣಿಗೆ ತಿಳಿಸಿದರು .
ಕರಾವಳಿ, ಘಟ್ಟ, ಮಲೆನಾಡಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ಕಾಳಿ, ಗಂಗಾವಳಿ, ಅಘನಾಶಿನಿ,ಶರಾವತಿ ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ ನದಿ ದಂಡೆಯ ಗ್ರಾಮದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ