Railway Project; ಅಂಕೋಲಾ – ಹುಬ್ಬಳ್ಳಿ ರೈಲ್ವೆ ಯೋಜನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್


Team Udayavani, Sep 2, 2023, 5:56 PM IST

ಅಂಕೋಲಾ – ಹುಬ್ಬಳ್ಳಿ ರೈಲ್ವೆ ಯೋಜನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಕಾರವಾರ: ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಯೋಜನೆಯ ವಿರುದ್ಧ ಸಲ್ಲಿಕೆಯಾಗಿದ್ದ ವೃಕ್ಷ ಫೌಂಡೇಶನ್‌ನ ಪಿಐಎಲ್ ಅನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ ಎಂದು ರೈಲ್ವೆ ಸೇವಾ ಸಮಿತಿಯ ಕಾರ್ಯಾಧ್ಯಕ್ಷ ರಾಜೀವ್ ಗಾಂವ್ಕರ್ ಹಾಗೂ ಅಧ್ಯಕ್ಷ ಜಾರ್ಜ್ ಫರ್ನಾಂಡೀಸ್ ಹೇಳಿದರು.

ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಶಂಕುಸ್ಥಾಪನೆ ಮಾಡಲಾದ 164.44 ಕಿ.ಮೀ. ಉದ್ದದ ಅಂಕೋಲಾ- ಹುಬ್ಬಳ್ಳಿ ರೈಲ್ವೆ ಮಾರ್ಗಕ್ಕೆ ಈಗ ಹಸಿರು ನಿಶಾನೆ ಸಿಕ್ಕಿದೆ ಎಂದರು.

ಹುಬ್ಬಳ್ಳಿಯಿಂದ ಕಲಘಟಕಿಯವರೆಗೆ 34 ಕಿ.ಮೀ‌ ರೈಲ್ವೆ ಮಾರ್ಗ ಈಗಾಗಲೇ ನಿರ್ಮಿಸಲಾಗಿದೆ. ತದನಂತರ ಪರಿಸರವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಯೋಜನೆಗೆ ಅಡ್ಡಗಾಲು ಹಾಕುತ್ತಿದ್ದರು. ಮೊದಲಿಗೆ ನಮ್ಮ ಜಿಲ್ಲೆಯ ಪಾಂಡುರಂಗ ಹೆಗಡೆ ಈ ಯೋಜನೆ ವಿರುದ್ಧ ಪರಿಸರ ಕಾರಣವೊಡ್ಡಿ 2001ರಲ್ಲಿ ಪಿಐಎಲ್ ಸಲ್ಲಿಸಿದ್ದರು. ಇದರಿಂದಾಗಿ 19 ವರ್ಷಗಳ ಕಾಲ ಯೋಜನೆ ನೆನೆಗುದಿಗೆ ಬಿದ್ದಿತ್ತು ಎಂದರು.

ತದನಂತರ 2020 ರಲ್ಲಿ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭ ರಾಜ್ಯ ವನ್ಯಜೀವಿ ಮಂಡಳಿಯಿಂದ ಯೋಜನೆಗೆ ಕ್ಲಿಯರೆನ್ಸ್ ಸಿಗುತ್ತಿದ್ದಂತೆ, ಬೆಂಗಳೂರಿನ ವೃಕ್ಷಫೌಂಡೇಶನ್ ಸರ್ಕಾರದ  ಆದೇಶದ ವಿರುದ್ಧ ಕೋರ್ಟಗೆ ಹೋಗಿ, ಕುಂಟು ನೆಪಗಳನ್ನು ಒಡ್ಡಿ ತಡೆಯಾಜ್ಞೆ ತಂದಿದ್ದರಿಂದ ಯೋಜನೆ ಮತ್ತಷ್ಟು ವಿಳಂಬವಾಗುವಂತಾಯಿತು ಎಂದು ಆರೋಪಿಸಿದರು.

2021ರಲ್ಲಿ ಉತ್ತರ ಕನ್ನಡ ರೈಲ್ವೆ ಸೇವಾ ಸಮಿತಿಯ ಮೂಲಕ ತಡೆಯಾಜ್ಞೆ ತೆರವುಗೊಳಿಸಲು ವಕೀಲರಾದ ಆರ್.ಜಿ.ಕೊಲ್ಲೆ, ಅಕ್ಷಯ್ ಕೊಲ್ಲೆಯವರು ವಾದ ಮಂಡಿಸಿದಾಗ ಹೈಕೋರ್ಟ್ ವನ್ಯಜೀವಿ ಮಂಡಳಿಯಿಂದ ವರದಿ ನೀಡಲು ಸೂಚಿಸಿತ್ತು. ಅದರಂತೆ ವನ್ಯಜೀವಿ ಮಂಡಳಿ ಅಧ್ಯಯನ ನಡೆಸಿ, ರೈಲ್ವೆ ಯೋಜನೆಯ ಪರವಾಗಿ ವರದಿ ನೀಡಿದ್ದು, ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಉತ್ತಮ ಆದೇಶ ನೀಡುವ ಮೂಲಕ ಇಷ್ಟು ವರ್ಷಗಳ ಕಾನೂನು ಪ್ರಕ್ರಿಯೆಗೆ ಇತಿಶ್ರೀ ಹಾಡಿದ್ದಾರೆ. ಅಲ್ಲದೇ ರೈಲ್ವೆ ಮಂಡಳಿ ಕೂಡ ವನ್ಯಜೀವಿ ಮಂಡಳಿಯ ನಿರ್ದೇಶನದಂತೆ ಯೋಜನೆ ಮಾರ್ಪಡಿಸಿ ನೂತನ ಮಾರ್ಗ ನಿರ್ಮಿಸುವುದಾಗಿ ಅಫಿಡವಿಟ್ ನೀಡಿರುವುದರಿಂದ ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ ಇದ್ದ ಎಲ್ಲಾ ತೊಡಕು ನಿವಾರಣೆಯಾದಂತಾಗಿದೆ ಎಂದು ಖುಷಿ ವ್ಯಕ್ತಪಡಿಸಿದರು.

ರೈಲ್ವೆ ಸೇವಾ ಸಮಿತಿಯ ಅಧ್ಯಕ್ಷ ಜಾರ್ಜ್ ಫರ್ನಾಂಡೀಸ್ ಮಾತನಾಡಿ, ಎಲ್ಲವೂ ಅಂದು ಕೊಂಡಂತಾದರೆ ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯ ಕೃಷಿ, ಕೈಗಾರಿಕೆ, ವ್ಯಾಪಾರ, ಪ್ರವಾಸೋದ್ಯಮ, ಶಿಕ್ಷಣ ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿಯಾಗಲಿದೆ ಎಂದರು. ಅಲ್ಲದೇ ಪ್ರವಾಸೋದ್ಯಮ ಬೆಳವಣಿಗೆ ಕಾಣಲಿದೆ. ಅಲಗೇರಿ ವಿಮಾನ ನಿಲ್ದಾಣ ಆಗುತ್ತಿದ್ದಂತೆ ಹುಬ್ಬಳ್ಳಿ ಅಂಕೋಲಾ ರೈಲ್ವೆ ಮಾರ್ಗದ ಮಹತ್ವ ಹೆಚ್ಚಲಿದೆ. ಉತ್ತರ ಕರ್ನಾಟಕದ ಸಂಪರ್ಕ ಹೆಚ್ಚಿ ರಪ್ತು ಹೆಚ್ಚಾಗಲಿದೆ. ಬಂದರುಗಳ ಚಟುವಟಿಕೆ ವಿಸ್ತಾರವಾಗಲಿದೆ ಎಂದರು. ರೈಲ್ವೆ ಸೇವಾ ಸಮಿತಿ ಜಿಲ್ಲೆಯ ಎಲ್ಲಾ ರೈಲು ಎಲ್ಲಾ ಸ್ಟೇಶನ್ ಗಳಲ್ಲಿ ನಿಲ್ಲುವಂತೆ ಕ್ರಮಕ್ಕೆ ಕೊಂಕಣ ರೈಲ್ವೆ ವ್ಯವಸ್ಥಾಪಕರಿಗೆ ಮನವಿ ಮಾಡಲಾಗಿದೆ. ಪ್ರವಾಸಿಗರ ತಂಗುದಾಣ ಕೊಠಡಿ ನಿರ್ಮಿಸುವಂತೆ, ಪ್ರಯಾಣಿಕರಿಗೆ ಸ್ಟೇಶನ್ ಗಳಲ್ಲಿ ಸೌಕರ್ಯ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ ಎಂದರು.

ರೈಲ್ವೆ ಸೇವಾ ಸಮಿತಿಯ ಪ್ರಮುಖರಾದ ವೆಂಟು ಮಾಸ್ತರ ಶೀಳ್ಯ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.