ಯಕ್ಷಗಾನ ಅಕಾಡೆಮಿಗೆ ಹೆಚ್ಚುವರಿ ಪ್ರಶಸ್ತಿ ಭಾಗ್ಯ


Team Udayavani, Jan 31, 2019, 10:18 AM IST

31-january-22.jpg

ಶಿರಸಿ: ಬಯಲಾಟದಿಂದ ಪ್ರತ್ಯೇಕಗೊಂಡ ಯಕ್ಷಗಾನ ಅಕಾಡೆಮಿಗೆ ವರ್ಷ ತುಂಬಿದ ಸಂಭ್ರಮದಲ್ಲೇ ಇನ್ನೊಂದು ಭಾಗ್ಯ ಸಿಕ್ಕಿದೆ. ಆರೇಳು ತಿಂಗಳಿನಿಂದ ಅನ್ಯ ಕಾರಣದಿಂದಲೇ ಅನುಮೋದನೆಗೆ ವಿಳಂಬ ಆಗುತ್ತಿದ್ದ ಹೆಚ್ಚುವರಿ ‘ಪ್ರಶಸ್ತಿ’ ಭಾಗ್ಯಕ್ಕೆ ಸರ್ಕಾರ ಅಂತೂ ಅಸ್ತು ಹೇಳಿದೆ.

ಸಾವಿರಾರು ಅರ್ಹ ಕಲಾವಿದರು ಇನ್ನೂ ಸರ್ಕಾರದಿಂದ ಗುರುತಿಸಲ್ಪಡದೇ ಇರುವ ವೇಳೆಯಲ್ಲಿ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಇದ್ದ ಪ್ರಶಸ್ತಿ ಸಂಖ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದು ಹರ್ಷಕ್ಕೆ ಕಾರಣಾಗಿದೆ. ಇನ್ನು ಅಕಾಡೆಮಿ ನೀಡಲಿರುವ ಪ್ರಶಸ್ತಿಗೆ ಯಕ್ಷಸಿರಿ ಎಂದೂ ನಾಮಾಂಕಿತಗೊಂಡಿದೆ.

ಕರ್ನಾಟಕ ಸರ್ಕಾರವು ಯಕ್ಷಗಾನ ಅಕಾಡೆಮಿಗೆ ಕೇವಲ ಐದು ಅಕಾಡೆಮಿ ಪ್ರಶಸ್ತಿ ಹಾಗೂ ಐದು ಗೌರವ ಪ್ರಶಸ್ತಿಗೆ ಅನುಮತಿ ನೀಡಿತ್ತು. ಇದರ ಹೊರತಾಗಿ ಪಾರ್ತಿಸುಬ್ಬ ಅವರ ಹೆಸರಿನಲ್ಲಿ ನೀಡಲಾಗುವ ಸಾಧಕ ಕಲಾವಿದರಿಗೆ ಪ್ರಶಸ್ತಿ, ಪುಸ್ತಕ ಪ್ರಶಸ್ತಿಗಳು ಸೇರಿದ್ದವು. ಬಯಲಾಟ ಯಕ್ಷಗಾನ ಅಕಾಡೆಮಿ ವಿಭಾಗ ಆಗುವಾಗ ಇದ್ದ ಪ್ರಶಸ್ತಿ ಸಂಖ್ಯೆಯನ್ನೂ ಸರ್ಕಾರ ವಿಭಾಗಿಸಿ ಅಕಾಡೆಮಿ ವಿಂಗಡಿಸಿತ್ತು. ಆದರೆ, ಈ ಪ್ರಶಸ್ತಿ ಸಂಖ್ಯೆ ಕಲಾವಿದರ ಸಂಖ್ಯೆಯಲ್ಲಿ ಹಾಗೂ ಕಲಾ ಪ್ರಕಾರದ ಹಿನ್ನೆಲೆಯಲ್ಲಿ ಸಾಕಷ್ಟು ವಿಭಾಗಗಳು ಇದ್ದವು. ಈ ಕಾರಣದಿಂದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗಡೆ ಪ್ರಶಸ್ತಿ ಸಂಖ್ಯೆ ಹೆಚ್ಚಳ ಮಾಡುವಂತೆ ಹಾಗೂ ಅಕಾಡೆಮಿಗೆ ನೀಡುವ ಅನುದಾನದಲ್ಲೇ ನಿರ್ವಹಣೆ ಮಾಡುವ ಭರವಸೆ ನೀಡಿ ಪ್ರಸ್ತಾವನೆ ಸಲ್ಲಿಸಿದ್ದರು.

ಅಂತೂ ಕೂಡಿ ಬಂತು: ಯಕ್ಷಗಾನ ಅಕಾಡೆಮಿಗೆ ಸಂಖ್ಯಾ ಕೊರತೆಯಿಂದ ತಲೆಬಿಸಿ ಆಗಿತ್ತು. ಮೂಡಲಪಾಯ, ತೆಂಕು, ಬಡಗು, ಬಡಾಬಡಗು, ತಾಳಮದ್ದಲೆ, ಹಿಮ್ಮೇಳ, ಮುಮ್ಮೇಳ ಎಲ್ಲ ಸೇರಿದರೆ ಅರ್ಹ ಕಲಾವಿದರ ಸಂಖ್ಯೆಯೇ ಇನ್ನೂ ಹತ್ತು ವರ್ಷ ನೂರರಂತೆ ಪ್ರಶಸ್ತಿ ಕೊಟ್ಟರೂ ಸಾಲದು. ಬದುಕನ್ನೇ ಕಲೆಗಾಗಿ ಮೀಸಲಿಟ್ಟವರಿಗೆ ಕನಿಷ್ಟ ಸರ್ಕಾರದ ಗೌರವ ಸಲ್ಲಬೇಕು ಎಂಬುದು ಅಕಾಡೆಮಿ ಅಧ್ಯಕ್ಷರ ಆಶಯವಾಗಿತ್ತು.

ಈ ನಡುವೆ ಕಳೆದ ಆರು ತಿಂಗಳ ಹಿಂದೆಯೇ 2017ನೇ ಸಾಲಿನ ಪ್ರಶಸ್ತಿ ಪ್ರಕಟಿಸಿತು. 2018ರ ಪ್ರಶಸ್ತಿ ಪ್ರಕಟಣೆಗೆ ಈ ಪ್ರಸ್ತಾವನೆಯೂ ಸೇರಲಿ ಎಂಬ ಆಶಯದಲ್ಲಿ ವಿಳಂಬ ಆಗಿತ್ತು. ಇದೀಗ ಸರ್ಕಾರ ಯಕ್ಷಸಿರಿ ಹೆಸರಿನಲ್ಲಿ ಪ್ರಶಸ್ತಿ ನೀಡುವಂತೆ ಆದೇಶ ಸಂಖ್ಯೆ ಕಸಂವಾ 479 ಕಸಧ 2018 ಬೆಂಗಳೂರು (25-01-2019) ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಪಿ.ಎಸ್‌. ಮಾಲತಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ನೂತನ ಆದೇಶ ಪ್ರಕಾರ ಇನ್ನು ಅಕಾಡೆಮಿಯು ಮೊದಲಿನ ಐದಕ್ಕೆ ಐದು ಸೇರಿಸಿ ಅಂತೂ 10 ಪ್ರಶಸ್ತಿಗಳನ್ನು 25 ಸಾವಿರ ರೂ. ಮೊತ್ತದ ಯಕ್ಷಸಿರಿ ಎಂದೂ ಹಾಗೂ 50 ಸಾವಿರ ರೂ. ಮೊತ್ತದ ಐದು ಗೌರವ ಪ್ರಶಸ್ತಿ ಎಂದೂ ಪಾರ್ತಿಸುಬ್ಬ ಹಾಗೂ ಪುಸ್ತಕ ಪ್ರಶಸ್ತಿಗಳನ್ನೂ ಅಕಾಡೆಮಿ ಪ್ರದಾನ ಮಾಡಲಿದೆ. ‘ಯಕ್ಷಗಾನ ಪ್ರಶಸ್ತಿಗೆ ಸಂಖ್ಯಾ ಗ್ರಹಣ’ ಎಂದು ಡಿ.14ರಂದು ‘ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಇದೀಗ ಪ್ರಶಸ್ತಿ ಸಂಖ್ಯೆ ಹೆಚ್ಚಳ ಮಾಡುವ ಮೂಲಕ ಸರ್ಕಾರ ಧನಾತ್ಮಕ ನಿಲುವು ತಳೆದಿದೆ.

ಸ್ಥಳ ಬದಲು?
ಈ ಮೊದಲು ನಿಗದಿಯಾಗಿದ್ದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದ ಸ್ಥಳವನ್ನು ಉಡುಪಿಯ ಬದಲು ಶಿವಮೊಗ್ಗದಲ್ಲಿ ನಡೆಸುವ ಸಿದ್ಧತೆ ನಡೆದಿದೆ. ಫೆಬ್ರವರಿ ಮಾಸಾಂತ್ಯಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮೂಲವೊಂದು ದೃಢಪಡಿಸಿದೆ.

ಯಕ್ಷಗಾನ ಅಕಾಡೆಮಿ ಪ್ರಸ್ತಾವನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅನುಮತಿ ನೀಡಿದ್ದು ಹರ್ಷ ತಂದಿದೆ.
•ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌
 ಅಧ್ಯಕ್ಷರು ಯಕ್ಷಗಾನ ಅಕಾಡೆಮಿ

ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.