ಶರಾವತಿ ಉಳಿವಿಗೆ ನಾಡಿದ್ದು ಹೊನ್ನಾವರ ಬಂದ್‌


Team Udayavani, Jul 8, 2019, 11:44 AM IST

uk-tdy-3..

ಹೊನ್ನಾವರ: ಶರಾವತಿ ನದಿ ರಕ್ಷಣೆ ಸಂಬಂಧ ರೋಟರಿ ಭವನದಲ್ಲಿ ಸಭೆ ನಡೆಯಿತು.

ಹೊನ್ನಾವರ: ಶರಾವತಿ ಉಳಿವಿಗಾಗಿ ಮೊದಲ ಹಂತದ ಹೋರಾಟಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಬೆಂಗಳೂರಿಗೆ ಶರಾವತಿ ನೀರು ಒಯ್ಯುವ ಯೋಜನೆ ಕೈ ಬಿಡುವಂತೆ ಆಗ್ರಹಿಸಿ ಜು. 10ರಂದು ಹೊನ್ನಾವರ ಬಂದ್‌ಗೆ ಕರೆ ನೀಡಲಾಗಿದೆ.

ಶರಾವತಿ ನೀರನ್ನು ರಾಜ್ಯದ ರಾಜಧಾನಿ ಬೆಂಗಳೂರಿಗೆ ಕೊಂಡೊಯ್ಯುವ ಕುರಿತು ಇತ್ತೀಚೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಶಿವಮೊಗ್ಗದ ಸಾಗರದಲ್ಲಿ ವಿವಿಧ ಸಂಘಟನೆಯವರು ನಡೆಸಿದ ಬೃಹತ್‌ ರ್ಯಾಲಿಯ ಬಳಿಕ ಹೊನ್ನಾವರದಲ್ಲಿಯೂ ಜೀವನದಿ ಶರಾವತಿ ಹೋರಾಟ ಸಮಿತಿ ರಚಿಸಿಕೊಳ್ಳಲಾಯಿತು. ನೆರೆಯ ಶಿವಮೊಗ್ಗದವರು ಇಡೀ ಜಿಲ್ಲೆಯ ಬಂದ್‌ ನಡೆಸಲು ಕರೆ ನೀಡಿದ ಬೆನ್ನಲ್ಲೇ ತಾಲೂಕಿನ ಸಮಿತಿಯಿಂದ ಹೊನ್ನಾವರ ಸ್ವಯಂ ಘೋಷಿತ ಬಂದ್‌ ನಡೆಸಿ ತಹಶೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ರೋಟರಿ ಭವನದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಸಭೆ ಬಳಿಕ ಮಾಧ್ಯಮದವರೊಂದಿಗೆ ಶಿವಮೊಗ್ಗ ನದಿ ಹೋರಾಟ ಸಮಿತಿ ಸಂಚಾಲಕರಾದ ಜಿ.ಪಿ. ರಾಘವೇಂದ್ರ ಮಾತನಾಡಿ, ಸರ್ಕಾರದ ಈ ನಿರ್ಧಾರ ತಪ್ಪಾಗಿದೆ. ಯೋಜನೆಯು ಇಡೀ ಶಿವಮೊಗ್ಗ ಹಾಗೂ ಹೊನ್ನಾವರಕ್ಕೆ ಮಾರಕವಾಗಿದೆ. ಇಲ್ಲಿಯ ಅರಣ್ಯ ಸಂಪತ್ತಿನ ಮೇಲೆ ಪರಿಣಾಮ ಬೀರುತ್ತದೆ. ಪ್ರಮುಖ ಯಾತ್ರಾ ಸ್ಥಳವಾದ ಇಡಗುಂಜಿ, ಮುರ್ಡೇಶ್ವರಕ್ಕೆ ಇದೇ ನದಿ ನೀರು ಒಯ್ಯುವುದರಿಂದ ಆ ಭಾಗದ ಪ್ರವಾಸಿಗರಿಗೆ ಸಮಸ್ಯೆ ಆಗುತ್ತದೆ. ಈ ಭಾಗದ ತೋಟ-ಗದ್ದೆಗೆ ಉಪ್ಪು ನೀರು ನುಗ್ಗುವುದರಿಂದ ಬೆಳೆ ನೆಲ ಕಚ್ಚಲಿದೆ. ಇದೆಲ್ಲವನ್ನು ಗಮನಿಸಿ ಸರ್ಕಾರ ನಿರ್ಣಯವನ್ನು ವಾಪಸ್‌ ಪಡೆಯಲು ವಿವಿಧ ರೀತಿಯ ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.

ತಾಲೂಕು ಹೋರಾಟ ಸಮಿತಿ ಸಂಚಾಲಕ ಕೇಶವ ನಾಯ್ಕ ಬಳ್ಕೂರ್‌ ಮಾತನಾಡಿ, ಜು. 10ರಂದು ಪಟ್ಟಣ ವ್ಯಾಪ್ತಿಯಲ್ಲಿ ಸ್ವಯಂಪ್ರೇರಿತವಾಗಿ ಬಂದ್‌ ಮಾಡಲು ನಿಶ್ಚಯಿಸಿದ್ದು ಯಾವುದೇ ಒತ್ತಾಯವಿಲ್ಲ. ಜೀವನದಿ ಶರಾವತಿ ಉಳಿವಿಗಾಗಿ ಎಲ್ಲರ ಸಹಕಾರ ಅಗತ್ಯ. ಆ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೈ ಜೋಡಿಸುತ್ತಾರೆ ಎನ್ನುವ ಭರವಸೆ ಇದೆ. ಶಾಂತಿಯುತವಾಗಿ ಮೆರವಣಿಗೆ ನಡೆಸಿ ತಹಶೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಗುವುದು. ಇಂದು ನಡೆದ ಸಭೆಯಲ್ಲಿ ಈ ಕುರಿತು ಒಕ್ಕೊರಲಿನಿಂದ ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಸೀಮಾ ಮುಖ್ಯಪ್ರಾಣ ದೇವಾಲಯದ ಅರ್ಚಕರಾದ ಸೂರಾಲು ಚಂದ್ರಶೇಖರ್‌ ಭಟ್, ಕಾನೂನು ಸಲಹೆಗಾರ ಎಂ.ಎನ್‌. ಸುಬ್ರಹ್ಮಣ್ಯ, ದಿನೇಶ ಕಾಮತ್‌, ಮಹೇಶ ಕಲ್ಯಾಣಪುರ, ತಾಪಂ ಸದಸ್ಯ ಆರ್‌.ಪಿ. ನಾಯ್ಕ, ಪಪಂ ಸದಸ್ಯರಾದ ಶಿವರಾಜ ಮೇಸ್ತ, ನಾಗರಾಜ ಭಟ್, ಸುಜಾತ ಮೇಸ್ತ, ವಿವಿಧ ಸಂಘಟನೆ ಪ್ರಮುಖರಾದ ಎಚ್.ಆರ್‌. ಗಣೇಶ, ಹರಿಯಪ್ಪ ನಾಯ್ಕ, ರಘು ಪೈ, ಸಂಜು ಶೇಟ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.