ಭಟ್ಕಳದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಪೂರ್ಣ

|ಲೋಕಾರ್ಪಣೆಗೆ ಕಟ್ಟಡ ಸಜ್ಜು |ಉದ್ಘಾಟನೆಗೆ ನೀತಿ ಸಂಹಿತೆ ಅಡ್ಡಿ

Team Udayavani, Oct 16, 2020, 4:56 PM IST

ಭಟ್ಕಳದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಪೂರ್ಣ

ಭಟ್ಕಳ: ಪಟ್ಟಣದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಲೋಕಾರ್ಪಣೆಗೆ ಸಜ್ಜಾಗಿದೆ. ಚುನಾವಣಾ ನೀತಿ ಸಂಹಿತೆ ಇದಕ್ಕೆ ಅಡ್ಡಿಯಾಗಿದ್ದು, ಮುಂದಿನ ತಿಂಗಳು ಉದ್ಘಾಟನೆಯಾಗುವ ಸಾಧ್ಯತೆಯಿದೆ.

ಭಟ್ಕಳ ಪಟ್ಟಣದ ಬಸ್‌ ನಿಲ್ದಾಣಕ್ಕೆ 2017-18ನೇ ಸಾಲಿನಲ್ಲಿ ಐದು ಕೋಟಿರೂ. ಮಂಜೂರಿಯಾಗಿದ್ದು, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಶಂಕು ಸ್ಥಾಪನೆ ನೆರವೇರಿಸಿದ್ದರು. ಬೆಳಗಾವಿಯ ಪ್ರೌಡ್‌ ಇಂಡಿಯಾ ಪ್ರಮೋಟರ್ ಗುತ್ತಿಗೆದಾರ ಕಂಪೆನಿಗೆಕಾಮಗಾರಿ ಟೆಂಡರ್‌ ಆಗಿದ್ದು, ಕಾಮಗಾರಿಆರಂಭಿಸಿದ ನಂತರ ಒಂದೊಂದೇ ತೊಂದರೆಗಳು ಬಂದಿದ್ದರಿಂದ ಕಟ್ಟಡ ಕಾಮಗಾರಿ ಸ್ವಲ್ಪ ವಿಳಂಬವಾಗಿದೆ ಎನ್ನಲಾಗಿದೆ. ಮೊದಲು ಡೀಸೆಲ್‌ ಬಂಕ್‌ನ್ನು ಪೆಟ್ರೋಲಿಯಂ ಕಂಪೆನಿ ಸ್ಥಳಾಂತರಿಸಲು ತಡ ಮಾಡಿದ್ದರೆ, ನಂತರ ಕೋವಿಡ್ ಒಕ್ಕರಿಸಿದ್ದರಿಂದ ಕಾಮಗಾರಿಯೇ ನಿಂತು ಹೋಗಿ ವಿಳಂಬವಾಯಿತೆನ್ನಲಾಗಿದೆ.

ಈಗ ಸಂಪೂರ್ಣ ಪೂರ್ಣಗೊಂಡು ಉದ್ಘಾಟನೆಗೆ ಸಜ್ಜಾಗಿದ್ದರೂ ಚುನಾವಣಾ ನೀತಿ ಸಂಹಿತೆ ಅಡ್ಡ ಬಂದಿದೆ. ಈ ಹಿಂದೆ ಹಳೇ ಬಸ್‌ ನಿಲ್ದಾಣದಲ್ಲಿ ಜಾಗಾ ಇಕ್ಕಟ್ಟಾಗಿರುವುದರಿಂದ ಅಂದಿನ ಸಚಿವ ಎಸ್‌.ಎಂ. ಯಾಹ್ಯಾರವರು ಹೊಸಬಸ್‌ ನಿಲ್ದಾಣ ಮಂಜೂರಿ ಮಾಡಿಸಿದ್ದರು. ಹಲವಾರು ವರ್ಷಗಳ ಕಾಲ ಜನತೆಗೆ ಉತ್ತಮ ಸೇವೆ ನೀಡಿದ್ದ ಬಸ್‌ ನಿಲ್ದಾಣ ಕುಸಿದು ಬಿದ್ದ ಪರಿಣಾಮ ಜನತೆಗೆ ನಿಲ್ಲಲೂ ಸ್ಥಳವಿಲ್ಲವಾಗಿತ್ತು. ಅಂದಿನ ಶಾಸಕ ಮಂಕಾಳ ವೈದ್ಯ ಅವರು ಬಸ್‌ ನಿಲ್ದಾಣಕ್ಕೆ 5 ಕೋಟಿ ರೂಪಾಯಿ ಮಂಜೂರಿ ಮಾಡಿಸಿದ್ದರು. ಭಟ್ಕಳ ಬಸ್‌ ಡಿಪೋ ಸಾಗರ ರಸ್ತೆಗೆ ವರ್ಗಾವಣೆಗೊಂಡಿದ್ದರಿಂದ ಬಸ್‌ ಡಿಪೋ ಇರುವ ಸ್ಥಳದಲ್ಲಿಯ ಹೊಸ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಕೆಎಸ್‌ಆರ್‌ಟಿಸಿ ಮುಂದಾಗಿದ್ದು, ಇಂದು ಅತ್ಯಂತ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣಗೊಂಡಿದೆ.

ಬಸ್‌ ನಿಲ್ದಾಣದಲ್ಲಿ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗಿದ್ದು, ಒಂದೇ ಬಾರಿಗೆ 12 ಬಸ್‌ಗಳು ನಿಲ್ಲಲು ವ್ಯವಸ್ಥೆಯಿದೆ. ನೆಲ ಮಾಳಿಗೆಯಲ್ಲಿ ಪ್ರತ್ಯೇಕವಾಗಿ ಮಹಿಳೆಯರ ವಿಶ್ರಾಂತಿ ಕೊಠಡಿ, ಪುರುಷರ ವಿಶ್ರಾಂತಿ ಕೊಠಡಿಯೊಂದಿಗೆ ಚಿಕ್ಕ ಮಕ್ಕಳಿಗೆ ಹಾಲುಣಿಸಲು ಪ್ರತ್ಯೇಕ ಕೋಣೆಯೂ ಮಾಡಲಾಗಿದೆ. ಟಿಕೆಟ್‌ ಕಾಯ್ದಿರಿಸುವ ಕೊಠಡಿ, ನಿಯಂತ್ರಣ ಕೊಠಡಿಸೇರಿಂದಂತೆ ಒಟ್ಟೂ 12 ವಾಣಿಯ ಮಳಿಗೆಗಳಿವೆ. ಅಲ್ಲದೇ ಒಂದು ಹೈಟೆಕ್‌ ಕ್ಯಾಂಟೀನ್‌ ವ್ಯವಸ್ಥೆ ಇದ್ದು, ವಿಶಾಲವಾದ ಹಾಲ್‌, ಪ್ರತ್ಯೇಕವಾದ ಫ್ಯಾಮಿಲಿ ರೂಮ್‌ ಇತ್ಯಾದಿ ವ್ಯವಸ್ಥೆಯಿದೆ. ಪ್ರಥಮ ಮಾಳಿಗೆಯಲ್ಲಿ ಎರಡು ಹಾಲ್‌ ಹಾಗೂ ವಾಣಿಜ್ಯ ಮಳಿಗೆಗಳಿದ್ದು, ಈಗಾಗಲೇ ಈ ಟೆಂಡರ್‌ ಮೂಲಕ ಹಲವರು ಅಂಗಡಿ ಮಳಿಗೆಗಳನ್ನು ಪಡೆದುಕೊಂಡಿದ್ದರೆ, ಇನ್ನೂ ಕೆಲವು ಖಾಲಿಯಾಗಿವೆ ಎನ್ನಲಾಗಿದೆ.

ಮಾಳಿಗೆಯಲ್ಲಿ ಮಾಲ್‌ ನಮೂನೆಯ ಬೃಹತ್‌ ಅಂಗಡಿ ಮಾಡಲುಅವಕಾಶವಿದ್ದು, ಬ್ಯಾಂಕ್‌ ಶಾಖೆ ಮಾಡಲೂ ಅನುಕೂಲವಿದೆ ಎನ್ನಲಾಗಿದೆ. ಭಟ್ಕಳದ ಹಳೇ ಬಸ್‌ ನಿಲ್ದಾಣದ ಜಾಗಾ ಕೂಡಾ ದೊಡ್ಡದಿದ್ದು, ಅದನ್ನು ಕೂಡಾ ಬಸ್‌ ನಿಲ್ದಾಣಕ್ಕೆ ಬಳಸಿಕೊಳ್ಳಲು ಯೋಚಿಸಲಾಗಿದ್ದರೂ ಹಣ ಮಂಜೂರಿಯಾಗಬೇಕಾಗಿದೆ.ಈಗಿರುವ ಬಸ್‌ ನಿಲ್ದಾಣದ ಜಾಗ ಪ್ರಸ್ತುತಖಾಲಿಯಾಗಿರಲಿದ್ದು, ಅಲ್ಲಿ ಕೆ.ಎಸ್‌.ಆರ್‌.ಟಿ.ಸಿ. ವತಿಯಿಂದ ಪಾರ್ಕಿಂಗ್‌ ಜಾಗಾ ಮಾಡಿ ಟೆಂಡರ್‌ ಕರೆದರೆ ಇಲಾಖೆಗೂ ಆದಾಯ ಹಾಗೂ ವಾಹನ ನಿಲ್ಲಿಸಿ ಬೇರೆ ಊರಿಗೆ ಹೋಗುವವರಿಗೂ ಅನುಕೂಲವಾಗುವುದು. ಅಲ್ಲದೇ ಇಲಾಖೆಗೂ ಕೂಡಾ ಆದಾಯ ಬರುವುದು. ಮುಂದೆ ಬಸ್‌ ನಿಲ್ದಾಣಕ್ಕೆ ಅಗತ್ಯವಿರುವಷ್ಟು ಜಾಗಾವನ್ನು ಬಳಸಿಕೊಂಡು ಉಳಿದ ಜಾಗಾದಲ್ಲಿ ವಾಣಿಜ್ಯ ಸಂಕೀರ್ಣ ಮಾಡಿದರೆ ಅತ್ಯಂತ ಅನುಕೂಲವಾಗುವುದು.

ಭಟ್ಕಳ ಬಸ್‌ ನಿಲ್ದಾಣದ ಸಿವಿಲ್‌ ಕಾಮಗಾರಿಯು ಉತ್ತಮವಾಗಿ ಮುಕ್ತಾಯವಾಗಿದ್ದು ಉದ್ಘಾಟನೆಗೆ ಸಜ್ಜಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನೀತಿ ಸಂಹಿತೆ ಮುಗಿದ ನಂತರ ಶಾಸಕರು, ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಉದ್ಘಾಟನಾ ದಿನಾಂಕ ನಿಗದಿಗೊಳಿಸಲಾಗುವುದು.  -ವಿವೇಕಾನಂದ ಹೆಗಡೆ, ಸಾರಿಗೆ ಜಿಲ್ಲಾಧಿಕಾರಿ, ಶಿರಸಿ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.