ಮನೆಗೆ ನೆರವೂ ಇಲ್ಲ-ಬೆಳೆಹಾನಿಗೆ ಪರಿಹಾರವೂ ಇಲ್ಲ!


Team Udayavani, Jul 2, 2020, 2:49 PM IST

ಮನೆಗೆ ನೆರವೂ ಇಲ್ಲ-ಬೆಳೆಹಾನಿಗೆ ಪರಿಹಾರವೂ ಇಲ್ಲ!

ಶಿರಸಿ: ಅತಂತ್ರಗೊಂಡ ಕುಟುಂಬದ ಜೊತೆ ಸಮಾಲೋಚನೆ ನಡೆಸುತ್ತಿರುವ ಎ.ರವೀಂದ್ರ ನಾಯ್ಕ ಹಾಗೂ ಪ್ರಮುಖರು.

ಶಿರಸಿ: ಕಳೆದ ವರ್ಷದ ಮುಂಗಾರಿನಲ್ಲಿ ಅತಿ ವೃಷ್ಟಿಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಪುನರ್‌ ಮನೆ ನಿರ್ಮಾಣಕ್ಕೆ ನೆರವಿಲ್ಲ, ಬೆಳೆ ಹಾನಿಯಾದರೂ ಪರಿಹಾರ ಸಿಕ್ಕಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಹಿಂದುಳಿದ ವರ್ಗಗಳ ಸಮಿತಿ ಪ್ರಮುಖ ಎ. ರವೀಂದ್ರ ನಾಯ್ಕ ಶೀಘ್ರ ನೆರವು ಒದಗಿಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಅವರು ತಾಲೂಕಿನಲ್ಲಿ ಕಳೆದ ವರ್ಷದ ಮುಂಗಾರು ಮಳೆಯಲ್ಲಿ ಮನೆ ಬಿದ್ದುಹೋದ ನಿರಾಶ್ರಿತರ ಕುಟುಂಬಗಳ ಜೊತೆ ಸಮಾಲೋಚಿಸಿ ಸರಕಾರವನ್ನು ಒತ್ತಾಯಿಸಿ, ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಉಳಿದ ಪರಿಹಾರ ನೆರವು ಹಣ ಬಿಡುಗಡೆ ಮಾಡದೇ, ವರ್ಷವಾದರೂ ಸರಕಾರ ನಿರ್ಲಕ್ಷ್ಯ ತೋರಿದೆ. ಉಳಿಯಲು ಮನೆ ಇಲ್ಲದ ಸಂತ್ರಸ್ತರು ಅತಂತ್ರ ಸ್ಥಿತಿಯಲ್ಲಿರುವ ನಿರಾಶ್ರಿತರಿಗೆ ಅತೀ ಶೀಘ್ರದಲ್ಲಿ ಬಾಕಿ ಉಳಿದಿರುವ ಮನೆ ನಿರ್ಮಾಣದ ಅನುದಾನ ಬಿಡುಗಡೆ ಮಾಡಬೇಕು ಎಂದಿದ್ದಾರೆ.

ಸಂತ್ರಸ್ತರಿಗೆ ರಾಜ್ಯ ಸರಕಾರವು ಪ್ರವಾಹದಿಂದ ಹಾನಿಗೀಡಾದ ಎ ಮತ್ತು ಬಿ ವರ್ಗದ ಮನೆಗಳ ಪುನರ್‌ ನಿರ್ಮಾಣಕ್ಕೆ ಐದು ಲಕ್ಷ ರೂ. ನೆರವು ಘೋಷಿಸಿ, ಅದರಲ್ಲಿ ತಕ್ಷಣ ಒಂದು ಲಕ್ಷ ರೂ. ಸಂತ್ರಸ್ತರ ಖಾತೆಗಳಿಗೆ ನೇರವಾಗಿ ಪಾವತಿಸಿದ್ದಿರುತ್ತದೆ. ಉಳಿದ ನಾಲ್ಕು ಲಕ್ಷ ರೂ. ಅನುದಾನ ನಿರ್ಮಾಣವಾಗುತ್ತಿರುವ ಮನೆಯ ಹಂತವಾರು ಜಿಪಿಎಸ್‌ ಆಧಾರದ ಮೇಲೆ ಬಿಡುಗಡೆ
ಮಾಡಲಾಗುವುದು. ಆದ್ದರಿಂದ ಕೂಡಲೇ ಮನೆ ನಿರ್ಮಾಣ ಪ್ರಾರಂಭಿಸಿ ಬೇಗನೆ ಪೂರ್ಣಗೋಳಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಸಹಿಯುಳ್ಳ ಪತ್ರದಲ್ಲಿ ಸಂತ್ರಸ್ತರಿಗೆ 13 ಡಿಸೆಂಬರ್‌ 2019 ರಂದು ನೀಡಲಾಗಿತ್ತು. ಆದರೆ ಸಂತ್ರಸ್ತರು ಒಂದು ಲಕ್ಷ ರೂ. ಪ್ರಥಮ ಹಂತದ ಮನೆ ಕಾಮಗಾರಿ ಮುಗಿಸಿದರೂ ಉಳಿದ ಹಣ ಸರಕಾರದಿಂದ ಪಾವತಿ ಆಗದೇ ಜಿಲ್ಲಾದ್ಯಂತ ನಿರಾಶ್ರಿತರ ಕುಟುಂಬಗಳು ಪ್ರಸಕ್ತ ಮಳೆಗಾಲದಲ್ಲಿ ಜೋಪಡಿ ಮನೆಯಲ್ಲಿ ಉಳಿದುಕೊಳ್ಳುವ ಪ್ರಸಂಗ ಬಂದಿರುವುದು ವಿಷಾದಕರ ಎಂದಿದ್ದಾರೆ.

ಕಳೆದ ವರ್ಷದ ಅತೀವೃಷ್ಟಿಯಿಂದ ಒಟ್ಟು ಅಡಕೆ ಕ್ಷೇತ್ರ ಜಿಲ್ಲೆಯಲ್ಲಿ 31,124 ಹೇಕ್ಟರ್‌ ತೋಟದಲ್ಲಿ 18,946 ಹೇಕ್ಟರ್‌ ತೋಟ ಕೊಳೆರೋಗ ಬಂದು ಅಡಕೆ ಬೆಳೆಯಲ್ಲಿ ರೈತರಿಗೆ 313.29 ಕೋಟಿ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆಯಿಂದ ಸರಕಾರಕ್ಕೆ ವರದಿ ಸಲ್ಲಿಸಿದ್ದರೂ, ಈವರೆಗೂ ಪರಿಹಾರ ಸಿಕ್ಕಿಲ್ಲ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೊಡ್ನಳ್ಳಿ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಇಬ್ರಾಹಿಂ ನಬಿಸಾಬ ಸೈಯದ್‌ ಮತ್ತು ಅತಿಕ್ರಮಣ ಹೋರಾಟ ಸಮಿತಿ ಸಂಚಾಲಕ ತಿಮ್ಮ ಮರಾಠಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.